AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಮತ್ತಿನಲ್ಲಿ 61 ವರ್ಷದ ಗಂಡನ ಮೈತುಂಬ ಕಚ್ಚಿ ಆ್ಯಸಿಡ್ ಎರಚಿದ ಪತ್ನಿ!

ಕುಡಿದ ಅಮಲಿನಲ್ಲಿ ಗಂಡ ಹೆಂಡತಿಗೆ ಹೊಡೆಯುವುದು, ಹಿಂಸೆ ಕೊಡುವುದು ಸಾಮಾನ್ಯ. ಆದರೆ, ಇಲ್ಲೊಬ್ಬಳು ಮಹಿಳೆ ತಾನೇ ಕಂಠಪೂರ್ತಿ ಕುಡಿದು ಗಂಡನಿಗೆ ಇನ್ನಿಲ್ಲದಷ್ಟು ಹಿಂಸೆ ನೀಡಿದ್ದಾಳೆ. ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ 45 ವರ್ಷದ ಮಹಿಳೆ ತನ್ನ ಪತಿಯ ದೇಹದ 12 ಕಡೆ ಕಚ್ಚಿದ್ದಾಳೆ. ಅಷ್ಟೇ ಅಲ್ಲ ಆತನ ಮೇಲೆ ಆ್ಯಸಿಡ್ ಎರಚಿದ್ದಾಳೆ. ನನ್ನ ಪತ್ನಿ ಸದಾ ಕುಡಿದು ತನಗೆ ಚಿತ್ರಹಿಂಸೆ ಕೊಡುತ್ತಾಳೆ ಎಂದು ನೊಂದ ಪತಿ ಪೊಲೀಸರಿಗೆ ದೂರು ನೀಡಿದ್ದಾನೆ.

ಕುಡಿದ ಮತ್ತಿನಲ್ಲಿ 61 ವರ್ಷದ ಗಂಡನ ಮೈತುಂಬ ಕಚ್ಚಿ ಆ್ಯಸಿಡ್ ಎರಚಿದ ಪತ್ನಿ!
Husband Wife
ಸುಷ್ಮಾ ಚಕ್ರೆ
|

Updated on:Jan 04, 2025 | 9:46 PM

Share

ಭೋಪಾಲ್: ಗಂಡ ದಿನವೂ ಕುಡಿದು ಬಂದು ಹೊಡೆಯುತ್ತಾನೆ ಎಂದು ಹೆಂಡತಿ ಪೊಲೀಸರಿಗೆ ದೂರು ನೀಡುವುದು ಸಾಮಾನ್ಯ. ಆದರೆ, ಇಲ್ಲೊಬ್ಬ ವ್ಯಕ್ತಿ ತನ್ನ ಕುಡುಕಿ ಹೆಂಡತಿಯ ಕಾಟ ತಾಳಲಾರದೆ ಪೊಲೀಸರ ಮೊರೆ ಹೋಗಿದ್ದಾರೆ. ಮಧ್ಯಪ್ರದೇಶದ ಭೋಪಾಲ್ ನಗರದ ನಿಶಾತ್ಪುರದ ವಿಶ್ವಕರ್ಮ ನಗರದಲ್ಲಿ ಬುಧವಾರ ಬೆಳಗ್ಗೆ 45 ವರ್ಷದ ಮಹಿಳೆಯೊಬ್ಬರು 61 ವರ್ಷದ ತನ್ನ ಪತಿ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಆ ಮಹಿಳೆ ತನ್ನ ಪತಿಯನ್ನು ಸುಮಾರು 12 ಸ್ಥಳಗಳಲ್ಲಿ ಕಚ್ಚಿ ಗಾಯಗೊಳಿಸಿದ್ದು, ತನ್ನ ಉಗುರುಗಳಿಂದ ಪರಚಿ ಹಿಂಸಿಸಿದ್ದಾರೆ. ಅಷ್ಟೇ ಅಲ್ಲದೆ ಅವನ ಮೇಲೆ ಆಸಿಡ್ ಕೂಡ ಎರಚಿದ್ದಾರೆ. ಆಸಿಡ್ ಆತನಿಗೆ ತಾಗದಿದ್ದರೂ, ಅವರ ಬಟ್ಟೆಗಳಿಗೆ ಆ್ಯಸಿಡ್ ತಾಗಿ ಹಾಳಾಗಿದೆ. ಪೊಲೀಸರು ಆ ಮಹಿಳೆಯನ್ನು ಬಂಧಿಸಿದ್ದಾರೆ. ಹಲ್ಲೆ ಹಾಗೂ ಆಸಿಡ್ ದಾಳಿ ಯತ್ನ ಪ್ರಕರಣ ದಾಖಲಾಗಿದೆ.

ವಿಶ್ವಕರ್ಮ ನಗರದಲ್ಲಿ ವಾಸವಾಗಿರುವ ಟ್ರಕ್ ಚಾಲಕ 61 ವರ್ಷದ ನಾರಾಯಣ ಲೋಧಿ ತನ್ನ ಎರಡನೇ ಪತ್ನಿ 45 ವರ್ಷದ ದುರ್ಗಾ ಲೋಧಿಯೊಂದಿಗೆ ವಾಸವಾಗಿದ್ದರು. ದುರ್ಗಾಗೆ ಮೊದಲ ಗಂಡನಿಂದ 12 ಮತ್ತು 14 ವರ್ಷದ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ನಾರಾಯಣ ತಮ್ಮ ವೃತ್ತಿಯ ಕಾರಣದಿಂದ ವಾರಕ್ಕೆ ಒಂದು ಅಥವಾ ಎರಡು ಬಾರಿ ಮಾತ್ರ ಮನೆಗೆ ಬರುತ್ತಿದ್ದರು.

ಇದನ್ನೂ ಓದಿ: Child Adoption: ಭಾರತದಲ್ಲಿ ಸಲಿಂಗಕಾಮಿ ದಂಪತಿ ಮಗುವನ್ನು ದತ್ತು ತೆಗೆದುಕೊಳ್ಳಬಹುದೇ?

ಬುಧವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ನಾರಾಯಣ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಮನೆಗೆ ಮರಳಿದ್ದಾರೆ. ಆಗ ಮನೆಯಲ್ಲಿ ಕೆಲವು ವಸ್ತುಗಳು ಕಾಣೆಯಾಗಿರುವ ಬಗ್ಗೆ ಅವರು ಪತ್ನಿಯೊಂದಿಗೆ ಜಗಳವಾಡಿದ್ದಾರೆ. ವಾಗ್ವಾದ ಎಷ್ಟರಮಟ್ಟಿಗೆ ಏರಿತೆಂದರೆ, ಮದ್ಯವ್ಯಸನಿಯಾಗಿದ್ದ ದುರ್ಗಾ ಆತನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿ, ಹಲವೆಡೆ ಕಚ್ಚಿ, ಪರಚಿದ್ದಾರೆ. ನಾರಾಯಣ ಓಡಿಹೋಗಲು ಯತ್ನಿಸಿದ್ದು, ದುರ್ಗಾ ಆತನ ಮೇಲೆ ಆಸಿಡ್ ಎರಚಿದ್ದಾಳೆ. ಅದೃಷ್ಟವಶಾತ್ ಆ್ಯಸಿಡ್ ನಾರಾಯಣ ಅವರ ಮೈಮೇಲೆ ಬೀಳದೆ ಬಟ್ಟೆ ಮೇಲೆ ಬಿದ್ದಿದೆ. ಇದರಿಂದ ಅವರ ಬಟ್ಟೆ ಸ್ವಲ್ಪ ಸುಟ್ಟಿದೆ.

ಇದನ್ನೂ ಓದಿ: ಕೇರಳ, ಮಣಿಪುರ, ಬಿಹಾರ, ಮಿಜೋರಾಂ, ಒಡಿಶಾಕ್ಕೆ ನೂತನ ರಾಜ್ಯಪಾಲರ ನೇಮಕ; ರಾಷ್ಟ್ರಪತಿ ಆದೇಶ

ದುರ್ಗಾಗೆ ಕುಡಿತದ ಚಟವಿದೆ ಎಂದು ನಾರಾಯಣ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಈ ಹಿಂದೆಯೂ ಹಲವು ಬಾರಿ ಆಕೆ ತನ್ನ ಮೇಲೆ ಹಲ್ಲೆ ನಡೆಸಿದ್ದಾಳೆ ಎಂದಿದ್ದಾರೆ. ದುರ್ಗಾ ವಿರುದ್ಧ ಹಲ್ಲೆ ಹಾಗೂ ಆಸಿಡ್ ದಾಳಿ ಯತ್ನ ಪ್ರಕರಣ ದಾಖಲಾಗಿದೆ. ಹೀಗಾಗಿ, ಆಕೆಯನ್ನು ಬಂಧಿಸಲಾಗಿದೆ. ಈ ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:40 pm, Sat, 4 January 25

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!