ನನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಿಯಾ ಎಂದು ಶಂಕಿಸಿದ ಅಣ್ಣನನ್ನು ಕೊಂದ ತಮ್ಮ

ನನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಿಯಾ ಎಂದು ಶಂಕಿಸಿದ ಅಣ್ಣನನ್ನು ತಮ್ಮ ಕೊಲೆ ಮಾಡಿರುವ ಘಟನೆ ಚಿಕ್ಕಜಾಲ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ (ಜು.28)ರ ತಡರಾತ್ರಿ ನಡೆದಿದೆ.

ನನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಿಯಾ ಎಂದು ಶಂಕಿಸಿದ ಅಣ್ಣನನ್ನು ಕೊಂದ ತಮ್ಮ
ಮೃತ ಸಂದೀಪ್​ (ಎಡಚಿತ್ರಿ) ಆರೋಪಿ ಶುಬೋದ್​ (ಬಲಚಿತ್ರ)
Follow us
| Updated By: ವಿವೇಕ ಬಿರಾದಾರ

Updated on: Aug 01, 2023 | 8:06 AM

ಬೆಂಗಳೂರು: ನನ್ನ ಪತ್ನಿಯೊಂದಿಗೆ (Wife) ಅಕ್ರಮ ಸಂಬಂಧ ಹೊಂದಿದ್ದಿಯಾ ಎಂದು ಶಂಕಿಸಿದ ಅಣ್ಣನನ್ನು ತಮ್ಮ ಕೊಲೆ ಮಾಡಿರುವ ಘಟನೆ ಚಿಕ್ಕಜಾಲ ಪೊಲೀಸ್​ (Police) ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ (ಜು.28)ರ ತಡರಾತ್ರಿ ನಡೆದಿದೆ. ಸಂದೀಪ್ ಕುಮಾರ್ ಕೊಲೆಯಾದ ವ್ಯಕ್ತಿ. ಸಹೋದರ ಶುಭೋದ್ ಮಂಡಲ್ ಕೊಲೆ ಆರೋಪಿ. ಇವರಿಬ್ಬರು ಬಿಹಾರ ಮೂಲದವರಾಗಿದ್ದು, ಕೆಲಸಕ್ಕಾಗಿ ಬೆಂಗಳೂರಿಗೆ (Bengaluru) ಬಂದಿರುತ್ತಾರೆ. ಸಂದೀಪ್ ಕೆಲಸಕ್ಕಾಗಿ ಹಲವು ವರ್ಷಗಳ ಹಿಂದೆಯೇ ಪತ್ನಿಯನ್ನು ಊರಲ್ಲೇ ಬಿಟ್ಟು ಬೆಂಗಳೂರಿಗೆ ಬಂದು ನೆಲೆಸಿದ್ದನು.

ನಗರದ ಚಿಕ್ಕಜಾಲದಲ್ಲಿ ರೂಂ ಮಾಡಿಕೊಂಡು ಸ್ನೇಹಿತರ ಜೊತೆ ವಾಸವಾಗಿದ್ದನು. ಕಳೆದ ಮೂರು ತಿಂಗಳ ಹಿಂದಷ್ಟೇ ಸಹೋದರ ಶುಭೋದ್ ಮಂಡಲ್ ಕೂಡ ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದನು. ಸಹೋದರನಿಗಾಗಿ ಸಂದೀಪ ಕೆಲಸ ಹುಡುಕುತ್ತಿದ್ದನು. ಈ ಮಧ್ಯೆ ಸಂದೀಪ್ ಪತ್ನಿ ಜೊತೆ ಶುಬೋದ್ ಹೆಚ್ಚು ಸಂಪರ್ಕ ಹೊಂದಿದ್ದು, ಸದಾ ಅತ್ತಿಗೆಯೊಂದಿಗೆ ಫೋನ್​​ಲ್ಲಿ ಮಾತನಾಡುತಿದ್ದನು. ಇದನ್ನು ಗಮನಿಸಿದ ಸಂದೀಪ್​ಗೆ ಈತ ನನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಶಂಕೆ ಮೂಡಿತ್ತು.

ಇದನ್ನೂ ಓದಿ: ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕ ಯುವಕನ ಪ್ರೀತಿ ಬಲೆಗೆ ಬಿದ್ದ ಯುವತಿ: ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರ 

ಶುಕ್ರವಾರ ರಾತ್ರಿ ರೂಂನಲ್ಲಿ ಸಂದೀಪ್​ ಹಾಗೂ ಶುಬೋದ್​ ಮದ್ಯ ಸೇವಿಸುವಾಗ ಇದೇ ವಿಚಾರಕ್ಕೆ ಜಗಳ ನಡೆದಿದೆ. ಜಗಳದ ನಂತರ ಇಬ್ಬರು ಶಾಂತವಾಗಿದ್ದು, ಸಂದೀಪ್​ ನಶೆಯಲ್ಲೇ ಮಲಗಿದ್ದಾನೆ. ಈ ವೇಳೆ ಸುಬೋದ್​ ಸಂದೀಪ್​ ಮೇಲೆ ಹಲ್ಲೆ ಮಾಡಿ ಕೊಲೆಗೈದು ಪರಾರಿಯಾಗಿದ್ದಾನೆ. 24 ಗಂಟೆ ಬಳಿಕ ಅಂದರೇ ಶನಿವಾರ ರಾತ್ರಿ ಸಂದೀಪ್​ ಸ್ನೇಹಿತ ರೂಂಗೆ ಬಂದು ನೋಡಿದಾಗ, ಸಂದೀಪ ಸಾವನಪ್ಪಿರುವುದು ತಿಳಿದಿದೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಚಿಕ್ಕಜಾಲ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸದ್ಯ ನಾಪತ್ತೆಯಾಗಿದ್ದ ಆರೋಪಿ ಶುಬೋದ್ ಮಂಡಲ್​ನನ್ನು ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ರಸ್ತೆಯಲ್ಲಿ ತಳ್ಳುಗಾಡಿ ಇಟ್ಟಿದ್ದಕ್ಕೆ ಗಲಾಟೆ: ವ್ಯಾಪಾರಿ ಮೇಲೆ ಪಿಸಿ ಹಲ್ಲೆ
ರಸ್ತೆಯಲ್ಲಿ ತಳ್ಳುಗಾಡಿ ಇಟ್ಟಿದ್ದಕ್ಕೆ ಗಲಾಟೆ: ವ್ಯಾಪಾರಿ ಮೇಲೆ ಪಿಸಿ ಹಲ್ಲೆ
ಮೆಟ್ರೋದಲ್ಲಿ ಪರ್ಸ್ ಕದಿಯುವಾಗ ಸಿಕ್ಕಿಬಿದ್ದ ಕಳ್ಳನಿಗೆ ಥಳಿಸಿದ ಪ್ರಯಾಣಿಕರು
ಮೆಟ್ರೋದಲ್ಲಿ ಪರ್ಸ್ ಕದಿಯುವಾಗ ಸಿಕ್ಕಿಬಿದ್ದ ಕಳ್ಳನಿಗೆ ಥಳಿಸಿದ ಪ್ರಯಾಣಿಕರು
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನಡುರಸ್ತೆಯಲ್ಲೇ ಚೂಪಾದ ಆಯುಧದಿಂದ ಥಳಿಸಿ ಕೊಂದ ಜನರು; ವಿಡಿಯೋ ವೈರಲ್
ನಡುರಸ್ತೆಯಲ್ಲೇ ಚೂಪಾದ ಆಯುಧದಿಂದ ಥಳಿಸಿ ಕೊಂದ ಜನರು; ವಿಡಿಯೋ ವೈರಲ್
ಜು.12ಕ್ಕೆ ದರ್ಶನ್ ನಟನೆಯ ‘ಶಾಸ್ತ್ರಿ’ ಮರು ಬಿಡುಗಡೆ; ಏನಿದು ಪ್ಲ್ಯಾನ್?
ಜು.12ಕ್ಕೆ ದರ್ಶನ್ ನಟನೆಯ ‘ಶಾಸ್ತ್ರಿ’ ಮರು ಬಿಡುಗಡೆ; ಏನಿದು ಪ್ಲ್ಯಾನ್?
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ