Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಿಯಾ ಎಂದು ಶಂಕಿಸಿದ ಅಣ್ಣನನ್ನು ಕೊಂದ ತಮ್ಮ

ನನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಿಯಾ ಎಂದು ಶಂಕಿಸಿದ ಅಣ್ಣನನ್ನು ತಮ್ಮ ಕೊಲೆ ಮಾಡಿರುವ ಘಟನೆ ಚಿಕ್ಕಜಾಲ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ (ಜು.28)ರ ತಡರಾತ್ರಿ ನಡೆದಿದೆ.

ನನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಿಯಾ ಎಂದು ಶಂಕಿಸಿದ ಅಣ್ಣನನ್ನು ಕೊಂದ ತಮ್ಮ
ಮೃತ ಸಂದೀಪ್​ (ಎಡಚಿತ್ರಿ) ಆರೋಪಿ ಶುಬೋದ್​ (ಬಲಚಿತ್ರ)
Follow us
Jagadisha B
| Updated By: ವಿವೇಕ ಬಿರಾದಾರ

Updated on: Aug 01, 2023 | 8:06 AM

ಬೆಂಗಳೂರು: ನನ್ನ ಪತ್ನಿಯೊಂದಿಗೆ (Wife) ಅಕ್ರಮ ಸಂಬಂಧ ಹೊಂದಿದ್ದಿಯಾ ಎಂದು ಶಂಕಿಸಿದ ಅಣ್ಣನನ್ನು ತಮ್ಮ ಕೊಲೆ ಮಾಡಿರುವ ಘಟನೆ ಚಿಕ್ಕಜಾಲ ಪೊಲೀಸ್​ (Police) ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ (ಜು.28)ರ ತಡರಾತ್ರಿ ನಡೆದಿದೆ. ಸಂದೀಪ್ ಕುಮಾರ್ ಕೊಲೆಯಾದ ವ್ಯಕ್ತಿ. ಸಹೋದರ ಶುಭೋದ್ ಮಂಡಲ್ ಕೊಲೆ ಆರೋಪಿ. ಇವರಿಬ್ಬರು ಬಿಹಾರ ಮೂಲದವರಾಗಿದ್ದು, ಕೆಲಸಕ್ಕಾಗಿ ಬೆಂಗಳೂರಿಗೆ (Bengaluru) ಬಂದಿರುತ್ತಾರೆ. ಸಂದೀಪ್ ಕೆಲಸಕ್ಕಾಗಿ ಹಲವು ವರ್ಷಗಳ ಹಿಂದೆಯೇ ಪತ್ನಿಯನ್ನು ಊರಲ್ಲೇ ಬಿಟ್ಟು ಬೆಂಗಳೂರಿಗೆ ಬಂದು ನೆಲೆಸಿದ್ದನು.

ನಗರದ ಚಿಕ್ಕಜಾಲದಲ್ಲಿ ರೂಂ ಮಾಡಿಕೊಂಡು ಸ್ನೇಹಿತರ ಜೊತೆ ವಾಸವಾಗಿದ್ದನು. ಕಳೆದ ಮೂರು ತಿಂಗಳ ಹಿಂದಷ್ಟೇ ಸಹೋದರ ಶುಭೋದ್ ಮಂಡಲ್ ಕೂಡ ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದನು. ಸಹೋದರನಿಗಾಗಿ ಸಂದೀಪ ಕೆಲಸ ಹುಡುಕುತ್ತಿದ್ದನು. ಈ ಮಧ್ಯೆ ಸಂದೀಪ್ ಪತ್ನಿ ಜೊತೆ ಶುಬೋದ್ ಹೆಚ್ಚು ಸಂಪರ್ಕ ಹೊಂದಿದ್ದು, ಸದಾ ಅತ್ತಿಗೆಯೊಂದಿಗೆ ಫೋನ್​​ಲ್ಲಿ ಮಾತನಾಡುತಿದ್ದನು. ಇದನ್ನು ಗಮನಿಸಿದ ಸಂದೀಪ್​ಗೆ ಈತ ನನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಶಂಕೆ ಮೂಡಿತ್ತು.

ಇದನ್ನೂ ಓದಿ: ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕ ಯುವಕನ ಪ್ರೀತಿ ಬಲೆಗೆ ಬಿದ್ದ ಯುವತಿ: ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರ 

ಶುಕ್ರವಾರ ರಾತ್ರಿ ರೂಂನಲ್ಲಿ ಸಂದೀಪ್​ ಹಾಗೂ ಶುಬೋದ್​ ಮದ್ಯ ಸೇವಿಸುವಾಗ ಇದೇ ವಿಚಾರಕ್ಕೆ ಜಗಳ ನಡೆದಿದೆ. ಜಗಳದ ನಂತರ ಇಬ್ಬರು ಶಾಂತವಾಗಿದ್ದು, ಸಂದೀಪ್​ ನಶೆಯಲ್ಲೇ ಮಲಗಿದ್ದಾನೆ. ಈ ವೇಳೆ ಸುಬೋದ್​ ಸಂದೀಪ್​ ಮೇಲೆ ಹಲ್ಲೆ ಮಾಡಿ ಕೊಲೆಗೈದು ಪರಾರಿಯಾಗಿದ್ದಾನೆ. 24 ಗಂಟೆ ಬಳಿಕ ಅಂದರೇ ಶನಿವಾರ ರಾತ್ರಿ ಸಂದೀಪ್​ ಸ್ನೇಹಿತ ರೂಂಗೆ ಬಂದು ನೋಡಿದಾಗ, ಸಂದೀಪ ಸಾವನಪ್ಪಿರುವುದು ತಿಳಿದಿದೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಚಿಕ್ಕಜಾಲ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸದ್ಯ ನಾಪತ್ತೆಯಾಗಿದ್ದ ಆರೋಪಿ ಶುಬೋದ್ ಮಂಡಲ್​ನನ್ನು ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ