AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಿಯಾ ಎಂದು ಶಂಕಿಸಿದ ಅಣ್ಣನನ್ನು ಕೊಂದ ತಮ್ಮ

ನನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಿಯಾ ಎಂದು ಶಂಕಿಸಿದ ಅಣ್ಣನನ್ನು ತಮ್ಮ ಕೊಲೆ ಮಾಡಿರುವ ಘಟನೆ ಚಿಕ್ಕಜಾಲ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ (ಜು.28)ರ ತಡರಾತ್ರಿ ನಡೆದಿದೆ.

ನನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಿಯಾ ಎಂದು ಶಂಕಿಸಿದ ಅಣ್ಣನನ್ನು ಕೊಂದ ತಮ್ಮ
ಮೃತ ಸಂದೀಪ್​ (ಎಡಚಿತ್ರಿ) ಆರೋಪಿ ಶುಬೋದ್​ (ಬಲಚಿತ್ರ)
Jagadisha B
| Edited By: |

Updated on: Aug 01, 2023 | 8:06 AM

Share

ಬೆಂಗಳೂರು: ನನ್ನ ಪತ್ನಿಯೊಂದಿಗೆ (Wife) ಅಕ್ರಮ ಸಂಬಂಧ ಹೊಂದಿದ್ದಿಯಾ ಎಂದು ಶಂಕಿಸಿದ ಅಣ್ಣನನ್ನು ತಮ್ಮ ಕೊಲೆ ಮಾಡಿರುವ ಘಟನೆ ಚಿಕ್ಕಜಾಲ ಪೊಲೀಸ್​ (Police) ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ (ಜು.28)ರ ತಡರಾತ್ರಿ ನಡೆದಿದೆ. ಸಂದೀಪ್ ಕುಮಾರ್ ಕೊಲೆಯಾದ ವ್ಯಕ್ತಿ. ಸಹೋದರ ಶುಭೋದ್ ಮಂಡಲ್ ಕೊಲೆ ಆರೋಪಿ. ಇವರಿಬ್ಬರು ಬಿಹಾರ ಮೂಲದವರಾಗಿದ್ದು, ಕೆಲಸಕ್ಕಾಗಿ ಬೆಂಗಳೂರಿಗೆ (Bengaluru) ಬಂದಿರುತ್ತಾರೆ. ಸಂದೀಪ್ ಕೆಲಸಕ್ಕಾಗಿ ಹಲವು ವರ್ಷಗಳ ಹಿಂದೆಯೇ ಪತ್ನಿಯನ್ನು ಊರಲ್ಲೇ ಬಿಟ್ಟು ಬೆಂಗಳೂರಿಗೆ ಬಂದು ನೆಲೆಸಿದ್ದನು.

ನಗರದ ಚಿಕ್ಕಜಾಲದಲ್ಲಿ ರೂಂ ಮಾಡಿಕೊಂಡು ಸ್ನೇಹಿತರ ಜೊತೆ ವಾಸವಾಗಿದ್ದನು. ಕಳೆದ ಮೂರು ತಿಂಗಳ ಹಿಂದಷ್ಟೇ ಸಹೋದರ ಶುಭೋದ್ ಮಂಡಲ್ ಕೂಡ ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದನು. ಸಹೋದರನಿಗಾಗಿ ಸಂದೀಪ ಕೆಲಸ ಹುಡುಕುತ್ತಿದ್ದನು. ಈ ಮಧ್ಯೆ ಸಂದೀಪ್ ಪತ್ನಿ ಜೊತೆ ಶುಬೋದ್ ಹೆಚ್ಚು ಸಂಪರ್ಕ ಹೊಂದಿದ್ದು, ಸದಾ ಅತ್ತಿಗೆಯೊಂದಿಗೆ ಫೋನ್​​ಲ್ಲಿ ಮಾತನಾಡುತಿದ್ದನು. ಇದನ್ನು ಗಮನಿಸಿದ ಸಂದೀಪ್​ಗೆ ಈತ ನನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಶಂಕೆ ಮೂಡಿತ್ತು.

ಇದನ್ನೂ ಓದಿ: ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕ ಯುವಕನ ಪ್ರೀತಿ ಬಲೆಗೆ ಬಿದ್ದ ಯುವತಿ: ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರ 

ಶುಕ್ರವಾರ ರಾತ್ರಿ ರೂಂನಲ್ಲಿ ಸಂದೀಪ್​ ಹಾಗೂ ಶುಬೋದ್​ ಮದ್ಯ ಸೇವಿಸುವಾಗ ಇದೇ ವಿಚಾರಕ್ಕೆ ಜಗಳ ನಡೆದಿದೆ. ಜಗಳದ ನಂತರ ಇಬ್ಬರು ಶಾಂತವಾಗಿದ್ದು, ಸಂದೀಪ್​ ನಶೆಯಲ್ಲೇ ಮಲಗಿದ್ದಾನೆ. ಈ ವೇಳೆ ಸುಬೋದ್​ ಸಂದೀಪ್​ ಮೇಲೆ ಹಲ್ಲೆ ಮಾಡಿ ಕೊಲೆಗೈದು ಪರಾರಿಯಾಗಿದ್ದಾನೆ. 24 ಗಂಟೆ ಬಳಿಕ ಅಂದರೇ ಶನಿವಾರ ರಾತ್ರಿ ಸಂದೀಪ್​ ಸ್ನೇಹಿತ ರೂಂಗೆ ಬಂದು ನೋಡಿದಾಗ, ಸಂದೀಪ ಸಾವನಪ್ಪಿರುವುದು ತಿಳಿದಿದೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಚಿಕ್ಕಜಾಲ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸದ್ಯ ನಾಪತ್ತೆಯಾಗಿದ್ದ ಆರೋಪಿ ಶುಬೋದ್ ಮಂಡಲ್​ನನ್ನು ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್