ಚಳ್ಳಕೆರೆ: ತಪಾಸಣೆ ವೇಳೆ ನಶೆಯಲ್ಲಿ ಕೊವಿಡ್ ವಾರಿಯರ್ ಮೇಲೆ ಹಲ್ಲೆ

ಚಿತ್ರದುರ್ಗ: ಮದ್ಯದ ನಶೆಯಲ್ಲಿ ಕೊವಿಡ್ ವಾರಿಯರ್ ಮೇಲೆ ಹಲ್ಲೆ ಮಾಡಿರುವ ಘಟನೆ ಚಳ್ಳಕೆರೆ ತಾಲೂಕಿನ ಪಾತಪ್ಪನಗುಡಿ ಚೆಕ್‌ಪೋಸ್ಟ್ ಬಳಿ ನಡೆದಿದೆ. ಆಂಧ್ರ ಗಡಿಯ ಚೆಕ್ ಪೋಸ್ಟ್​ನಲ್ಲಿ ಪರಿಶೀಲನೆ ಮಾಡುತ್ತಿದ್ದ ವೇಳೆ ಕರ್ತವ್ಯ ನಿರತ ಪೇದೆ ಶಿವಣ್ಣ ಮೇಲೆ‌ ಹಲ್ಲೆ ಮಾಡಿದ್ದಾರೆ. ಪರಶುರಾಂಪುರ ಪೊಲೀಸ್​ ಠಾಣೆಯಲ್ಲಿ ಶಿವಣ್ಣ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಿನ್ನೆ ಸಂಜೆ ಚೆಕ್ ಪೋಸ್ಟ್​ನಲ್ಲಿ ಪರಿಶೀಲನೆ ವೇಳೆ ಮದ್ಯದ ಅಮಲಿನಲ್ಲಿ ಆಂಧ್ರದ ಮೂಲದ ಮಂಜು ಎಂಬುವನು ಪೇದೆ ಮೇಲೆ ಹಲ್ಲೆ ಮಾಡಿದ್ದಾನೆ. ಪರಶುರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ […]

ಚಳ್ಳಕೆರೆ: ತಪಾಸಣೆ ವೇಳೆ ನಶೆಯಲ್ಲಿ ಕೊವಿಡ್ ವಾರಿಯರ್ ಮೇಲೆ ಹಲ್ಲೆ
ಸಾಧು ಶ್ರೀನಾಥ್​

Updated on: May 16, 2020 | 10:18 AM

ಚಿತ್ರದುರ್ಗ: ಮದ್ಯದ ನಶೆಯಲ್ಲಿ ಕೊವಿಡ್ ವಾರಿಯರ್ ಮೇಲೆ ಹಲ್ಲೆ ಮಾಡಿರುವ ಘಟನೆ ಚಳ್ಳಕೆರೆ ತಾಲೂಕಿನ ಪಾತಪ್ಪನಗುಡಿ ಚೆಕ್‌ಪೋಸ್ಟ್ ಬಳಿ ನಡೆದಿದೆ. ಆಂಧ್ರ ಗಡಿಯ ಚೆಕ್ ಪೋಸ್ಟ್​ನಲ್ಲಿ ಪರಿಶೀಲನೆ ಮಾಡುತ್ತಿದ್ದ ವೇಳೆ ಕರ್ತವ್ಯ ನಿರತ ಪೇದೆ ಶಿವಣ್ಣ ಮೇಲೆ‌ ಹಲ್ಲೆ ಮಾಡಿದ್ದಾರೆ.

ಪರಶುರಾಂಪುರ ಪೊಲೀಸ್​ ಠಾಣೆಯಲ್ಲಿ ಶಿವಣ್ಣ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಿನ್ನೆ ಸಂಜೆ ಚೆಕ್ ಪೋಸ್ಟ್​ನಲ್ಲಿ ಪರಿಶೀಲನೆ ವೇಳೆ ಮದ್ಯದ ಅಮಲಿನಲ್ಲಿ ಆಂಧ್ರದ ಮೂಲದ ಮಂಜು ಎಂಬುವನು ಪೇದೆ ಮೇಲೆ ಹಲ್ಲೆ ಮಾಡಿದ್ದಾನೆ. ಪರಶುರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೊವಿಡ್ ವಾರಿಯರ್ ಮೇಲಿನ ಹಲ್ಲೆ ವಿಡಿಯೋ ವೈರಲ್ ಆಗಿದೆ.

Published On - 8:26 am, Sat, 16 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us