AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುಕೋಟಿ ವಂಚನೆ ಪ್ರಕರಣ: ಕರಣ್ ಗ್ರೂಪ್ ಬಿಲ್ಡರ್ಸ್ & ಡೆವಲಪರ್ಸ್ ಮುಖ್ಯಸ್ಥನನ್ನು ಬಂಧಿಸಿದ ಇಡಿ

ಬಹುಕೋಟಿ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕರಣ್ ಗ್ರೂಪ್ ಬಿಲ್ಡರ್ಸ್ & ಡೆವಲಪರ್ಸ್ ಮುಖ್ಯಸ್ಥನನ್ನು ಇಡಿ ಬಂಧಿಸಿದೆ.

ಬಹುಕೋಟಿ ವಂಚನೆ ಪ್ರಕರಣ:  ಕರಣ್ ಗ್ರೂಪ್ ಬಿಲ್ಡರ್ಸ್ & ಡೆವಲಪರ್ಸ್ ಮುಖ್ಯಸ್ಥನನ್ನು ಬಂಧಿಸಿದ ಇಡಿ
ಇಡಿ
TV9 Web
| Edited By: |

Updated on:Jan 12, 2023 | 10:46 PM

Share

ಬೆಂಗಳೂರು: 500 ಕೋಟಿ ರೂ.ಗೂ ಅಧಿಕ ಮೊತ್ತದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಕರಣ್ ಗ್ರೂಪ್ ಬಿಲ್ಡರ್ಸ್ & ಡೆವಲಪರ್ಸ್ (karan group builders And developers )ಮುಖ್ಯಸ್ಥ ಮಹೇಶ್ ಬಿ.ಓಜಾ ಎನ್ನುವರನ್ನು ಇಂದು(ಜನವರಿ 12) ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಬಂಧಿಸಿದ್ದಾರೆ. ಮುಂಬೈ ಮೂಲದ ಮಹೇಶ್ ಭೂಪತ್​ ಕುಮಾರ್​ ಓಜಾ ಬಂಧಿತ ಆರೋಪಿ.

ಬಂಧಿತ ಮಹೇಶ್ ಭೂಪತ್​ ಕುಮಾರ್​ ಓಜಾರನ್ನು ಬೆಂಗಳೂರಿನ ವಿಶೇಷ ಪಿಎಂಎಲ್‌ಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಯನ್ನು ಪಿಎಂಎಲ್‌ಎ ವಿಶೇಷ 10 ದಿನಗಳ ಇಡಿ ಕಸ್ಟಡಿಗೆ ನೀಡಿದೆ.

ರಿಯಲ್ ಎಸ್ಟೇಟ್ ಯೋಜನೆಗಳಲ್ಲಿ ಹೂಡಿಕೆಯ ಹೆಸರಿನಲ್ಲಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಓಜಾ ವಿರುದ್ಧ ಕರ್ನಾಟಕದಲ್ಲಿ ಹಲವು ಎಫ್‌ಐಆರ್‌ಗಳನ್ನು ದಾಖಲಿಸಿದ್ದರು. ಅಲ್ಲದೇ ಈ ಹಿಂದೆ ಮಹೇಶ್ ಭೂಪತ್​ ಕುಮಾರ್​ ಓಜಾರನ್ನು ಸಿಐಡಿ ಬಂಧಿಸಿತ್ತು.

ವಿವಿಧ ಗುಂಪುಗಳು ಮತ್ತು ವ್ಯಕ್ತಿಗಳು ಕೈಗೊಂಡ ವಿವಿಧ ರಿಯಲ್ ಎಸ್ಟೇಟ್ ಯೋಜನೆಗಳಲ್ಲಿ ದೂರುದಾರರು ಒಟ್ಟು 526 ಕೋಟಿ ರೂಪಾಯಿ ಹೂಡಿಕೆ ಮಾಡಿರುವುದು ನಮ್ಮ ತನಿಖೆಯಿಂದ ತಿಳಿದುಬಂದಿದೆ ಎಂದು ಇಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೂರುದಾರರು ಮಾಡಿದ ಒಟ್ಟು 526 ಕೋಟಿ ರೂಪಾಯಿ ಹೂಡಿಕೆಯಲ್ಲಿ 121.5 ಕೋಟಿ ರೂಪಾಯಿಗಳ ಬೃಹತ್ ಮೊತ್ತವನ್ನು ಓಜಾ ನೇತೃತ್ವದ ಕರಣ್ ಗ್ರೂಪ್ ಬಿಲ್ಡರ್ಸ್ ಮತ್ತು ಡೆವಲಪರ್ಸ್ ಕೈಗೊಂಡ ರಿಯಲ್ ಎಸ್ಟೇಟ್ ಯೋಜನೆಯಲ್ಲಿ ಹೂಡಿಕೆ ಮಾಡಲಾಗಿದೆ ಎಂದು ಇಡಿ ಮಾಹಿತಿ ನೀಡಿದೆ.

Published On - 10:45 pm, Thu, 12 January 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ