AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಷಕ್ಕೆ 2.5 ಕೋಟಿ Tax ಕಟ್ತಿದ್ದ ವಿರೇನ್​! ಹಣ ವಿನಿಮಯ ಹೇಗೆ ನಡೆಸ್ತಿದ್ದ?

ಬೆಂಗಳೂರು: ಸ್ಯಾಂಡಲ್‌ವುಡ್‌ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿರುವ ವಿರೇನ್ ಖನ್ನಾ ವಿರುದ್ಧ ಜಾರಿ ನಿರ್ದೇಶನಾಲಯ ತನಿಖೆ ನಡೆಸತೊಡಗಿದೆ. ವಿದೇಶಗಳಲ್ಲಿ ವ್ಯವಹಾರ ಹೊಂದಿದ್ದ ವಿರೇನ್ ಖನ್ನಾನ​ ವಹಿವಾಟು ಮತ್ತು ಹಣದ ವ್ಯವಹಾರ ಬಗ್ಗೆ ಜಾರಿ ನಿರ್ದೇಶನಾಲಯದಿಂದ ತನಿಖೆ ನಡೆಯಲಿದೆ. ವರ್ಷಕ್ಕೆ ಸರಿಸುಮಾರು 2.5 ಕೋಟಿ ರೂಪಾಯಿ ಆದಾಯ ತೆರಿಗೆ ಪಾವತಿಸುತ್ತಿದ್ದ ಖನ್ನಾ ತನ್ನದೇ ಇವೆಂಟ್​ ಮ್ಯಾನೇಜ್​ಮೆಂಟ್​ ಕಂಪನಿ ಹೊಂದಿದ್ದ. ದೆಹಲಿ, ಬೆಂಗಳೂರು, ಮುಂಬೈ ಹೀಗೆ ಅನೇಕ‌ ನಗರಗಳಲ್ಲಿ ಕಾರ್ಯಕ್ರಮಗಳನ್ನ ಆಯೋಜಿಸುತ್ತಿದ್ದ ಎಂದು ತಿಳಿದುಬಂದಿದೆ. ಭಾರತ […]

ವರ್ಷಕ್ಕೆ 2.5 ಕೋಟಿ Tax ಕಟ್ತಿದ್ದ ವಿರೇನ್​! ಹಣ ವಿನಿಮಯ ಹೇಗೆ ನಡೆಸ್ತಿದ್ದ?
KUSHAL V
| Edited By: |

Updated on:Sep 10, 2020 | 5:23 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿರುವ ವಿರೇನ್ ಖನ್ನಾ ವಿರುದ್ಧ ಜಾರಿ ನಿರ್ದೇಶನಾಲಯ ತನಿಖೆ ನಡೆಸತೊಡಗಿದೆ. ವಿದೇಶಗಳಲ್ಲಿ ವ್ಯವಹಾರ ಹೊಂದಿದ್ದ ವಿರೇನ್ ಖನ್ನಾನ​ ವಹಿವಾಟು ಮತ್ತು ಹಣದ ವ್ಯವಹಾರ ಬಗ್ಗೆ ಜಾರಿ ನಿರ್ದೇಶನಾಲಯದಿಂದ ತನಿಖೆ ನಡೆಯಲಿದೆ.

ವರ್ಷಕ್ಕೆ ಸರಿಸುಮಾರು 2.5 ಕೋಟಿ ರೂಪಾಯಿ ಆದಾಯ ತೆರಿಗೆ ಪಾವತಿಸುತ್ತಿದ್ದ ಖನ್ನಾ ತನ್ನದೇ ಇವೆಂಟ್​ ಮ್ಯಾನೇಜ್​ಮೆಂಟ್​ ಕಂಪನಿ ಹೊಂದಿದ್ದ. ದೆಹಲಿ, ಬೆಂಗಳೂರು, ಮುಂಬೈ ಹೀಗೆ ಅನೇಕ‌ ನಗರಗಳಲ್ಲಿ ಕಾರ್ಯಕ್ರಮಗಳನ್ನ ಆಯೋಜಿಸುತ್ತಿದ್ದ ಎಂದು ತಿಳಿದುಬಂದಿದೆ. ಭಾರತ ಮಾತ್ರವಲ್ಲದೇ ವಿದೇಶಗಳಲ್ಲೂ ಇವೆಂಟ್ ಆಯೋಜನೆ ಮಾಡುತ್ತಿದ್ದನಂತೆ.

ಹಾಗಾಗಿ, ವಿರೇನ್ ಖನ್ನಾಗೆ ವಿದೇಶಿ ಹಣ ವಿನಿಮಯ ಹೇಗೆ ನಡೆಯುತ್ತಿತ್ತು? ವಿರೇನ್ ಖನ್ನಾ ಒಟ್ಟು ಆಸ್ತಿ ಮೌಲ್ಯವೆಷ್ಟು? ಆದಾಯವೆಷ್ಟು? ಹೀಗೆ ಆತನ ಆದಾಯದ ಮೂಲಗಳ ಮಾಹಿತಿ‌ಯನ್ನ ED ಅಧಿಕಾರಿಗಳು ಈಗ ಕಲೆ ಹಾಕುತ್ತಿದ್ದಾರೆ.

ವಿರೇನ್​​ ಬ್ಯಾಂಕ್ ಖಾತೆ ಪ್ಯಾನ್ ಕಾರ್ಡ್​ ಸೇರಿದಂತೆ ಪ್ರತಿಯೊಂದರ ಬಗ್ಗೆ ಸಹ ಮಾಹಿತಿ‌ ಸಂಗ್ರಹಿಸಲಾಗುತ್ತಿದೆ. ಸದ್ಯದಲ್ಲೇ, ಜಾರಿ ನಿರ್ದೇಶನಾಲಯವು ECIR (ಆರ್ಥಿಕ ಅಪರಾಧಗಳ FIR) ದಾಖಲಿಸಿಕೊಳ್ಳಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

Published On - 5:02 pm, Thu, 10 September 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ