AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಷಕ್ಕೆ 2.5 ಕೋಟಿ Tax ಕಟ್ತಿದ್ದ ವಿರೇನ್​! ಹಣ ವಿನಿಮಯ ಹೇಗೆ ನಡೆಸ್ತಿದ್ದ?

ಬೆಂಗಳೂರು: ಸ್ಯಾಂಡಲ್‌ವುಡ್‌ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿರುವ ವಿರೇನ್ ಖನ್ನಾ ವಿರುದ್ಧ ಜಾರಿ ನಿರ್ದೇಶನಾಲಯ ತನಿಖೆ ನಡೆಸತೊಡಗಿದೆ. ವಿದೇಶಗಳಲ್ಲಿ ವ್ಯವಹಾರ ಹೊಂದಿದ್ದ ವಿರೇನ್ ಖನ್ನಾನ​ ವಹಿವಾಟು ಮತ್ತು ಹಣದ ವ್ಯವಹಾರ ಬಗ್ಗೆ ಜಾರಿ ನಿರ್ದೇಶನಾಲಯದಿಂದ ತನಿಖೆ ನಡೆಯಲಿದೆ. ವರ್ಷಕ್ಕೆ ಸರಿಸುಮಾರು 2.5 ಕೋಟಿ ರೂಪಾಯಿ ಆದಾಯ ತೆರಿಗೆ ಪಾವತಿಸುತ್ತಿದ್ದ ಖನ್ನಾ ತನ್ನದೇ ಇವೆಂಟ್​ ಮ್ಯಾನೇಜ್​ಮೆಂಟ್​ ಕಂಪನಿ ಹೊಂದಿದ್ದ. ದೆಹಲಿ, ಬೆಂಗಳೂರು, ಮುಂಬೈ ಹೀಗೆ ಅನೇಕ‌ ನಗರಗಳಲ್ಲಿ ಕಾರ್ಯಕ್ರಮಗಳನ್ನ ಆಯೋಜಿಸುತ್ತಿದ್ದ ಎಂದು ತಿಳಿದುಬಂದಿದೆ. ಭಾರತ […]

ವರ್ಷಕ್ಕೆ 2.5 ಕೋಟಿ Tax ಕಟ್ತಿದ್ದ ವಿರೇನ್​! ಹಣ ವಿನಿಮಯ ಹೇಗೆ ನಡೆಸ್ತಿದ್ದ?
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Sep 10, 2020 | 5:23 PM

ಬೆಂಗಳೂರು: ಸ್ಯಾಂಡಲ್‌ವುಡ್‌ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿರುವ ವಿರೇನ್ ಖನ್ನಾ ವಿರುದ್ಧ ಜಾರಿ ನಿರ್ದೇಶನಾಲಯ ತನಿಖೆ ನಡೆಸತೊಡಗಿದೆ. ವಿದೇಶಗಳಲ್ಲಿ ವ್ಯವಹಾರ ಹೊಂದಿದ್ದ ವಿರೇನ್ ಖನ್ನಾನ​ ವಹಿವಾಟು ಮತ್ತು ಹಣದ ವ್ಯವಹಾರ ಬಗ್ಗೆ ಜಾರಿ ನಿರ್ದೇಶನಾಲಯದಿಂದ ತನಿಖೆ ನಡೆಯಲಿದೆ.

ವರ್ಷಕ್ಕೆ ಸರಿಸುಮಾರು 2.5 ಕೋಟಿ ರೂಪಾಯಿ ಆದಾಯ ತೆರಿಗೆ ಪಾವತಿಸುತ್ತಿದ್ದ ಖನ್ನಾ ತನ್ನದೇ ಇವೆಂಟ್​ ಮ್ಯಾನೇಜ್​ಮೆಂಟ್​ ಕಂಪನಿ ಹೊಂದಿದ್ದ. ದೆಹಲಿ, ಬೆಂಗಳೂರು, ಮುಂಬೈ ಹೀಗೆ ಅನೇಕ‌ ನಗರಗಳಲ್ಲಿ ಕಾರ್ಯಕ್ರಮಗಳನ್ನ ಆಯೋಜಿಸುತ್ತಿದ್ದ ಎಂದು ತಿಳಿದುಬಂದಿದೆ. ಭಾರತ ಮಾತ್ರವಲ್ಲದೇ ವಿದೇಶಗಳಲ್ಲೂ ಇವೆಂಟ್ ಆಯೋಜನೆ ಮಾಡುತ್ತಿದ್ದನಂತೆ.

ಹಾಗಾಗಿ, ವಿರೇನ್ ಖನ್ನಾಗೆ ವಿದೇಶಿ ಹಣ ವಿನಿಮಯ ಹೇಗೆ ನಡೆಯುತ್ತಿತ್ತು? ವಿರೇನ್ ಖನ್ನಾ ಒಟ್ಟು ಆಸ್ತಿ ಮೌಲ್ಯವೆಷ್ಟು? ಆದಾಯವೆಷ್ಟು? ಹೀಗೆ ಆತನ ಆದಾಯದ ಮೂಲಗಳ ಮಾಹಿತಿ‌ಯನ್ನ ED ಅಧಿಕಾರಿಗಳು ಈಗ ಕಲೆ ಹಾಕುತ್ತಿದ್ದಾರೆ.

ವಿರೇನ್​​ ಬ್ಯಾಂಕ್ ಖಾತೆ ಪ್ಯಾನ್ ಕಾರ್ಡ್​ ಸೇರಿದಂತೆ ಪ್ರತಿಯೊಂದರ ಬಗ್ಗೆ ಸಹ ಮಾಹಿತಿ‌ ಸಂಗ್ರಹಿಸಲಾಗುತ್ತಿದೆ. ಸದ್ಯದಲ್ಲೇ, ಜಾರಿ ನಿರ್ದೇಶನಾಲಯವು ECIR (ಆರ್ಥಿಕ ಅಪರಾಧಗಳ FIR) ದಾಖಲಿಸಿಕೊಳ್ಳಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

Published On - 5:02 pm, Thu, 10 September 20

Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ