AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramanagara: ಗೃಹಲಕ್ಷ್ಮೀ ಯೋಜನೆ ನೋಂದಣಿಗೆಂದು ಕರೆದೊಯ್ದು ವೃದ್ಧೆಯ ಚಿನ್ನದ ಸರ ಕಳ್ಳತನ

ಗೃಹಲಕ್ಷ್ಮೀ ಯೋಜನೆ ನೋಂದಣಿ ಮಾಡುವುದಾಗಿ ನಂಬಿಸಿ ವೃದ್ಧೆಯೊಬ್ಬರನ್ನು ಕರೆದೊಯ್ದು ಅವರ ಬಳಿ ಇದ್ದ ಚಿನ್ನದ ಸರವನ್ನು ಕಳ್ಳತನ ಮಾಡಿದ ಪ್ರಕರಣ ರಾಮನಗರದಲ್ಲಿ ಇಂದು (ಜುಲೈ 27) ನಡೆದಿದೆ.

Ramanagara: ಗೃಹಲಕ್ಷ್ಮೀ ಯೋಜನೆ ನೋಂದಣಿಗೆಂದು ಕರೆದೊಯ್ದು ವೃದ್ಧೆಯ ಚಿನ್ನದ ಸರ ಕಳ್ಳತನ
ಗೃಹಲಕ್ಷ್ಮೀ ಯೋಜನೆ ನೋಂದಣಿಗೆಂದು ಕರೆದೊಯ್ದು ವೃದ್ಧೆಯ ಚಿನ್ನದ ಸರ ಕಳ್ಳತನ ಮಾಡಿದ ಸಂಬಂಧ ಚನ್ನಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: Rakesh Nayak Manchi

Updated on: Jul 27, 2023 | 5:28 PM

ರಾಮನಗರ, ಜುಲೈ 27: ಅಪರಿಚಿತ ವ್ಯಕ್ತಿಯೊಬ್ಬ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ನೋಂದಣಿ ಮಾಡುವುದಾಗಿ ನಂಬಿಸಿ ಅಂಚೆ ಕಚೇರಿಗೆ ಕರೆದೊಯ್ದು ವೃದ್ಧೆಯ ಬಳಿ ಇದ್ದ 40 ಗ್ರಾಂ ಚಿನ್ನದ ಸರ ಕಳ್ಳನ (Snatching) ಮಾಡಿದ ಘಟನೆ ಜಿಲ್ಲೆಯ ಚನ್ನಪಟ್ಟಣ (Channapatna) ತಾಲೂಕಿನ ಹಾರೋಕೊಪ್ಪ ಗ್ರಾಮದಲ್ಲಿ ನಡೆದಿದೆ.

ಹಾರೋಕೊಪ್ಪದ ಸಾವಿತ್ರಮ್ಮ (62) ಎಂಬವರು ಮಂಡ್ಯದ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪುತ್ರನನ್ನು ನೋಡಲೆಂದು ಹೋಗಿದ್ದರು. ವಾಪಸ್ ಮಂಡ್ಯದಿಂದ ಚನ್ನಪಟ್ಟಣ ಬಸ್ ನಿಲ್ದಾಣಕ್ಕೆ ಬಂದಿಳಿದಾಗ ಅಪರಿಚಿತ ವ್ಯಕ್ತಿಯೊಬ್ಬ ಪರಿಚಿತನಂತೆ ನಟಿಸಿ ಸಾವಿತ್ರಮ್ಮ ಜೊತೆ ಮಾತನಾಡಿದ್ದಾನೆ. ಅಲ್ಲದೆ, ಗೃಹಲಕ್ಷ್ಮೀ ಯೋಜನೆ ಹಣ ಬರುವಂತೆ ಮಾಡಿಸುತ್ತೇನೆ ಎಂದು ನಂಬಿಸಿದ್ದಾನೆ.

ಇದನ್ನೂ ಓದಿ: ಅಕ್ರಮವಾಗಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ: 3 ಖಾಸಗಿ ಸೈಬರ್​ ಸೆಂಟರ್​ ಸೀಜ್​​

ವ್ಯಕ್ತಿಯ ಮಾತು ನಂಬಿದ ಸಾವಿತ್ರಮ್ಮ ಅರ್ಜಿ ಹಾಕಲು ಒಪ್ಪಿಕೊಂಡಿದ್ದಾರೆ. ಅದರಂತೆ, ಅಪರಿಚಿತ ವ್ಯಕ್ತಿ ಅರ್ಜಿಗೆ ವೈದ್ಯರು ಸಹಿಮಾಡಬೇಕೆಂದು ವೃದ್ಧೆಯನ್ನು ಆಸ್ಪತ್ರೆಗೆ ಬಳಿಗೆ ಕರೆದೊಯ್ದಿದ್ದಾನೆ. ಅಲ್ಲಿ ಸರ ನೋಡಿದರೆ ವೈದ್ಯರು ಸಹಿ ಹಾಕಲ್ಲ ತೆಗೆಯಿರಿ ಎಂದಿದ್ದಾನೆ. ಹೀಗಾಗಿ ಸಾವಿತ್ರಮ್ಮ ತನ್ನಲ್ಲಿದ್ದ ಚಿನ್ನದ ಸರ, ಹಣವನ್ನು ಪರ್ಸ್​ನಲ್ಲಿ ಹಾಕಿದ್ದಾರೆ. ಈ ವೇಳೆ ಸಾವಿತ್ರಮ್ಮಗೆ ಗೊತ್ತಾಗದಂತೆ ಪರ್ಸ್​ನಿಂದ ಚಿನ್ನದ ಸರ ಎಗರಿಸಿದ್ದಾನೆ.

ಚಿನ್ನದ ಸರ ಕಳವು ಮಾಡಿದ ನಂತರ ಸಾವಿತ್ರಮ್ಮರನ್ನು ಅಂಚೆ ಕಚೇರಿ ಬಳಿಗೆ ಕರೆತಂದು ಕೂರಿಸಿ ಹೋಗಿದ್ದಾನೆ. ಎಷ್ಟೇ ಹೊತ್ತು ಕಾದರೂ ಆ ವ್ಯಕ್ತಿ ವಾಪಸ್ ಬಾರದ್ದನ್ನು ಅನುಮಾನಿಸಿದ ಸಾವಿತ್ರಮ್ಮ, ಪರ್ಸ್​ ತೆಗೆದು ನೋಡಿದಾಗ ಸರ ಕಳ್ಳತನ ಆಗಿರುವುದು ತಿಳಿದುಬಂದಿದೆ. ಸರಗಳ್ಳತನ ಸಂಬಂಧ ಸಾವಿತ್ರಮ್ಮ ಅವರು ಚನ್ನಪಟ್ಟಣ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾವಿತ್ರಮ್ಮಗೆ ವಂಚಿಸಿದ ವ್ಯಕ್ತಿಯ ಚಲನವಲನ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್