AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramanagara: ಗೃಹಲಕ್ಷ್ಮೀ ಯೋಜನೆ ನೋಂದಣಿಗೆಂದು ಕರೆದೊಯ್ದು ವೃದ್ಧೆಯ ಚಿನ್ನದ ಸರ ಕಳ್ಳತನ

ಗೃಹಲಕ್ಷ್ಮೀ ಯೋಜನೆ ನೋಂದಣಿ ಮಾಡುವುದಾಗಿ ನಂಬಿಸಿ ವೃದ್ಧೆಯೊಬ್ಬರನ್ನು ಕರೆದೊಯ್ದು ಅವರ ಬಳಿ ಇದ್ದ ಚಿನ್ನದ ಸರವನ್ನು ಕಳ್ಳತನ ಮಾಡಿದ ಪ್ರಕರಣ ರಾಮನಗರದಲ್ಲಿ ಇಂದು (ಜುಲೈ 27) ನಡೆದಿದೆ.

Ramanagara: ಗೃಹಲಕ್ಷ್ಮೀ ಯೋಜನೆ ನೋಂದಣಿಗೆಂದು ಕರೆದೊಯ್ದು ವೃದ್ಧೆಯ ಚಿನ್ನದ ಸರ ಕಳ್ಳತನ
ಗೃಹಲಕ್ಷ್ಮೀ ಯೋಜನೆ ನೋಂದಣಿಗೆಂದು ಕರೆದೊಯ್ದು ವೃದ್ಧೆಯ ಚಿನ್ನದ ಸರ ಕಳ್ಳತನ ಮಾಡಿದ ಸಂಬಂಧ ಚನ್ನಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: Rakesh Nayak Manchi|

Updated on: Jul 27, 2023 | 5:28 PM

Share

ರಾಮನಗರ, ಜುಲೈ 27: ಅಪರಿಚಿತ ವ್ಯಕ್ತಿಯೊಬ್ಬ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ನೋಂದಣಿ ಮಾಡುವುದಾಗಿ ನಂಬಿಸಿ ಅಂಚೆ ಕಚೇರಿಗೆ ಕರೆದೊಯ್ದು ವೃದ್ಧೆಯ ಬಳಿ ಇದ್ದ 40 ಗ್ರಾಂ ಚಿನ್ನದ ಸರ ಕಳ್ಳನ (Snatching) ಮಾಡಿದ ಘಟನೆ ಜಿಲ್ಲೆಯ ಚನ್ನಪಟ್ಟಣ (Channapatna) ತಾಲೂಕಿನ ಹಾರೋಕೊಪ್ಪ ಗ್ರಾಮದಲ್ಲಿ ನಡೆದಿದೆ.

ಹಾರೋಕೊಪ್ಪದ ಸಾವಿತ್ರಮ್ಮ (62) ಎಂಬವರು ಮಂಡ್ಯದ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪುತ್ರನನ್ನು ನೋಡಲೆಂದು ಹೋಗಿದ್ದರು. ವಾಪಸ್ ಮಂಡ್ಯದಿಂದ ಚನ್ನಪಟ್ಟಣ ಬಸ್ ನಿಲ್ದಾಣಕ್ಕೆ ಬಂದಿಳಿದಾಗ ಅಪರಿಚಿತ ವ್ಯಕ್ತಿಯೊಬ್ಬ ಪರಿಚಿತನಂತೆ ನಟಿಸಿ ಸಾವಿತ್ರಮ್ಮ ಜೊತೆ ಮಾತನಾಡಿದ್ದಾನೆ. ಅಲ್ಲದೆ, ಗೃಹಲಕ್ಷ್ಮೀ ಯೋಜನೆ ಹಣ ಬರುವಂತೆ ಮಾಡಿಸುತ್ತೇನೆ ಎಂದು ನಂಬಿಸಿದ್ದಾನೆ.

ಇದನ್ನೂ ಓದಿ: ಅಕ್ರಮವಾಗಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ: 3 ಖಾಸಗಿ ಸೈಬರ್​ ಸೆಂಟರ್​ ಸೀಜ್​​

ವ್ಯಕ್ತಿಯ ಮಾತು ನಂಬಿದ ಸಾವಿತ್ರಮ್ಮ ಅರ್ಜಿ ಹಾಕಲು ಒಪ್ಪಿಕೊಂಡಿದ್ದಾರೆ. ಅದರಂತೆ, ಅಪರಿಚಿತ ವ್ಯಕ್ತಿ ಅರ್ಜಿಗೆ ವೈದ್ಯರು ಸಹಿಮಾಡಬೇಕೆಂದು ವೃದ್ಧೆಯನ್ನು ಆಸ್ಪತ್ರೆಗೆ ಬಳಿಗೆ ಕರೆದೊಯ್ದಿದ್ದಾನೆ. ಅಲ್ಲಿ ಸರ ನೋಡಿದರೆ ವೈದ್ಯರು ಸಹಿ ಹಾಕಲ್ಲ ತೆಗೆಯಿರಿ ಎಂದಿದ್ದಾನೆ. ಹೀಗಾಗಿ ಸಾವಿತ್ರಮ್ಮ ತನ್ನಲ್ಲಿದ್ದ ಚಿನ್ನದ ಸರ, ಹಣವನ್ನು ಪರ್ಸ್​ನಲ್ಲಿ ಹಾಕಿದ್ದಾರೆ. ಈ ವೇಳೆ ಸಾವಿತ್ರಮ್ಮಗೆ ಗೊತ್ತಾಗದಂತೆ ಪರ್ಸ್​ನಿಂದ ಚಿನ್ನದ ಸರ ಎಗರಿಸಿದ್ದಾನೆ.

ಚಿನ್ನದ ಸರ ಕಳವು ಮಾಡಿದ ನಂತರ ಸಾವಿತ್ರಮ್ಮರನ್ನು ಅಂಚೆ ಕಚೇರಿ ಬಳಿಗೆ ಕರೆತಂದು ಕೂರಿಸಿ ಹೋಗಿದ್ದಾನೆ. ಎಷ್ಟೇ ಹೊತ್ತು ಕಾದರೂ ಆ ವ್ಯಕ್ತಿ ವಾಪಸ್ ಬಾರದ್ದನ್ನು ಅನುಮಾನಿಸಿದ ಸಾವಿತ್ರಮ್ಮ, ಪರ್ಸ್​ ತೆಗೆದು ನೋಡಿದಾಗ ಸರ ಕಳ್ಳತನ ಆಗಿರುವುದು ತಿಳಿದುಬಂದಿದೆ. ಸರಗಳ್ಳತನ ಸಂಬಂಧ ಸಾವಿತ್ರಮ್ಮ ಅವರು ಚನ್ನಪಟ್ಟಣ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾವಿತ್ರಮ್ಮಗೆ ವಂಚಿಸಿದ ವ್ಯಕ್ತಿಯ ಚಲನವಲನ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ