AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramanagara: ಗೃಹಲಕ್ಷ್ಮೀ ಯೋಜನೆ ನೋಂದಣಿಗೆಂದು ಕರೆದೊಯ್ದು ವೃದ್ಧೆಯ ಚಿನ್ನದ ಸರ ಕಳ್ಳತನ

ಗೃಹಲಕ್ಷ್ಮೀ ಯೋಜನೆ ನೋಂದಣಿ ಮಾಡುವುದಾಗಿ ನಂಬಿಸಿ ವೃದ್ಧೆಯೊಬ್ಬರನ್ನು ಕರೆದೊಯ್ದು ಅವರ ಬಳಿ ಇದ್ದ ಚಿನ್ನದ ಸರವನ್ನು ಕಳ್ಳತನ ಮಾಡಿದ ಪ್ರಕರಣ ರಾಮನಗರದಲ್ಲಿ ಇಂದು (ಜುಲೈ 27) ನಡೆದಿದೆ.

Ramanagara: ಗೃಹಲಕ್ಷ್ಮೀ ಯೋಜನೆ ನೋಂದಣಿಗೆಂದು ಕರೆದೊಯ್ದು ವೃದ್ಧೆಯ ಚಿನ್ನದ ಸರ ಕಳ್ಳತನ
ಗೃಹಲಕ್ಷ್ಮೀ ಯೋಜನೆ ನೋಂದಣಿಗೆಂದು ಕರೆದೊಯ್ದು ವೃದ್ಧೆಯ ಚಿನ್ನದ ಸರ ಕಳ್ಳತನ ಮಾಡಿದ ಸಂಬಂಧ ಚನ್ನಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Jul 27, 2023 | 5:28 PM

Share

ರಾಮನಗರ, ಜುಲೈ 27: ಅಪರಿಚಿತ ವ್ಯಕ್ತಿಯೊಬ್ಬ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ನೋಂದಣಿ ಮಾಡುವುದಾಗಿ ನಂಬಿಸಿ ಅಂಚೆ ಕಚೇರಿಗೆ ಕರೆದೊಯ್ದು ವೃದ್ಧೆಯ ಬಳಿ ಇದ್ದ 40 ಗ್ರಾಂ ಚಿನ್ನದ ಸರ ಕಳ್ಳನ (Snatching) ಮಾಡಿದ ಘಟನೆ ಜಿಲ್ಲೆಯ ಚನ್ನಪಟ್ಟಣ (Channapatna) ತಾಲೂಕಿನ ಹಾರೋಕೊಪ್ಪ ಗ್ರಾಮದಲ್ಲಿ ನಡೆದಿದೆ.

ಹಾರೋಕೊಪ್ಪದ ಸಾವಿತ್ರಮ್ಮ (62) ಎಂಬವರು ಮಂಡ್ಯದ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪುತ್ರನನ್ನು ನೋಡಲೆಂದು ಹೋಗಿದ್ದರು. ವಾಪಸ್ ಮಂಡ್ಯದಿಂದ ಚನ್ನಪಟ್ಟಣ ಬಸ್ ನಿಲ್ದಾಣಕ್ಕೆ ಬಂದಿಳಿದಾಗ ಅಪರಿಚಿತ ವ್ಯಕ್ತಿಯೊಬ್ಬ ಪರಿಚಿತನಂತೆ ನಟಿಸಿ ಸಾವಿತ್ರಮ್ಮ ಜೊತೆ ಮಾತನಾಡಿದ್ದಾನೆ. ಅಲ್ಲದೆ, ಗೃಹಲಕ್ಷ್ಮೀ ಯೋಜನೆ ಹಣ ಬರುವಂತೆ ಮಾಡಿಸುತ್ತೇನೆ ಎಂದು ನಂಬಿಸಿದ್ದಾನೆ.

ಇದನ್ನೂ ಓದಿ: ಅಕ್ರಮವಾಗಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ: 3 ಖಾಸಗಿ ಸೈಬರ್​ ಸೆಂಟರ್​ ಸೀಜ್​​

ವ್ಯಕ್ತಿಯ ಮಾತು ನಂಬಿದ ಸಾವಿತ್ರಮ್ಮ ಅರ್ಜಿ ಹಾಕಲು ಒಪ್ಪಿಕೊಂಡಿದ್ದಾರೆ. ಅದರಂತೆ, ಅಪರಿಚಿತ ವ್ಯಕ್ತಿ ಅರ್ಜಿಗೆ ವೈದ್ಯರು ಸಹಿಮಾಡಬೇಕೆಂದು ವೃದ್ಧೆಯನ್ನು ಆಸ್ಪತ್ರೆಗೆ ಬಳಿಗೆ ಕರೆದೊಯ್ದಿದ್ದಾನೆ. ಅಲ್ಲಿ ಸರ ನೋಡಿದರೆ ವೈದ್ಯರು ಸಹಿ ಹಾಕಲ್ಲ ತೆಗೆಯಿರಿ ಎಂದಿದ್ದಾನೆ. ಹೀಗಾಗಿ ಸಾವಿತ್ರಮ್ಮ ತನ್ನಲ್ಲಿದ್ದ ಚಿನ್ನದ ಸರ, ಹಣವನ್ನು ಪರ್ಸ್​ನಲ್ಲಿ ಹಾಕಿದ್ದಾರೆ. ಈ ವೇಳೆ ಸಾವಿತ್ರಮ್ಮಗೆ ಗೊತ್ತಾಗದಂತೆ ಪರ್ಸ್​ನಿಂದ ಚಿನ್ನದ ಸರ ಎಗರಿಸಿದ್ದಾನೆ.

ಚಿನ್ನದ ಸರ ಕಳವು ಮಾಡಿದ ನಂತರ ಸಾವಿತ್ರಮ್ಮರನ್ನು ಅಂಚೆ ಕಚೇರಿ ಬಳಿಗೆ ಕರೆತಂದು ಕೂರಿಸಿ ಹೋಗಿದ್ದಾನೆ. ಎಷ್ಟೇ ಹೊತ್ತು ಕಾದರೂ ಆ ವ್ಯಕ್ತಿ ವಾಪಸ್ ಬಾರದ್ದನ್ನು ಅನುಮಾನಿಸಿದ ಸಾವಿತ್ರಮ್ಮ, ಪರ್ಸ್​ ತೆಗೆದು ನೋಡಿದಾಗ ಸರ ಕಳ್ಳತನ ಆಗಿರುವುದು ತಿಳಿದುಬಂದಿದೆ. ಸರಗಳ್ಳತನ ಸಂಬಂಧ ಸಾವಿತ್ರಮ್ಮ ಅವರು ಚನ್ನಪಟ್ಟಣ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾವಿತ್ರಮ್ಮಗೆ ವಂಚಿಸಿದ ವ್ಯಕ್ತಿಯ ಚಲನವಲನ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ