AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವರಾಜ್ ವಿರುದ್ಧ ಸಾಲು ಸಾಲು ದೂರು: ಪಶ್ಚಿಮ ವಿಭಾಗದ ಠಾಣೆಗಳಲ್ಲಿ ದಾಖಲಾಗಿವೆ 11 ಪ್ರಕರಣಗಳು..!

ಒಟ್ಟು 11 ಕೇಸ್​ಗಳಲ್ಲಿ ಯುವರಾಜ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆಯಿದೆ. ಇಂದು ಯುವರಾಜನ ಸಿಸಿಬಿ ಕಸ್ಟಡಿ ಅಂತ್ಯವಾಗಲಿದ್ದು ಕೋರ್ಟ್ ಮುಂದೆ ಆರೋಪಿಯನ್ನ ಹಾಜರು ಪಡಿಸಲು ಸಿಸಿಬಿ ಪೊಲೀಸರು ಸಿದ್ದತೆ ನಡೆಸಿದ್ದಾರೆ.

ಯುವರಾಜ್ ವಿರುದ್ಧ ಸಾಲು ಸಾಲು ದೂರು: ಪಶ್ಚಿಮ ವಿಭಾಗದ ಠಾಣೆಗಳಲ್ಲಿ ದಾಖಲಾಗಿವೆ 11 ಪ್ರಕರಣಗಳು..!
ಯುವರಾಜ್
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Feb 01, 2021 | 3:19 PM

Share

ಬೆಂಗಳೂರು: ವಂಚಕ ಯುವರಾಜ್​ ಅಲಿಯಾಸ್​ ಸ್ವಾಮಿಯ ಬಂಧನದ ನಂತರ ಆತನ ಕಳ್ಳ ವ್ಯವಹಾರಗಳು ಒಂದೊಂದಾಗಿಯೇ ಹೊರಬರುತ್ತಿವೆ. ಕೆದಕಿದಷ್ಟೂ ಹೆಚ್ಚಾಗುತ್ತಲೇ ಇವೆ ವಂಚನೆಯ ಅಪರಾಧಗಳು.

ಇಷ್ಟು ದಿನ ಯುವರಾಜ್​ ಮೇಲೆ ಸಿಸಿಬಿ ಕಣ್ಣಿಟ್ಟಿತ್ತು. ಈಗ ಬೆಂಗಳೂರು ಪಶ್ಚಿಮ ವಿಭಾಗ ಪೊಲೀಸರ ಸರದಿ.. ಪಶ್ಚಿಮ ವಿಭಾಗದ ಠಾಣೆಗಳಲ್ಲಿ ಯುವರಾಜ್ ವಿರುದ್ಧ ಬರೋಬ್ಬರಿ 11 ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಪಶ್ಚಿಮ ವಿಭಾಗದ ಪೊಲೀಸರು ವಂಚಕ ಯುವರಾಜ್​ನ ಬೆನ್ನು ಬಿದ್ದಿದ್ದಾರೆ. ಸರ್ಕಾರಿ ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚನೆ ಮಾಡಿರುವ ಆರೋಪದಡಿ ಯುವರಾಜ್​ ಮೇಲೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ.

ಬಿಡಿಎಸ್ ಸೀಟು ಕೊಡಿಸುವುದಾಗಿ ಹಣ ಪಡೆದು ವಂಚಿಸಿರುವ ಆರೋಪದಡಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಂಟು ಕೇಸ್ ದಾಖಲಾಗಿದೆ. ಕಾರು ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಒಟ್ಟು 11 ಕೇಸ್​ಗಳಲ್ಲಿ ಯುವರಾಜ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆಯಿದೆ. ಇಂದು ಯುವರಾಜನ ಸಿಸಿಬಿ ಕಸ್ಟಡಿ ಅಂತ್ಯವಾಗಲಿದ್ದು ಕೋರ್ಟ್ ಮುಂದೆ ಆರೋಪಿಯನ್ನ ಹಾಜರು ಪಡಿಸಲು ಸಿಸಿಬಿ ಪೊಲೀಸರು ಸಿದ್ದತೆ ನಡೆಸಿದ್ದಾರೆ. ಅದಾದ ಮೇಲೆ ಪಶ್ಚಿಮ ವಿಭಾಗದ ನಾನಾ ಪೊಲೀಸ್ ಠಾಣೆಗಳ ಪೊಲೀಸರು ಬಾಡಿ ವಾರಂಟ್​ ಮೇಲೆ ವಂಚಕ ಯುವರಾಜ್​ನನ್ನು ವಶಕ್ಕೆ ಪಡೆಯುತ್ತಾರಾ? ಅಥವಾ ಸಾರಾಸಗಟಾಗಿ ಸಿಸಿಬಿ ಪೊಲೀಸರೇ ಯುವರಾಜ್​ನನ್ನು ವಶಕ್ಕೆ ತೆಗೆದುಕೊಂಡು ತನಿಖೆ ಚುರುಕುಗೊಳಿಸುತ್ತಾರಾ ಕಾದುನೊಡಬೇಕಿದೆ.

ಯುವರಾಜ್​ ನಮ್ಮ ಮನೆಗೆ ಬಂದಿರಲಿಲ್ಲ.. ನಾನೇ ಅವರ ಮನೆಗೆ ಹೋಗಿದ್ದೆ, ಅಲ್ಲಿ ನೋಡಿ ಶಾಕ್​ ಆಗಿತ್ತು: ಸಚಿವ ಸೋಮಣ್ಣ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!