AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವರಾಜ್ ವಿರುದ್ಧ ಸಾಲು ಸಾಲು ದೂರು: ಪಶ್ಚಿಮ ವಿಭಾಗದ ಠಾಣೆಗಳಲ್ಲಿ ದಾಖಲಾಗಿವೆ 11 ಪ್ರಕರಣಗಳು..!

ಒಟ್ಟು 11 ಕೇಸ್​ಗಳಲ್ಲಿ ಯುವರಾಜ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆಯಿದೆ. ಇಂದು ಯುವರಾಜನ ಸಿಸಿಬಿ ಕಸ್ಟಡಿ ಅಂತ್ಯವಾಗಲಿದ್ದು ಕೋರ್ಟ್ ಮುಂದೆ ಆರೋಪಿಯನ್ನ ಹಾಜರು ಪಡಿಸಲು ಸಿಸಿಬಿ ಪೊಲೀಸರು ಸಿದ್ದತೆ ನಡೆಸಿದ್ದಾರೆ.

ಯುವರಾಜ್ ವಿರುದ್ಧ ಸಾಲು ಸಾಲು ದೂರು: ಪಶ್ಚಿಮ ವಿಭಾಗದ ಠಾಣೆಗಳಲ್ಲಿ ದಾಖಲಾಗಿವೆ 11 ಪ್ರಕರಣಗಳು..!
ಯುವರಾಜ್
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​|

Updated on: Feb 01, 2021 | 3:19 PM

Share

ಬೆಂಗಳೂರು: ವಂಚಕ ಯುವರಾಜ್​ ಅಲಿಯಾಸ್​ ಸ್ವಾಮಿಯ ಬಂಧನದ ನಂತರ ಆತನ ಕಳ್ಳ ವ್ಯವಹಾರಗಳು ಒಂದೊಂದಾಗಿಯೇ ಹೊರಬರುತ್ತಿವೆ. ಕೆದಕಿದಷ್ಟೂ ಹೆಚ್ಚಾಗುತ್ತಲೇ ಇವೆ ವಂಚನೆಯ ಅಪರಾಧಗಳು.

ಇಷ್ಟು ದಿನ ಯುವರಾಜ್​ ಮೇಲೆ ಸಿಸಿಬಿ ಕಣ್ಣಿಟ್ಟಿತ್ತು. ಈಗ ಬೆಂಗಳೂರು ಪಶ್ಚಿಮ ವಿಭಾಗ ಪೊಲೀಸರ ಸರದಿ.. ಪಶ್ಚಿಮ ವಿಭಾಗದ ಠಾಣೆಗಳಲ್ಲಿ ಯುವರಾಜ್ ವಿರುದ್ಧ ಬರೋಬ್ಬರಿ 11 ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಪಶ್ಚಿಮ ವಿಭಾಗದ ಪೊಲೀಸರು ವಂಚಕ ಯುವರಾಜ್​ನ ಬೆನ್ನು ಬಿದ್ದಿದ್ದಾರೆ. ಸರ್ಕಾರಿ ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚನೆ ಮಾಡಿರುವ ಆರೋಪದಡಿ ಯುವರಾಜ್​ ಮೇಲೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ.

ಬಿಡಿಎಸ್ ಸೀಟು ಕೊಡಿಸುವುದಾಗಿ ಹಣ ಪಡೆದು ವಂಚಿಸಿರುವ ಆರೋಪದಡಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಂಟು ಕೇಸ್ ದಾಖಲಾಗಿದೆ. ಕಾರು ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಒಟ್ಟು 11 ಕೇಸ್​ಗಳಲ್ಲಿ ಯುವರಾಜ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆಯಿದೆ. ಇಂದು ಯುವರಾಜನ ಸಿಸಿಬಿ ಕಸ್ಟಡಿ ಅಂತ್ಯವಾಗಲಿದ್ದು ಕೋರ್ಟ್ ಮುಂದೆ ಆರೋಪಿಯನ್ನ ಹಾಜರು ಪಡಿಸಲು ಸಿಸಿಬಿ ಪೊಲೀಸರು ಸಿದ್ದತೆ ನಡೆಸಿದ್ದಾರೆ. ಅದಾದ ಮೇಲೆ ಪಶ್ಚಿಮ ವಿಭಾಗದ ನಾನಾ ಪೊಲೀಸ್ ಠಾಣೆಗಳ ಪೊಲೀಸರು ಬಾಡಿ ವಾರಂಟ್​ ಮೇಲೆ ವಂಚಕ ಯುವರಾಜ್​ನನ್ನು ವಶಕ್ಕೆ ಪಡೆಯುತ್ತಾರಾ? ಅಥವಾ ಸಾರಾಸಗಟಾಗಿ ಸಿಸಿಬಿ ಪೊಲೀಸರೇ ಯುವರಾಜ್​ನನ್ನು ವಶಕ್ಕೆ ತೆಗೆದುಕೊಂಡು ತನಿಖೆ ಚುರುಕುಗೊಳಿಸುತ್ತಾರಾ ಕಾದುನೊಡಬೇಕಿದೆ.

ಯುವರಾಜ್​ ನಮ್ಮ ಮನೆಗೆ ಬಂದಿರಲಿಲ್ಲ.. ನಾನೇ ಅವರ ಮನೆಗೆ ಹೋಗಿದ್ದೆ, ಅಲ್ಲಿ ನೋಡಿ ಶಾಕ್​ ಆಗಿತ್ತು: ಸಚಿವ ಸೋಮಣ್ಣ

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!