AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಧ್ಯೆ Midnight ಖದೀಮರ ಹಾವಳಿ ಹೆಚ್ಚಾಗ್ತಿದೆ ರಾಜಧಾನಿಯಲ್ಲಿ

ಬೆಂಗಳೂರು: ನಗರದ ಪೊಲೀಸರಲ್ಲಿ ಕೊರೊನಾ ಸೋಂಕು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವಾರು ಠಾಣೆಗಳು ಸೀಲ್​ಡೌನ್​ ಆಗ್ತಿವೆ. ಸಿಬ್ಬಂದಿಯನ್ನು ಕ್ವಾರಂಟೈನ್​ನಲ್ಲಿ ಇರಿಸಿರುವುದರಿಂದ ರಾತ್ರಿ ವೇಳೆ ಗಸ್ತು ತಿರುಗೋದು ಕಡಿಮೆಯಾಗುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಂಡು ಫೀಲ್ಡಿಗಿಳಿದಿರೋ ಲೇಟ್ ನೈಟ್ ಖದೀಮರ ಗ್ಯಾಂಗ್ ತಾವರೆಕೆರೆ ಮುಖ್ಯರಸ್ತೆಯ ಭುವನಪ್ಪ ಲೇಔಟ್‌ನಲ್ಲಿ ದರೋಡೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜೂನ್​ 27ರಂದು ಕೆಲಸ ಮುಗಿಸಿಕೊಂಡು ಮಧ್ಯರಾತ್ರಿ ಮನೆಯತ್ತ ತೆರಳಿದ್ದ ಖಾಸಗಿ ಕಂಪನಿಯ ನೌಕರರನ್ನು ಅಡ್ಡಗಟ್ಟಿ ದರೋಡೆ ಮಾಡಲು ಮುಂದಾಗಿದ್ದಾರೆ. ಎರಡು ಬೈಕ್​ಗಳಲ್ಲಿ ಮೂವರಂತೆ ಬಂದು […]

ಕೊರೊನಾ ಮಧ್ಯೆ Midnight ಖದೀಮರ ಹಾವಳಿ ಹೆಚ್ಚಾಗ್ತಿದೆ ರಾಜಧಾನಿಯಲ್ಲಿ
KUSHAL V
| Edited By: ಸಾಧು ಶ್ರೀನಾಥ್​|

Updated on: Jul 04, 2020 | 11:15 AM

Share

ಬೆಂಗಳೂರು: ನಗರದ ಪೊಲೀಸರಲ್ಲಿ ಕೊರೊನಾ ಸೋಂಕು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವಾರು ಠಾಣೆಗಳು ಸೀಲ್​ಡೌನ್​ ಆಗ್ತಿವೆ. ಸಿಬ್ಬಂದಿಯನ್ನು ಕ್ವಾರಂಟೈನ್​ನಲ್ಲಿ ಇರಿಸಿರುವುದರಿಂದ ರಾತ್ರಿ ವೇಳೆ ಗಸ್ತು ತಿರುಗೋದು ಕಡಿಮೆಯಾಗುತ್ತಿದೆ.

ಇದನ್ನೇ ಬಂಡವಾಳ ಮಾಡಿಕೊಂಡು ಫೀಲ್ಡಿಗಿಳಿದಿರೋ ಲೇಟ್ ನೈಟ್ ಖದೀಮರ ಗ್ಯಾಂಗ್ ತಾವರೆಕೆರೆ ಮುಖ್ಯರಸ್ತೆಯ ಭುವನಪ್ಪ ಲೇಔಟ್‌ನಲ್ಲಿ ದರೋಡೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜೂನ್​ 27ರಂದು ಕೆಲಸ ಮುಗಿಸಿಕೊಂಡು ಮಧ್ಯರಾತ್ರಿ ಮನೆಯತ್ತ ತೆರಳಿದ್ದ ಖಾಸಗಿ ಕಂಪನಿಯ ನೌಕರರನ್ನು ಅಡ್ಡಗಟ್ಟಿ ದರೋಡೆ ಮಾಡಲು ಮುಂದಾಗಿದ್ದಾರೆ.

ಎರಡು ಬೈಕ್​ಗಳಲ್ಲಿ ಮೂವರಂತೆ ಬಂದು ಚಾಕು ತೋರಿಸಿ ಅಟ್ಯಾಕ್ ಮಾಡಲು ಬಂದವರ ವಿರುದ್ಧ ಓರ್ವ ಸಂತ್ರಸ್ಥ ಗೌರವ್ ಅಗರ್​​ವಾಲ್ ಹೋರಾಡಲು ಮುಂದಾದರು. ಇದಕ್ಕೆ ಸಿಟ್ಟಾದ ಖದೀಮರು ಕೈ ಬೆರಳುಗಳಿಗೆ ಚಾಕುವಿನಿಂದ ರಕ್ತ ಬರುವಂತೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಇಡೀ ಪ್ರಕರಣ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ನಂತರ ಗಾಯಗೊಂಡು ಕೆಳಗೆ ಬಿದ್ದ ಯುವಕರನ್ನ ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಜೊತೆಗೆ ಯುವಕರು ಈ ಬಗ್ಗೆ ಕಮಿಷನರ್​ ಭಾಸ್ಕರ್​ ರಾವ್​ಗೆ ನೇರವಾಗಿ ಟ್ವೀಟ್ ಸಹ ಮಾಡಿದರು. ತನಿಖೆ ನಡೆಸುವುದಾಗಿ ರಿಟ್ವೀಟ್ ಮಾಡಿದ್ದ ಆಯುಕ್ತರು ಕೂಡಲೇ ಕ್ರಮ ಕೈಗೊಳ್ಳುವಂತೆ ಮಡಿವಾಳ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
ಪೊಲೀಸರ ಮುಂದೆ ತಂದೆಯ ಗುಟ್ಟು ರಟ್ಟು ಮಾಡಿದ 6 ವರ್ಷದ ಮಗ
ಪೊಲೀಸರ ಮುಂದೆ ತಂದೆಯ ಗುಟ್ಟು ರಟ್ಟು ಮಾಡಿದ 6 ವರ್ಷದ ಮಗ