AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಧ್ಯೆ Midnight ಖದೀಮರ ಹಾವಳಿ ಹೆಚ್ಚಾಗ್ತಿದೆ ರಾಜಧಾನಿಯಲ್ಲಿ

ಬೆಂಗಳೂರು: ನಗರದ ಪೊಲೀಸರಲ್ಲಿ ಕೊರೊನಾ ಸೋಂಕು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವಾರು ಠಾಣೆಗಳು ಸೀಲ್​ಡೌನ್​ ಆಗ್ತಿವೆ. ಸಿಬ್ಬಂದಿಯನ್ನು ಕ್ವಾರಂಟೈನ್​ನಲ್ಲಿ ಇರಿಸಿರುವುದರಿಂದ ರಾತ್ರಿ ವೇಳೆ ಗಸ್ತು ತಿರುಗೋದು ಕಡಿಮೆಯಾಗುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಂಡು ಫೀಲ್ಡಿಗಿಳಿದಿರೋ ಲೇಟ್ ನೈಟ್ ಖದೀಮರ ಗ್ಯಾಂಗ್ ತಾವರೆಕೆರೆ ಮುಖ್ಯರಸ್ತೆಯ ಭುವನಪ್ಪ ಲೇಔಟ್‌ನಲ್ಲಿ ದರೋಡೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜೂನ್​ 27ರಂದು ಕೆಲಸ ಮುಗಿಸಿಕೊಂಡು ಮಧ್ಯರಾತ್ರಿ ಮನೆಯತ್ತ ತೆರಳಿದ್ದ ಖಾಸಗಿ ಕಂಪನಿಯ ನೌಕರರನ್ನು ಅಡ್ಡಗಟ್ಟಿ ದರೋಡೆ ಮಾಡಲು ಮುಂದಾಗಿದ್ದಾರೆ. ಎರಡು ಬೈಕ್​ಗಳಲ್ಲಿ ಮೂವರಂತೆ ಬಂದು […]

ಕೊರೊನಾ ಮಧ್ಯೆ Midnight ಖದೀಮರ ಹಾವಳಿ ಹೆಚ್ಚಾಗ್ತಿದೆ ರಾಜಧಾನಿಯಲ್ಲಿ
KUSHAL V
| Edited By: ಸಾಧು ಶ್ರೀನಾಥ್​|

Updated on: Jul 04, 2020 | 11:15 AM

Share

ಬೆಂಗಳೂರು: ನಗರದ ಪೊಲೀಸರಲ್ಲಿ ಕೊರೊನಾ ಸೋಂಕು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವಾರು ಠಾಣೆಗಳು ಸೀಲ್​ಡೌನ್​ ಆಗ್ತಿವೆ. ಸಿಬ್ಬಂದಿಯನ್ನು ಕ್ವಾರಂಟೈನ್​ನಲ್ಲಿ ಇರಿಸಿರುವುದರಿಂದ ರಾತ್ರಿ ವೇಳೆ ಗಸ್ತು ತಿರುಗೋದು ಕಡಿಮೆಯಾಗುತ್ತಿದೆ.

ಇದನ್ನೇ ಬಂಡವಾಳ ಮಾಡಿಕೊಂಡು ಫೀಲ್ಡಿಗಿಳಿದಿರೋ ಲೇಟ್ ನೈಟ್ ಖದೀಮರ ಗ್ಯಾಂಗ್ ತಾವರೆಕೆರೆ ಮುಖ್ಯರಸ್ತೆಯ ಭುವನಪ್ಪ ಲೇಔಟ್‌ನಲ್ಲಿ ದರೋಡೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜೂನ್​ 27ರಂದು ಕೆಲಸ ಮುಗಿಸಿಕೊಂಡು ಮಧ್ಯರಾತ್ರಿ ಮನೆಯತ್ತ ತೆರಳಿದ್ದ ಖಾಸಗಿ ಕಂಪನಿಯ ನೌಕರರನ್ನು ಅಡ್ಡಗಟ್ಟಿ ದರೋಡೆ ಮಾಡಲು ಮುಂದಾಗಿದ್ದಾರೆ.

ಎರಡು ಬೈಕ್​ಗಳಲ್ಲಿ ಮೂವರಂತೆ ಬಂದು ಚಾಕು ತೋರಿಸಿ ಅಟ್ಯಾಕ್ ಮಾಡಲು ಬಂದವರ ವಿರುದ್ಧ ಓರ್ವ ಸಂತ್ರಸ್ಥ ಗೌರವ್ ಅಗರ್​​ವಾಲ್ ಹೋರಾಡಲು ಮುಂದಾದರು. ಇದಕ್ಕೆ ಸಿಟ್ಟಾದ ಖದೀಮರು ಕೈ ಬೆರಳುಗಳಿಗೆ ಚಾಕುವಿನಿಂದ ರಕ್ತ ಬರುವಂತೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಇಡೀ ಪ್ರಕರಣ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ನಂತರ ಗಾಯಗೊಂಡು ಕೆಳಗೆ ಬಿದ್ದ ಯುವಕರನ್ನ ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಜೊತೆಗೆ ಯುವಕರು ಈ ಬಗ್ಗೆ ಕಮಿಷನರ್​ ಭಾಸ್ಕರ್​ ರಾವ್​ಗೆ ನೇರವಾಗಿ ಟ್ವೀಟ್ ಸಹ ಮಾಡಿದರು. ತನಿಖೆ ನಡೆಸುವುದಾಗಿ ರಿಟ್ವೀಟ್ ಮಾಡಿದ್ದ ಆಯುಕ್ತರು ಕೂಡಲೇ ಕ್ರಮ ಕೈಗೊಳ್ಳುವಂತೆ ಮಡಿವಾಳ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!