AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌಟುಂಬಿಕ ಕಲಹ ಹಿನ್ನೆಲೆ ಮಚ್ಚಿನಿಂದ ಕೊಚ್ಚಿ ಕೊಲೆಗೆ ಯತ್ನಿಸಿದ ಪತಿರಾಯ; ಬೆಳ್ಳಂಬೆಳಗ್ಗೆ ಬೆಚ್ಚಿಬಿದ್ದ ಗದಗ ಜನರು

23 ಕಡೆ ಮಚ್ಚಿನಿಂದ ಹೊಡೆದು ಪತ್ನಿಯನ್ನ ಗಾಯಗೊಳಿಸಿದ್ದಾನೆ. ಕೌಟುಂಬಿಕ ಕಲಹದ ಹಿನ್ನೆಲೆ ಮಾರಣಾಂತಿಕ ಹಲ್ಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, 4 ವರ್ಷದ ಹಿಂದೆ ಹಿಂದೂ ಯುವತಿ ಅಪೂರ್ವಳನ್ನ ಇಜಾಜ್ ಮದ್ವೆಯಾಗಿದ್ದ.

ಕೌಟುಂಬಿಕ ಕಲಹ ಹಿನ್ನೆಲೆ ಮಚ್ಚಿನಿಂದ ಕೊಚ್ಚಿ ಕೊಲೆಗೆ ಯತ್ನಿಸಿದ ಪತಿರಾಯ; ಬೆಳ್ಳಂಬೆಳಗ್ಗೆ ಬೆಚ್ಚಿಬಿದ್ದ ಗದಗ ಜನರು
ಪತ್ನಿ ಅಪೂರ್ವ, ಪತಿ ಇಜಾಜ್
TV9 Web
| Edited By: |

Updated on:Mar 10, 2022 | 3:05 PM

Share

ಗದಗ: ಕೌಟುಂಬಿಕ ಕಲಹ (family matter)   ಹಿನ್ನೆಲೆ ಮಚ್ಚಿನಿಂದ ಕೊಚ್ಚಿ ಪತ್ನಿ (wife) ಹತ್ಯೆಗೆ ಪತಿ ಯತ್ನಿಸಿರುವಂತಹ ಘಟನೆ ನಡೆದಿದೆ. ಗದಗ ನಗರದ ಮುಂಡರಗಿ ರಸ್ತೆಯ ಲಯನ್ ಸ್ಕೂಲ್ ಗ್ರೌಂಡ್ ಬಳಿ ಘಟನೆ ಸಂಭವಿಸಿದೆ. ಹಿಂದೂ ಹೆಂಡತಿಯನ್ನ ಮಚ್ಚಿನಿಂದ ಅಟ್ಟಾಡಿಸಿ ಮುಸ್ಲಿಂ ಗಂಡ ಮಾರಣಾಂತಿಕ ಹಲ್ಲೆ ಮಾಡಿದ್ದು, ಬೆಳ್ಳಂಬೆಳಗ್ಗೆ ಗದಗ ನಗರದ ಜನರು ಬೆಚ್ಚಿದಬಿದ್ದಾರೆ. ಸ್ಕೂಟಿ ಕಲೆಯುತ್ತಿದ್ದ ಅಪೂರ್ವ ಶಿರೂರ(26) ಅಲಿಯಾಸ್ ಅರ್ಫಾನ್ ಬಾನು ಎಂಬಾಕೆಯ ಮೇಲೆ ಪತಿ ಹಲ್ಲೆ ಮಾಡಿದ್ದಾನೆ. ಹುಬ್ಬಳ್ಳಿ ಕೋಲಪೆಟೆಯ ಇಜಾಜ್ (38) ಹಲ್ಲೆ ಮಾಡಿದ ವ್ಯಕ್ತಿ. 23 ಕಡೆ ಮಚ್ಚಿನಿಂದ ಹೊಡೆದು ಪತ್ನಿಯನ್ನ ಗಾಯಗೊಳಿಸಿದ್ದಾನೆ. ಕೌಟುಂಬಿಕ ಕಲಹದ ಹಿನ್ನೆಲೆ ಮಾರಣಾಂತಿಕ ಹಲ್ಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, 4 ವರ್ಷದ ಹಿಂದೆ ಹಿಂದೂ ಯುವತಿ ಅಪೂರ್ವಳನ್ನ ಇಜಾಜ್ ಮದ್ವೆಯಾಗಿದ್ದ. ಈ ಮೊದಲೇ ಮದುವೆಯಾಗಿದ್ದ ವಿಷಯ ತಿಳಿದು ಅಪೂರ್ವ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಕಳೆದ 4, 5 ತಿಂಗಳಿಂದ ಗಂಡನಿಂದ ದೂರವಾಗಿದ್ದಳು. ಗಂಭೀರವಾಗಿ ಗಾಯಗೊಂಡ ಅಪೂರ್ವಗೆ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಗದಗ ಜಿಮ್ಸ್ ಆಸ್ಪತ್ರೆ ಬಳಿ ಸಂಬಂಧಿಕರು ಜಮಾಯಿಸಿದ್ದಾರೆ. ಜಿಮ್ಸ್ ಆಸ್ಪತ್ರೆಗೆ ಎಸ್ಪಿ ಶಿವಪ್ರಕಾಶ್ ದೇವರಾಜು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಡೆತ್​ನೋಟ್​ ಬರೆದಿಟ್ಟು ಯುವತಿ ಆತ್ಮಹತ್ಯೆ:

ಧಾರವಾಡ: ಐಎಎಸ್ ಕೋಚಿಂಗ್​ಗೆ ಬಂದಿದ್ದ ಯುವತಿ ಡೆತ್​ನೋಟ್ (Death Note) ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಗರದ ಸಪ್ತಾಪುರ ಬಡಾವಣೆಯಲ್ಲಿರೋ ಅಶ್ವಿನಿ ಪಿಜಿಯಲ್ಲಿ ಘಟನೆ ನಡೆದಿದೆ. ಗೀತಾ ಹೆಗ್ಗಣ್ಣವರ್ (22) ಆತ್ಮಹತ್ಯೆ ಮಾಡಿಕೊಂಡ ಯುವತಿ. ಗೀತಾ, ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಯರಗಟ್ಟಿ ಗ್ರಾಮದ ನಿವಾಸಿಯಾಗಿದ್ದು, ಕೆಎಎಸ್ ಕೋಚಿಂಗ್​ಗೆ ಬಂದಿದ್ದಳು. ಕ್ಲಾಸಿಕ್ ಸಂಸ್ಥೆಯಲ್ಕಿ ಕೋಚಿಂಗ್ ಪಡೆಯುತ್ತಿದ್ದಳು. ಇಬ್ಬರು ಹುಡುಗರು ವೀಡಿಯೋ ಮಾಡಿರೋ ಬಗ್ಗೆ ಆತಂಕ ವ್ಯಕ್ತವಾಗಿದ್ದು, ಸಂಸ್ಥೆಯ ಸಿಬ್ಬಂದಿಯ ಕುಮ್ಮಕ್ಕೂ ಇರೋದಾಗಿ ಉಲ್ಲೇಖಿಸಲಾಗಿದೆ. ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರ ಭೇಟಿ ನೀಡಿ ಡೆತ್ ನೋಟ್ ವಶಕ್ಕೆ ಪಡೆದುಕೊಂಡಿದ್ದಾರೆ.

ಕ್ಯಾಬ್​ ಚಾಲಕನಿಂದ ಯುವತಿ ಜೊತೆ ಅಸಭ್ಯ ವರ್ತನೆ:

ಬೆಂಗಳೂರು: ಕ್ಯಾಬ್ ಚಾಲಕ (cab driver) ನಿಂದ ಯುವತಿ ಜೊತೆಗೆ ಅಸಭ್ಯ ವರ್ತನೆ ಆರೋಪ ಮಾಡಲಾಗಿದ್ದು, ಜೀವನಭೀಮನಗರ ಠಾಣೆ ಪೊಲೀಸರಿಂದ ಆರೋಪಿ ಮಂಜುನಾಥ್ ಬಂಧನ ಮಾಡಲಾಗಿದೆ. ಮಾರ್ಚ್ 9 ಮಧ್ಯರಾತ್ರಿ 1 ರಿಂದ 2 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಯುವಕ‌ , ಯುವತಿ ಇಬ್ಬರು ಕುಡಿದು ಚಿತ್ತಾಗಿದ್ದು, ಮನೆಗೆ ಹೋಗಲು ಕ್ಯಾಬ್ ಬುಕ್ ಮಾಡಿದ್ದಾರೆ. ಇಳಿಯುವಾಗ ಚಾಲಕನ ಸಹಾಯ ಕೇಳಿದ್ದಾರೆ. ಈ ವೇಳೆ ಖಾಸಗಿ‌ ಅಂಗ ಸ್ಪರ್ಶಿಸಿದ್ದಾನೆಂದು ಯುವತಿ ದೂರು ನೀಡಿದ್ದಾಳೆ. ದೂರಿನ ಆಧಾರದ ಮೇಲೆ‌ ಕ್ಯಾಬ್ ಚಾಲಕನನ್ನು ಬಂಧಿಸಲಾಗಿದೆ.

ನಾಲ್ಕು ಜನ ನಟೋರಿಯಸ್ ಬೈಕ್ ಕಳ್ಳರು ಅಂದರ್:

ರಾಯಚೂರು: ಹ್ಯಾಂಡ್​ಲಾಕ್​ ಮುರಿದು ಬೈಕ್ ಕದಿಯುತ್ತಿದ್ದ ಆರೋಪಿಗಳನ್ನು ನೇತಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಜನೇಯ, ಮಹೇಶ್, ಭಗತ್ ಸಿಂಗ್, ಬಾಲಕೃಷ್ಣ ಬಂಧಿತ ಆರೋಪಿಗಳು. ಬಂಧಿತರಿಂದ 10ಕ್ಕೂ ಹೆಚ್ಚು ಬೈಕ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹ್ಯಾಂಡ್ ಲಾಕ್ ಮಾಡಿರದ ಬೈಕ್​ಗಳೇ ಈ ಕಳ್ಳರ ಟಾರ್ಗೆಟ್. ಬಾರ್​ವೊಂದರಲ್ಲಿ ಆರೋಪಿಗಳ ಪರಸ್ಪರ ಪರಿಚಯವಾಗಿದ್ದು, ಬಳಿಕ ತಮ್ಮದೇ ಟೀಂ ಮಾಡಿ ಜೂಜು, ಮದ್ಯಪಾನಕ್ಕಾಗಿ ಕಳ್ಳತನ ಮಾಡುತ್ತಿದ್ದರು. ರಾಯಚೂರಿನ ನೇತಾಜಿ ನಗರ ಪೊಲೀಸರ ಬಲೆಗೆ ಬಿದ್ದ, ನಾಲ್ಕು ಜನ ನಟೋರಿಯಸ್ ಬೈಕ್ ಕಳ್ಳರು ಅಂದರ್​ ಆಗಿದ್ದಾರೆ. ಬೈಕ್ ಪಾರ್ಕಿಂಗ್ ಜಾಗಗಳಲ್ಲಿ ವಾಚ್ ಮಾಡಿ ಹ್ಯಾಂಡ್ ಲಾಕ್ ಮಾಡಿರದ ಬೈಕ್ ಪರಿಶೀಲಿಸಿ ಬಳಿಕ ಕಳ್ಳತನ ಮಾಡುತ್ತಿದ್ದರು. ರಾಯಚೂರು ನಗರದಲ್ಲಿ ಕದ್ದ ಬೈಕ್​ಗಳನ್ನು ಆಂದ್ರ, ತೆಲಂಗಾಣದಲ್ಲಿ ಮಾರಾಟ ಮಾಡುತ್ತಿದ್ದರು. ಬೆಳಗಿನ ಜಾವ ನೇತಾಜಿ ನಗರ ಪೊಲೀಸರಿಂದ ವಾಹನಗಳ ತಪಾಸಣೆ ನಡೆಯುತ್ತಿದ್ದು, ಸಿಲ್ಲಿಯಾಗಿ ನಾಲ್ಕು ಜನ ಬೈಕ್ ಕಳ್ಳರು ಸಿಕ್ಕಿಬಿದಿದ್ದಾರೆ. ಆರೋಪಿಗಳ ಬೈಕ್ ಹಿಡಿದು ದಾಖಲೆ ಕೇಳಿದ್ದ ಖಾಕಿ, ಆಗ ಎರಡು ಬೈಕ್ ಬಿಟ್ಟು ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ನಂತರ ಕಾರ್ಯಾಚರಣೆ ನಡೆಸಿ ಆರೋಪಿಗಳ ಬಂಧಿಸಿದ್ದು, ಸದ್ಯ ಬಂಧಿತ ರಿಂದ ಲಕ್ಷಾಂತರ ಮೌಲ್ಯದ 10 ಬೈಕ್ ಜಪ್ತಿ ಮಾಡಲಾಗಿದೆ. ಇದೇ ಆರೋಪಿಗಳು ರಾಯಚೂರು ಜಿಲ್ಲೆಯಾದ್ಯಂತ ಬೈಕ್ ಕಳ್ಳತನ ಮಾಡಿರೊ ಮಾಹಿತಿ ಬೆಳಕಿಗೆ ಬಂದಿದೆ. 2 -3 ವರ್ಷ ಹಳೆಯ ಬೈಕ್ ಕಳ್ಳತನ ಕೇಸ್​ಗಳು ಪತ್ತೆಯಾಗಿದ್ದು, ಸದ್ಯ ನೇತಾಜಿ ನಗರ ಪೊಲೀಸರಿಂದ ತನಿಖೆ ಮುಂದುವರೆದಿದೆ.

ಇದನ್ನೂ ಓದಿ:

ರಷ್ಯಾ ದಾಳಿಯ ಬಳಿಕ ಹಾನಿಗೊಳಗಾದ ಉಕ್ರೇನ್​ ನಗರದ ಕಟ್ಟಡಗಳು: ಫೋಟೋಗಳಲ್ಲಿ ನೋಡಿ

Published On - 1:59 pm, Thu, 10 March 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್