ಕೊಲ್ಕತ್ತಾದಲ್ಲಿ ಹಾಡಹಗಲೇ ಭಾರೀ ಸ್ಫೋಟ; ಒಬ್ಬರ ಸ್ಥಿತಿ ಗಂಭೀರ

ಪಶ್ಚಿಮ ಬಂಗಾಳದ ಕೊಲ್ಕತ್ತಾದ ಎಸ್ಎನ್‌ ಬ್ಯಾನರ್ಜಿ ರಸ್ತೆಯಲ್ಲಿ ಸ್ಫೋಟ ಸಂಭವಿಸಿದ್ದು, ಒಬ್ಬರು ಗಾಯಗೊಂಡಿದ್ದಾರೆ. ಪೊಲೀಸರು ಇಡೀ ಪ್ರದೇಶವನ್ನು ಸುತ್ತುವರೆದಿದ್ದಾರೆ. ಗಾಯಗೊಂಡ ಮಹಿಳೆ ಕಸ ತೆಗೆಯುವವರು ಎನ್ನಲಾಗಿದೆ. ಸ್ಫೋಟದ ಕಾರಣ ಇನ್ನೂ ಸ್ಪಷ್ಟವಾಗಿಲ್ಲವಾದರೂ, ಪೊಲೀಸರು ಮತ್ತು ಇತರ ತನಿಖಾ ಸಂಸ್ಥೆಗಳು ತನಿಖೆಯನ್ನು ಪ್ರಾರಂಭಿಸಿವೆ.

ಕೊಲ್ಕತ್ತಾದಲ್ಲಿ ಹಾಡಹಗಲೇ ಭಾರೀ ಸ್ಫೋಟ; ಒಬ್ಬರ ಸ್ಥಿತಿ ಗಂಭೀರ
ಸ್ಫೋಟ

Updated on: Sep 14, 2024 | 5:05 PM

ಕೊಲ್ಕತ್ತಾ: ಕೊಲ್ಕತ್ತಾದ ಎಸ್‌ಎನ್ ಬ್ಯಾನರ್ಜಿ ರಸ್ತೆಯಲ್ಲಿ ಇಂದು (ಶನಿವಾರ) ಭಾರೀ ಅಪಘಾತ ಸಂಭವಿಸಿದೆ. ಬ್ಲೋಚ್‌ಮನ್ ಸ್ಟ್ರೀಟ್ ಮತ್ತು ಎಸ್‌ಎನ್ ಬ್ಯಾನರ್ಜಿ ರಸ್ತೆಯ ಜಂಕ್ಷನ್‌ನಲ್ಲಿ ನಡೆದ ಸ್ಫೋಟದಲ್ಲಿ ಒಬ್ಬರು ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣವೇ ಎನ್‌ಆರ್‌ಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಫೋಟ ಸಂಭವಿಸಿದ ಪ್ರದೇಶವನ್ನು ಸೀಲ್ ಮಾಡಲಾಗಿದ್ದು, ಬಾಂಬ್ ನಿಷ್ಕ್ರಿಯ ದಳವನ್ನು ನಿಯೋಜಿಸಲಾಗಿದೆ. ಸ್ಫೋಟದ ಸುದ್ದಿ ತಿಳಿದ ತಕ್ಷಣ ತಲಾತಾಳ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಇಡೀ ಪ್ರದೇಶವನ್ನು ಭದ್ರತಾ ಪಡೆ ಸುತ್ತುವರೆದಿದ್ದು, ಸಾರ್ವಜನಿಕರು ಘಟನಾ ಸ್ಥಳದ ಸಮೀಪಕ್ಕೆ ಹೋಗದಂತೆ ತಡೆಯಲಾಗಿದೆ. ಇದಲ್ಲದೇ ಬಾಂಬ್ ನಿಷ್ಕ್ರಿಯ ದಳವನ್ನು ಕೂಡ ಕರೆಸಲಾಗಿದ್ದು, ಬೇರೆ ಯಾವುದೇ ಸ್ಫೋಟಕ ವಸ್ತು ಇಲ್ಲದಂತೆ ನೋಡಿಕೊಳ್ಳಲಾಗುವುದು.


ಇದನ್ನೂ ಓದಿ: ತಮಿಳುನಾಡು: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಇಬ್ಬರು ಸಾವು, ನಾಲ್ವರಿಗೆ ಗಾಯ

ಮೂಲಗಳ ಪ್ರಕಾರ ಗಾಯಾಳು ಮಹಿಳೆ ಕಸ ತೆಗೆಯುವವರು ಎನ್ನಲಾಗಿದೆ. ಸ್ಫೋಟದ ಕಾರಣ ಇನ್ನೂ ಸ್ಪಷ್ಟವಾಗಿಲ್ಲವಾದರೂ, ಪೊಲೀಸರು ಮತ್ತು ಇತರ ತನಿಖಾ ಸಂಸ್ಥೆಗಳು ತನಿಖೆಯನ್ನು ಪ್ರಾರಂಭಿಸಿವೆ. ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಸ್ಫೋಟದ ಘಟನೆ ನಡೆದಿದ್ದು, ಒಬ್ಬರು ಗಾಯಗೊಂಡಿದ್ದಾರೆ. ಬ್ಲೋಚ್‌ಮನ್ ಸೇಂಟ್ ಪ್ರವೇಶದ್ವಾರದಲ್ಲಿ ಪ್ಲಾಸ್ಟಿಕ್ ಚೀಲವಿತ್ತು. ಅದರಿಂದಲೇ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ.


ಇದನ್ನೂ ಓದಿ: ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ

ಘಟನೆಯ ನಂತರ, ಪ್ರದೇಶವನ್ನು ಭದ್ರತಾ ಟೇಪ್‌ನಿಂದ ಸುತ್ತುವರಿಯಲಾಯಿತು ಮತ್ತು ನಂತರ ಬಾಂಬ್ ನಿಷ್ಕ್ರಿಯ ದಳವನ್ನು ಕರೆಯಲಾಯಿತು. ಅವರು ಆಗಮಿಸಿ ಚೀಲ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಹುಡುಕಿದರು. ಅವುಗಳ ತೆರವು ನಂತರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ತನಿಖಾ ತಂಡ ಈಗಾಗಲೇ ಸ್ಥಳಕ್ಕೆ ತಲುಪಿದೆ. ಫೋರೆನ್ಸಿಕ್ ತನಿಖೆಯೂ ನಡೆಯಲಿದೆ ಎಂದು ವರದಿಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us