AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಟ್ ಕೊಡಿಸುವುದಾಗಿ ನಂಬಿಸಿ ವಂಚನೆ: ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ ಅನಿವಾಸಿ ಭಾರತೀಯ

ಬೆಂಗಳೂರು ನಗರದಲ್ಲಿ ಸೈಬರ್ ಅಪರಾಧಗಳು ದಿನೇದಿನೇ ಹೆಚ್ಚುತ್ತಿದ್ದು, ಇದನ್ನು ನಿಗ್ರಹಿಸಲು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ಅದಾಗ್ಯೂ, ಸಬೈರ್ ಚೋರರು ಜನಸಾಮಾನ್ಯರನ್ನು ವಂಚಿಸುವ ಪ್ರಕರಣಗಳು ನಡೆಯುತ್ತಲೇ ಇವೆ. ಇದೀಗ, ವಿದೇಶದಲ್ಲಿರುವ ಬೆಂಗಳೂರು ಮೂಲದ ವ್ಯಕ್ತಿಗೆ ಸೈಟ್ ಕೊಡಿಸುವುದಾಗಿ ನಂಬಿಸಿ ವಂಚನೆ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಸೈಟ್ ಕೊಡಿಸುವುದಾಗಿ ನಂಬಿಸಿ ವಂಚನೆ: ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ ಅನಿವಾಸಿ ಭಾರತೀಯ
ಸೈಟ್ ಕೊಡಿಸುವುದಾಗಿ ನಂಬಿಸಿ ಅನಿವಾಸಿ ಭಾರತೀಯನಿಗೆ ವಂಚನೆ, ಬೆಂಗಳೂರು ಪೊಲೀಸ್ ಆಯುಕ್ತರಿಗೆ ಟ್ವೀಟ್ ಮಾಡಿದ ಎನ್​ಆರ್​ಐ (ಸಾಂದರ್ಭಿಕ ಚಿತ್ರ)
Jagadisha B
| Updated By: Rakesh Nayak Manchi|

Updated on:Dec 07, 2023 | 7:48 AM

Share

ಬೆಂಗಳೂರು, ಡಿ.7: ವಿದೇಶದಲ್ಲಿರುವ ಬೆಂಗಳೂರು (Bengaluru) ಮೂಲದ ವ್ಯಕ್ತಿಗೆ ಸೈಟ್ ಕೊಡಿಸುವ ನೆಪದಲ್ಲಿ ಲಕ್ಷಾಂತರ ರೂಪಾಯಿ ಪಡೆದು ವಂಚನೆ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತರಿಗೆ ಹಣ ಕಳೆದು ಕೊಂಡ ಅನಿವಾಸಿ ಭಾರತೀಯ ಟ್ವೀಟ್ ಮೂಲಕ ದೂರು ನೀಡಿದ್ದಾರೆ.

ಜಾಹಿರಾತು ಮುಖಾಂತರ ರಾಘವೇಂದ್ರ ಪ್ರಸಾದ್ ಎಂಬವರನ್ನು ಜೆಪಿ ನಗರದ ರಿಯಲ್ ಎಸ್ಟೇಟ್ ಕಂಪನಿ ಪರಿಚಯಿಸಿಕೊಂಡಿದೆ. ನಂತರ ಹೂಡಿಕೆ ಮಾಡಿಸಿಕೊಂಡು ಸೈಟ್ ಬುಕ್ ಮಾಡಿದ್ದಾರೆ. ಈಗಾಗಲೇ ವಿವಿಧ ಹಂತಗಳಲ್ಲಿ 30 ಲಕ್ಷ ಹಣ ಜಮೆ ಮಾಡಿಸಿಕೊಂಡಿದೆ. ಹಣ ಜಮೆಯಾದ ಬಳಿಕ ಬುಕ್ ಮಾಡಿದ್ದ ಸೈಟ್ ಬೇರೆಯವರಿಗೆ ಮಾರಾಟ ಮಾಡಲಾಗಿದೆ.

ಇದನ್ನೂ ಓದಿ: ಅನಾವಶ್ಯಕ ಗರ್ಭಕೋಶ ಶಸ್ತ್ರ ಚಿಕಿತ್ಸೆ; ಸರ್ಕಾರಿ ವೈದ್ಯನ ವಂಚನೆಗೆ ಸುವರ್ಣ ವಿಧಾನಸೌಧ ಬಳಿ ಮಹಿಳೆಯರಿಂದ ಧರಣಿ

ಈ ವಿಚಾರ ತಿಳಿದ ರಾಘವೇಂದ್ರ ಪ್ರಸಾದ್ ಅವರು ಕಂಪನಿಯನ್ನು ಪ್ರಶ್ನಿಸಿದಾಗ ಬೇರೆ ಸೈಟ್ ನೀಡುವುದಾಗಿ ತಿಳಿಸಿದೆ. ಈ ವೇಳೆ ಹೂಡಿಕೆ ಹಣ ವಾಪಾಸ್ ನೀಡುವಂತೆ ರಾಘವೇಂದ್ರ ಅವರು ಕಂಪನಿಗೆ ಮನವಿ ಮಾಡಿದ್ದಾರೆ. ಆದರೇ ಆರು ತಿಂಗಳಿಂದ ಹಣ ಕೊಡದೆ ವಂಚನೆ ಮಾಡುತ್ತಿದ್ದಾರೆ. ಹೀಗಾಗಿ ನ್ಯಾಯ ಕೊಡಿಸುವಂತೆ ರಾಘವೇಂದ್ರ ಅವರು ನಗರ ಪೊಲೀಸ್ ಆಯುಕ್ತರಿಗೆ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:45 am, Thu, 7 December 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ