Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಟ್ ಕೊಡಿಸುವುದಾಗಿ ನಂಬಿಸಿ ವಂಚನೆ: ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ ಅನಿವಾಸಿ ಭಾರತೀಯ

ಬೆಂಗಳೂರು ನಗರದಲ್ಲಿ ಸೈಬರ್ ಅಪರಾಧಗಳು ದಿನೇದಿನೇ ಹೆಚ್ಚುತ್ತಿದ್ದು, ಇದನ್ನು ನಿಗ್ರಹಿಸಲು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ಅದಾಗ್ಯೂ, ಸಬೈರ್ ಚೋರರು ಜನಸಾಮಾನ್ಯರನ್ನು ವಂಚಿಸುವ ಪ್ರಕರಣಗಳು ನಡೆಯುತ್ತಲೇ ಇವೆ. ಇದೀಗ, ವಿದೇಶದಲ್ಲಿರುವ ಬೆಂಗಳೂರು ಮೂಲದ ವ್ಯಕ್ತಿಗೆ ಸೈಟ್ ಕೊಡಿಸುವುದಾಗಿ ನಂಬಿಸಿ ವಂಚನೆ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಸೈಟ್ ಕೊಡಿಸುವುದಾಗಿ ನಂಬಿಸಿ ವಂಚನೆ: ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ ಅನಿವಾಸಿ ಭಾರತೀಯ
ಸೈಟ್ ಕೊಡಿಸುವುದಾಗಿ ನಂಬಿಸಿ ಅನಿವಾಸಿ ಭಾರತೀಯನಿಗೆ ವಂಚನೆ, ಬೆಂಗಳೂರು ಪೊಲೀಸ್ ಆಯುಕ್ತರಿಗೆ ಟ್ವೀಟ್ ಮಾಡಿದ ಎನ್​ಆರ್​ಐ (ಸಾಂದರ್ಭಿಕ ಚಿತ್ರ)
Follow us
Jagadisha B
| Updated By: Rakesh Nayak Manchi

Updated on:Dec 07, 2023 | 7:48 AM

ಬೆಂಗಳೂರು, ಡಿ.7: ವಿದೇಶದಲ್ಲಿರುವ ಬೆಂಗಳೂರು (Bengaluru) ಮೂಲದ ವ್ಯಕ್ತಿಗೆ ಸೈಟ್ ಕೊಡಿಸುವ ನೆಪದಲ್ಲಿ ಲಕ್ಷಾಂತರ ರೂಪಾಯಿ ಪಡೆದು ವಂಚನೆ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತರಿಗೆ ಹಣ ಕಳೆದು ಕೊಂಡ ಅನಿವಾಸಿ ಭಾರತೀಯ ಟ್ವೀಟ್ ಮೂಲಕ ದೂರು ನೀಡಿದ್ದಾರೆ.

ಜಾಹಿರಾತು ಮುಖಾಂತರ ರಾಘವೇಂದ್ರ ಪ್ರಸಾದ್ ಎಂಬವರನ್ನು ಜೆಪಿ ನಗರದ ರಿಯಲ್ ಎಸ್ಟೇಟ್ ಕಂಪನಿ ಪರಿಚಯಿಸಿಕೊಂಡಿದೆ. ನಂತರ ಹೂಡಿಕೆ ಮಾಡಿಸಿಕೊಂಡು ಸೈಟ್ ಬುಕ್ ಮಾಡಿದ್ದಾರೆ. ಈಗಾಗಲೇ ವಿವಿಧ ಹಂತಗಳಲ್ಲಿ 30 ಲಕ್ಷ ಹಣ ಜಮೆ ಮಾಡಿಸಿಕೊಂಡಿದೆ. ಹಣ ಜಮೆಯಾದ ಬಳಿಕ ಬುಕ್ ಮಾಡಿದ್ದ ಸೈಟ್ ಬೇರೆಯವರಿಗೆ ಮಾರಾಟ ಮಾಡಲಾಗಿದೆ.

ಇದನ್ನೂ ಓದಿ: ಅನಾವಶ್ಯಕ ಗರ್ಭಕೋಶ ಶಸ್ತ್ರ ಚಿಕಿತ್ಸೆ; ಸರ್ಕಾರಿ ವೈದ್ಯನ ವಂಚನೆಗೆ ಸುವರ್ಣ ವಿಧಾನಸೌಧ ಬಳಿ ಮಹಿಳೆಯರಿಂದ ಧರಣಿ

ಈ ವಿಚಾರ ತಿಳಿದ ರಾಘವೇಂದ್ರ ಪ್ರಸಾದ್ ಅವರು ಕಂಪನಿಯನ್ನು ಪ್ರಶ್ನಿಸಿದಾಗ ಬೇರೆ ಸೈಟ್ ನೀಡುವುದಾಗಿ ತಿಳಿಸಿದೆ. ಈ ವೇಳೆ ಹೂಡಿಕೆ ಹಣ ವಾಪಾಸ್ ನೀಡುವಂತೆ ರಾಘವೇಂದ್ರ ಅವರು ಕಂಪನಿಗೆ ಮನವಿ ಮಾಡಿದ್ದಾರೆ. ಆದರೇ ಆರು ತಿಂಗಳಿಂದ ಹಣ ಕೊಡದೆ ವಂಚನೆ ಮಾಡುತ್ತಿದ್ದಾರೆ. ಹೀಗಾಗಿ ನ್ಯಾಯ ಕೊಡಿಸುವಂತೆ ರಾಘವೇಂದ್ರ ಅವರು ನಗರ ಪೊಲೀಸ್ ಆಯುಕ್ತರಿಗೆ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:45 am, Thu, 7 December 23

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ