ವಿಜಯಪುರ: ನಿಧಿ ಆಸೆ ತೋರಿಸಿ 1.87 ಕೋಟಿ ರೂ. ವಂಚಿಸಿದ್ದ ನಕಲಿ ಬಾಬಾ ಅಂದರ್​

ಜಮೀನನಲ್ಲಿರುವ ನಿಧಿ ತೆಗೆದುಕೊಡುವುದಾಗಿ ನಂಬಿಸಿ 1ಕೋಟಿ 87 ಲಕ್ಷ ರೂಪಾಯಿ ವಂಚಿಸಿದ್ದ ನಕಲಿ ಬಾಬಾ ಪೊಲೀಸರ ಅತಿಥಿಯಾಗಿದ್ದಾನೆ. ನಿಧಿ ಹೆಸರಲ್ಲಿ ಸೊಲ್ಲಾಪುರದ ಹಲವರಿಗೆ ಈತ ಮೋಸ ಮಾಡಿದ್ದಾನೆ ಎನ್ನಲಾಗಿದ್ದು, ಆರೋಪಿ ಬಾಬಾ ಮನೆಯಲ್ಲಿ ಮಾಟ ಮಂತ್ರಕ್ಕೆ ಉಪಯೋಗಿಸುವ ಹಲವು ಸಾಮಗ್ರಿಗಳು ಪತ್ತೆಯಾಗಿವೆ.

ವಿಜಯಪುರ: ನಿಧಿ ಆಸೆ ತೋರಿಸಿ 1.87 ಕೋಟಿ ರೂ. ವಂಚಿಸಿದ್ದ ನಕಲಿ ಬಾಬಾ ಅಂದರ್​
ನಕಲಿ ಬಾಬಾ ಬಂಧನ
Edited By:

Updated on: Oct 13, 2025 | 7:48 PM

ವಿಜಯಪುರ, ಅಕ್ಟೋಬರ್​ 13: ಜಮೀನನಲ್ಲಿರುವ ನಿಧಿ ತೆಗೆದುಕೊಡುವುದಾಗಿ ನಂಬಿಸಿ 1 ಕೋಟಿ 87 ಲಕ್ಷ ರೂಪಾಯಿ ವಂಚಿಸಿದ್ದ ನಕಲಿ ಬಾಬಾನನ್ನು ಸೊಲ್ಲಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ನಕಲಿ ಬಾಬಾನನ್ನು ಮಹ್ಮದ್​ ಖಾದರ್​ ಶೇಖ್ ಎಂದು ಗುರುತಿಸಲಾಗಿದೆ. ನಿಧಿ ಹೆಸರಲ್ಲಿ ಸೊಲ್ಲಾಪುರದ ಹಲವರಿಗೆ ಈತ ಮೋಸಮಾಡಿದ್ದು, ಆರೋಪಿಯನ್ನು ವಿಜಯಪುರದಲ್ಲಿ (Vijayapura) ಬಂಧಿಸಲಾಗಿದೆ.

ಸೊಲ್ಲಾಪುರದ ಗೋವಿಂದ ವಂಜಾರಿ ಎಂಬವರ ಜಮೀನಲ್ಲಿ ನಿಧಿ ಇದೆ. ಇದನ್ನು ತೆಗೆದುಕೊಡ್ತೀನಿ ಎಂದು ಮಹ್ಮದ್​ ಖಾದರ್​ ಶೇಖ್ ನಂಬಿಸಿ ವಂಚನೆ ಮಾಡಿದ್ದ. ಈ ಬಗ್ಗೆ ಸೊಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚುವರಿ ಎಸ್ಪಿ ದತ್ತಾತ್ರೇಯ ಕಾಳೆ ನೇತೃತ್ವ ತಂಡ ಆರೋಪಿಗಾಗಿ ಬಲೆ ಬೀಸಿತ್ತು. ಆರೋಪಿ ಮನೆಯಲ್ಲಿ ಮಾಟ ಮಂತ್ರಕ್ಕೆ ಉಪಯೋಗಿಸುವ ಹಲವು ಸಾಮಗ್ರಿಗಳು ಪತ್ತೆಯಾಗಿದ್ದು, ಅವುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: RSS ಸದಸ್ಯರಿಂದ ಲೈಂಗಿಕ ಕಿರುಕುಳ: ಡೆತ್​ ನೋಟ್ ಬರೆದಿಟ್ಟು ಟೆಕ್ಕಿ ಆತ್ಮಹತ್ಯೆ

ಖತರ್ನಾಕ್​ ಗ್ಯಾಂಗ್​ ಅಂದರ್​

ಮನೆ ಮಾಲೀಕರಿಗೆ ಕರೆಂಟ್​ ಶಾಕ್​ ನೀಡಿ ಕಳ್ಳತನ ಮಾಡುತ್ತಿದ್ದ ಗ್ಯಾಂಗನ್ನು ದಾವಣಗೆರೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಚನ್ನಗಿರಿ ತಾಲೂಕಿನ ಚಿರಡೋಣಿ ಗ್ರಾಮದ ಹಂಸತಾರಕಂ ಎಂಬವರ ಮನೆಯಲ್ಲಿ ಕಳ್ಳತನ ಯತ್ನ ನಡೆದಿತ್ತು. ತಡರಾತ್ರಿ ಮನೆಯ ಕಾಲಿಂಗ್​ ಬೆಲ್​ ಶಬ್ದ ಕೇಳಿ ಎಚ್ಚರಗೊಂಡ ಮನೆಯವರು ಒಳಗಿನಿಂದಲೇ ನೋಡಿದಾಗ ಮಾಸ್ಕ್​ ಧರಿಸಿದ್ದ ಮೂವರು ಕಂಡಿದ್ದರು. ಈ ವೇಳೆ ಭಯಗೊಂಡ ಮನೆ ಮಾಲೀಕ ಅಕ್ಕ ಪಕ್ಕದ ಸಂಬಂಧಿಕರಿಗೆ ಪೋನ್ ಮಾಡಿದ್ದು, ಜನ ಬರುತ್ತಿದ್ದಂತೆ ಗ್ಯಾಂಗ್​ ಪರಾರಿಯಾಗಿತ್ತು. ಮನೆ ಮಾಲೀಕರು ಬಾಗಿಲು ತೆಗೆದರೆ ಅಲ್ಲಿರುವ ಮೀಟರ್ ನಿಂದ ವೈಯರ್ ಸಂಪರ್ಕಿಸಿ ವಿದ್ಯುತ್ ಶಾಕ್ ನೀಡಲು ಕಳ್ಳರು ಪ್ಲ್ಯಾನ್​ ಮಾಡಿದ್ದರು ಎಂಬ ವಿಷಯ ತನಿಖೆ ವೇಳೆ ಗೊತ್ತಾಗಿದ್ದು, ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:47 pm, Mon, 13 October 25

ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us