AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಹಶೀಲ್ದಾರ್ ಸಮಯ ಪ್ರಜ್ಞೆಯಿಂದ ನಕಲಿ ಐಎಎಸ್‌ ಅಧಿಕಾರಿ ಪೊಲೀಸರ ಅತಿಥಿ

ರಾಮನಗರ: ನಕಲಿ ಐಎಎಸ್‌ ಅಧಿಕಾರಿ ಸೇರಿ ಓರ್ವ ಗನ್ ಮ್ಯಾನ್, ಇಬ್ಬರು ಸಹಚರರನ್ನು ಚನ್ನಪಟ್ಟಣ ಪುರ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ 37 ವರ್ಷದ ಮಹಮ್ಮದ್ ಸಲ್ಮಾನ್ ಬಂಧಿತ ನಕಲಿ ಐಎಎಸ್ ಅಧಿಕಾರಿ. ಈತನ ಜೊತೆ ಗನ್ ಮ್ಯಾನ್ ಕಮ್ ಡ್ರೈವರ್ ರವಿ, ಸಹಚರರಾದ ಮಂಜು, ಗೋವಿಂದರಾಜು ನನ್ನು ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಸಲ್ಮಾನ್ ಇನೋವಾ ಕಾರಿನಲ್ಲಿ ಕರ್ನಾಟಕ ಸರ್ಕಾರ ಎಂದು ಬೋರ್ಡ್‌ ಹಾಕಿಕೊಂಡು ನಕಲಿ ಐಎಎಸ್ ಅಧಿಕಾರಿಯಾಗಿ ಚನ್ನ ಪಟ್ಟಣದ ಐಬಿಗೆ ಬಂದಿದ್ದಾನೆ. ಆಫಿಸ್​ಗೆ ತಾಲೂಕಿನ […]

ತಹಶೀಲ್ದಾರ್ ಸಮಯ ಪ್ರಜ್ಞೆಯಿಂದ ನಕಲಿ ಐಎಎಸ್‌ ಅಧಿಕಾರಿ ಪೊಲೀಸರ ಅತಿಥಿ
ಸಾಧು ಶ್ರೀನಾಥ್​
|

Updated on:Nov 16, 2019 | 8:56 PM

Share

ರಾಮನಗರ: ನಕಲಿ ಐಎಎಸ್‌ ಅಧಿಕಾರಿ ಸೇರಿ ಓರ್ವ ಗನ್ ಮ್ಯಾನ್, ಇಬ್ಬರು ಸಹಚರರನ್ನು ಚನ್ನಪಟ್ಟಣ ಪುರ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ಮೂಲದ 37 ವರ್ಷದ ಮಹಮ್ಮದ್ ಸಲ್ಮಾನ್ ಬಂಧಿತ ನಕಲಿ ಐಎಎಸ್ ಅಧಿಕಾರಿ. ಈತನ ಜೊತೆ ಗನ್ ಮ್ಯಾನ್ ಕಮ್ ಡ್ರೈವರ್ ರವಿ, ಸಹಚರರಾದ ಮಂಜು, ಗೋವಿಂದರಾಜು ನನ್ನು ಪೊಲೀಸರು ಬಂಧಿಸಿದ್ದಾರೆ.

ಮಹಮ್ಮದ್ ಸಲ್ಮಾನ್ ಇನೋವಾ ಕಾರಿನಲ್ಲಿ ಕರ್ನಾಟಕ ಸರ್ಕಾರ ಎಂದು ಬೋರ್ಡ್‌ ಹಾಕಿಕೊಂಡು ನಕಲಿ ಐಎಎಸ್ ಅಧಿಕಾರಿಯಾಗಿ ಚನ್ನ ಪಟ್ಟಣದ ಐಬಿಗೆ ಬಂದಿದ್ದಾನೆ. ಆಫಿಸ್​ಗೆ ತಾಲೂಕಿನ ಬೆಳಕೆರೆ ಗ್ರಾಮದ, ಗ್ರಾಮ ಲೆಕ್ಕಿಗ ಹಾಗೂ ಕಂದಾಯ ನಿರೀಕ್ಷಕರನ್ನ ಕರೆಸಿಕೊಂಡಿದ್ದಾನೆ.

ಬೆಳಕೆರೆ ಗ್ರಾಮದ ಗೋಮಾಳಕ್ಕೆ ತಿದ್ದುಪಡಿ ಮಾಡಲು ತಾಕೀತು ಮಾಡಿದ್ದಾನೆ. ಐಎಎಸ್ ಅಧಿಕಾರಿ ಬಂದಿರುವ ವಿಷಯ ತಿಳಿದು ತಹಶೀಲ್ದಾರ್ ಸುದರ್ಶನ್ ಭೇಟಿಗೆ ಬಂದ ವೇಳೆ ಅಧಿಕಾರಿ ನಕಲಿ ಎಂಬುದು ಬೆಳಕಿಗೆ ಬಂದಿದೆ.

ನಕಲಿ ಐಎಎಸ್ ಅಧಿಕಾರಿ ಮಹಮ್ಮದ್ ಸಲ್ಮಾನ್​ಗೆ ನೀವು ಯಾವ ಬ್ಯಾಚ್​ನ ಅಧಿಕಾರಿ ಎಂದು ಪ್ರಶ್ನಿಸಿದಾಗ ತಡವರಿಸಿ ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾನೆ. ಈ ವೇಳೆ ಸಮಯ ಪ್ರಜ್ಞೆಯಿಂದ ತಹಶಿಲ್ದಾರ್ ಸುದರ್ಶನ್ ನಕಲಿ ಐಎಎಸ್ ಅಧಿಕಾರಿಯಾದ ಮಹಮ್ಮದ್ ಸಲ್ಮಾನ್​ನನ್ನ ಹಿಡಿದು ಚನ್ನಪಟ್ಟಣ ಪುರ ಪೊಲೀಸರಿಗೆ ಒಪ್ಪಿಸಿದ್ದಾರೆ.

ನಕಲಿ ಐಎಎಸ್ ಅಧಿಕಾರಿ ರಾಜ್ಯದ ಹಲವೆಡೆ ಇದೇ ರೀತಿ ಮೋಸ ಮಾಡಿರುವ ಬಗ್ಗೆ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಕಾರ್ ಸೇರಿದಂತೆ ಹಲವಾರು ಸೀಲ್, ಪೊಲೀಸ್ ಲಾಠಿ, ಟೋಪಿ, ಲ್ಯಾಪ್ ಟಾಪ್, ಮೂರು ಮೊಬೈಲ್, ಕ್ಯಾಮೆರಾ, ಫೈಲ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Published On - 8:55 pm, Sat, 16 November 19

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ