AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕರನ್ನ ವಂಚಿಸುತ್ತಿದ್ದ ನಕಲಿ ಮಿಲಿಟರಿ ಅಧಿಕಾರಿ ಸೆರೆ

ಬೆಳಗಾವಿ: ಸೇನೆಗೆ ಸೇರಿಸುವುದಾಗಿ ಯುವಕರನ್ನು ವಂಚಿಸುತ್ತಿದ್ದ ನಕಲಿ ಮಿಲಿಟರಿ ಅಧಿಕಾರಿಯನ್ನು ಬೆಳಗಾವಿಯ ಕ್ಯಾಂಪ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಾಗರ್ ಪಾಟೀಲ್ ಬಂಧಿತ ಆರೋಪಿ. ಬಂಧಿತನಿಂದ ಎರಡು ನಕಲಿ ಪಿಸ್ತೂಲ್, ನಕಲಿ ಸೇನಾ ಸಮವಸ್ತ್ರ, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಗುರ್ಲಗ‌ಂಜಿ ಗ್ರಾಮದ ಸಾಗರ್, ಬೆಳಗಾವಿಯ ಅನಗೋಳ ಗ್ರಾಮದಲ್ಲಿ ವಾಸವಿದ್ದ. ಬೆಳಗ್ಗೆ ರನ್ನಿಂಗ್ ಪ್ರ್ಯಾಕ್ಟೀಸ್​ಗೆ ಬಂದ ಯುವಕರನ್ನೇ ಟಾರ್ಗೆಟ್ ಮಾಡ್ತಿದ್ದ. ಕಳೆದ ಅಕ್ಟೋಬರ್ ತಿಂಗಳಲ್ಲಿ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಸೇನಾ ಭರ್ತಿ […]

ಯುವಕರನ್ನ ವಂಚಿಸುತ್ತಿದ್ದ ನಕಲಿ ಮಿಲಿಟರಿ ಅಧಿಕಾರಿ ಸೆರೆ
ಸಾಧು ಶ್ರೀನಾಥ್​
|

Updated on: Dec 21, 2019 | 8:26 AM

Share

ಬೆಳಗಾವಿ: ಸೇನೆಗೆ ಸೇರಿಸುವುದಾಗಿ ಯುವಕರನ್ನು ವಂಚಿಸುತ್ತಿದ್ದ ನಕಲಿ ಮಿಲಿಟರಿ ಅಧಿಕಾರಿಯನ್ನು ಬೆಳಗಾವಿಯ ಕ್ಯಾಂಪ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಾಗರ್ ಪಾಟೀಲ್ ಬಂಧಿತ ಆರೋಪಿ. ಬಂಧಿತನಿಂದ ಎರಡು ನಕಲಿ ಪಿಸ್ತೂಲ್, ನಕಲಿ ಸೇನಾ ಸಮವಸ್ತ್ರ, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ಮೂಲತಃ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಗುರ್ಲಗ‌ಂಜಿ ಗ್ರಾಮದ ಸಾಗರ್, ಬೆಳಗಾವಿಯ ಅನಗೋಳ ಗ್ರಾಮದಲ್ಲಿ ವಾಸವಿದ್ದ. ಬೆಳಗ್ಗೆ ರನ್ನಿಂಗ್ ಪ್ರ್ಯಾಕ್ಟೀಸ್​ಗೆ ಬಂದ ಯುವಕರನ್ನೇ ಟಾರ್ಗೆಟ್ ಮಾಡ್ತಿದ್ದ. ಕಳೆದ ಅಕ್ಟೋಬರ್ ತಿಂಗಳಲ್ಲಿ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಸೇನಾ ಭರ್ತಿ ನಡೆದಿತ್ತು. ಈ ವೇಳೆ ಸೇನಾ ಸಮವಸ್ತ್ರ ಧರಿಸಿ ಗ್ರೌಂಡ್ ಬಳಿ ಆಗಮಿಸಿದ್ದ ಸಾಗರ್, ಸೇನಾ ಭರ್ತಿಗೆ ಬಂದ ಯುವಕರಿಗೆ ತಾನು ಮಿಲಿಟರಿ ಅಧಿಕಾರಿ ಅಂತಾ ನಂಬಿಸಿದ್ದ.

ಸೇನೆಗೆ ಸೇರಲು ನಾನು ನಿಮಗೆ ತರಬೇತಿ ನೀಡುವೆ ಎಂದು ನಂಬಿಸಿ, ಅಕ್ಟೋಬರ್ 28ರಂದು ಓರ್ವ ಯುವಕನಿಂದ 1.10ಲಕ್ಷ ಹಣ ಪಡೆದಿದ್ದ. ಅಷ್ಟೇ ಅಲ್ಲದೇ ಇನ್ನೂ ಹಲವು ಯುವಕರಿಂದ ಹಣ ಪಡೆದಿದ್ದಾನೆ ಎನ್ನಲಾಗಿದೆ. ಮೋಸ‌ ಹೋದ ಯುವಕರು ಈ ಕುರಿತು ಕ್ಯಾಂಪ್ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ನಕಲಿ ಮಿಲಿಟರಿ ಅಧಿಕಾರಿ ಸಾಗರ್ ಪಾಟೀಲ್​ನನ್ನು ಬಂಧಿಸಿದ್ದಾರೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?