AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆ: ಸಚಿವ ಎಂಬಿ ಪಾಟೀಲ್ ಸುಳಿವು

ಹೈದರಾಬಾದ್​​ನಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆಯಾಗಿದ್ದು, 2 ಕೋಟಿ ರೂ. ಮೌಲ್ಯದ ಸಾಮಾಗ್ರಿ ವಶಕ್ಕೆ ಪಡೆಯಲಾಗಿದೆ. ನಕಲಿ ಮೈಸೂರ್ ಸ್ಯಾಂಡಲ್ ಸಾಬೂನು ಹೈದರಾಬಾದ್ ಮಾರುಕಟ್ಟೆಗೆ ಪೂರೈಕೆಯಾಗುತ್ತಿರುವ ಬಗ್ಗೆ ಸಚಿವ ಎಂಬಿ. ಪಾಟೀಲ್​​ಗೆ ಅನಾಮಧೇಯ ಕರೆ ಬಂದಿದೆ. ಇಬ್ಬರನ್ನು ಬಂಧಿಸಲಾಗಿದೆ.

ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆ: ಸಚಿವ ಎಂಬಿ ಪಾಟೀಲ್ ಸುಳಿವು
ನಕಲಿ ಮೈಸೂರು ಸ್ಯಾಂಡಲ್ ಸೋಪ್
ಕಿರಣ್​ ಹನಿಯಡ್ಕ
| Edited By: |

Updated on: Jan 13, 2024 | 5:05 PM

Share

ಬೆಂಗಳೂರು, ಜನವರಿ 13: ಹೈದರಾಬಾದ್​​ನಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪ್ (Mysore sandal soap) ತಯಾರಿಕಾ ಘಟಕ ಪತ್ತೆಯಾಗಿದ್ದು, 2 ಕೋಟಿ ರೂ. ಮೌಲ್ಯದ ಸಾಮಾಗ್ರಿ ವಶಕ್ಕೆ ಪಡೆಯಲಾಗಿದೆ. ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸೋಪ್ ನಕಲಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲ. ನಕಲಿ ಉತ್ಪನ್ನ, ಪ್ಯಾಕಿಂಗ್​ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಸೇರಿದಂತೆ ಸಾಮಾಗ್ರಿಗಳು ಪತ್ತೆಯಾಗಿವೆ. ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವರ ಬಂಧಿಸಲಾಗಿದ್ದು, ಮಾಲಕಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಸಚಿವ ಎಂಬಿ ಪಾಟೀಲ್​​ಗೆ ಅನಾಮಧೇಯ ಕರೆ

ನಕಲಿ ಮೈಸೂರ್ ಸ್ಯಾಂಡಲ್ ಸಾಬೂನು ಹೈದರಾಬಾದ್ ಮಾರುಕಟ್ಟೆಗೆ ಪೂರೈಕೆಯಾಗುತ್ತಿರುವ ಬಗ್ಗೆ ಸಚಿವ ಎಂಬಿ. ಪಾಟೀಲ್​​ಗೆ ಅನಾಮಧೇಯ ಕರೆ ಬಂದಿದೆ. ಆ ಮೂಲಕ ಕಾರ್ಖಾನೆ ಎಂಡಿ ಡಾ. ಪ್ರಶಾಂತ್​ಗೆ ನಿಗಾ ವಹಿಸಲು ಸೂಚಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಮಗಳ ಕಾಲೇಜು ಸೀಟ್‌ಗಾಗಿ ಅಡ್ಡದಾರಿ ಹಿಡಿದ ಉದ್ಯಮಿ, ಕೊನೆಗೆ ಆತನೇ ಕಿಡ್ನಾಪ್!

ಕಾರ್ಯಪ್ರವೃತ್ತರಾಗಿದ್ದ ಸಿಕಂದರಾಬಾದಿನಲ್ಲಿರುವ ಕೆಎಸ್​ಡಿಎಲ್ ಅಧಿಕೃತ ಮಾರಾಟ ಕಚೇರಿ ಸಿಬ್ಬಂದಿ ಹೈದರಾಬಾದಿನ ಕೆಲವು ಪ್ರದೇಶಗಳಲ್ಲಿ ನಕಲಿ ಸಾಬೂನು ಮಾರಾಟ ಕಂಡುಬಂದಿದೆ. ಸ್ವತಃ 1 ಲಕ್ಷ ರೂಪಾಯಿ ಬೆಲೆಯ ಉತ್ಪನ್ನ ಖರೀದಿಸಿ ಮೂಲ ಪತ್ತೆಗೆ ಕೆಎಸ್​ಡಿಎಲ್ ಸಿಬ್ಬಂದಿ ಮುಂದಾಗಿದ್ದರು.

ಇದನ್ನೂ ಓದಿ: ಪ್ರೀತಿಸಲು ನಿರಾಕರಿಸಿದ ಯುವತಿಗೆ ಚೂರಿ ಇರಿತ ಕೇಸ್​: ಆರೋಪಿಗೆ 18 ವರ್ಷ ಒಂದು ತಿಂಗಳು ಸಜೆ

ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಬೇಡಿಕೆ ಇದೆ ಎಂಬ ಕಾರಣ ಕೊಟ್ಟು 25 ಲಕ್ಷ ರೂ. ಬೆಲೆಯ ಸೋಪ್ ಖರೀದಿಗೆ ಕೆಎಸ್​ಡಿಎಲ್ ಸಿಬ್ಬಂದಿ ಆರ್ಡರ್ ಕೊಟ್ಟಿದ್ದರು. ಸ್ವತಃ ತಾವೇ ವಾಹನದಲ್ಲಿ ಸಾಗಿಸುವ ನೆಪದಲ್ಲಿ ಉತ್ಪಾದನೆ ಮಾಡುತ್ತಿದ್ದ ಸ್ಥಳಕ್ಕೆ ತೆರಳಿ ಪತ್ತೆ ಹಚ್ಚಿದ್ದಾರೆ.

ರಾತ್ರಿ ಬೀಗ ಮುರಿದು 50 ಸಾವಿರ ರೂ. ಕಳ್ಳತನ

ಬಾಗಲಕೋಟೆ: ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ಚಾಕು ಹಿಡಿದು ಅಂಗಡಿಗೆ ನುಗ್ಗಿ 50 ಸಾವಿರ ರೂಪಾಯಿ ದೋಚಿ ಕಳ್ಳರು ಪರಾರಿ ಆಗಿರುವಂತಹ ಘಟನೆ ನಡೆದಿದೆ. ಬಸವೇಶ್ವರ ಹಾರ್ಡ್​​​​ವೇರ್, ನಂದಿ ಬೇಕರಿ, ಕಿಕ್ ಬೆಲ್ಲದ ಚಹಾ, ಬನಶಂಕರಿ ಬೇಕರಿಯಲ್ಲಿ ಕಳ್ಳತನ ಮಾಡಲಾಗಿದೆ. ಜ.10ರ ರಾತ್ರಿ ನಡೆದ ಘಟನೆಯ ದೃಶ್ಯ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೀಳಗಿ ‌ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ