AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈ ಡೋಸ್​ನಿಂದ ಗ್ರಾಮ ಲೆಕ್ಕಾಧಿಕಾರಿ ಬಲಿ, ವೈದ್ಯರ ನಿರ್ಲಕ್ಷ್ಯವೆಂದ ಕುಟುಂಬಸ್ಥರು

ಕಲಬುರಗಿ: ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಆರೋಪಿಸಿ ಇಡೀ ಕುಟುಂಬ ಕಣ್ಣೀರು ಹಾಕಿದೆ. ಪ್ರಾಣ ಉಳಿಸಬೇಕಿದ್ದ ವೈದ್ಯರೇ ಇಲ್ಲಿ ಈತನ ಸಾವಿಗೆ ಕಾರಣರಾಗಿದ್ದಾರಂತೆ. ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾದರಾ ಗ್ರಾಮ ಲೆಕ್ಕಾಧಿಕಾರಿ..? ಕಲಬುರಗಿ ತಾಲೂಕಿನ ನಂದೂರು ಗ್ರಾಮ ನಿವಾಸಿ ಅಣವೀರಪ್ಪ ಮೃತ ವ್ಯಕ್ತಿ. ಇವರು ಗ್ರಾಮ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡ್ತಿದ್ರು. 4 ದಿನದ ಹಿಂದೆ ರಕ್ತ ವಾಂತಿ ಮಾಡಿಕೊಳ್ಳುತ್ತಿದ್ದಾರೆ ಎಂದು ಸಂಬಂಧಿಕರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ, ಜಿಲ್ಲಾಸ್ಪತ್ರೆಗೆ ದಾಖಲಿಸಿದ ನಂತರವೂ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿಲ್ಲ. ಯಾಕಂದ್ರೆ, ವೈದ್ಯರು […]

ಹೈ ಡೋಸ್​ನಿಂದ ಗ್ರಾಮ ಲೆಕ್ಕಾಧಿಕಾರಿ ಬಲಿ,  ವೈದ್ಯರ ನಿರ್ಲಕ್ಷ್ಯವೆಂದ ಕುಟುಂಬಸ್ಥರು
ಸಾಧು ಶ್ರೀನಾಥ್​
|

Updated on:Nov 21, 2019 | 10:56 AM

Share

ಕಲಬುರಗಿ: ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಆರೋಪಿಸಿ ಇಡೀ ಕುಟುಂಬ ಕಣ್ಣೀರು ಹಾಕಿದೆ. ಪ್ರಾಣ ಉಳಿಸಬೇಕಿದ್ದ ವೈದ್ಯರೇ ಇಲ್ಲಿ ಈತನ ಸಾವಿಗೆ ಕಾರಣರಾಗಿದ್ದಾರಂತೆ.

ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾದರಾ ಗ್ರಾಮ ಲೆಕ್ಕಾಧಿಕಾರಿ..? ಕಲಬುರಗಿ ತಾಲೂಕಿನ ನಂದೂರು ಗ್ರಾಮ ನಿವಾಸಿ ಅಣವೀರಪ್ಪ ಮೃತ ವ್ಯಕ್ತಿ. ಇವರು ಗ್ರಾಮ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡ್ತಿದ್ರು. 4 ದಿನದ ಹಿಂದೆ ರಕ್ತ ವಾಂತಿ ಮಾಡಿಕೊಳ್ಳುತ್ತಿದ್ದಾರೆ ಎಂದು ಸಂಬಂಧಿಕರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ, ಜಿಲ್ಲಾಸ್ಪತ್ರೆಗೆ ದಾಖಲಿಸಿದ ನಂತರವೂ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿಲ್ಲ. ಯಾಕಂದ್ರೆ, ವೈದ್ಯರು ಸರಿಯಾಗಿ ಟ್ರೀಟ್ಮೇಂಟೇ ನೀಡಿಲ್ವಂತೆ.

ಒಂದು ವಾರ್ಡ್​ನಿಂದ ಮತ್ತೊಂದು ವಾರ್ಡ್​ಗೆ ಬದಲಾಯಿಸಿದ್ದು ಬಿಟ್ಟರೆ ಸರಿಯಾಗಿ ಟ್ರೀಟ್ಮೇಂಟೇ ಕೊಟ್ಟಿಲ್ಲ ಎಂದು ಹೇಳಲಾಗುತ್ತಿದೆ. ನಿನ್ನೆ ಮಧ್ಯಾಹ್ನ ಹೈ ಡೋಸ್ ಇಂಜೆಕ್ಷನ್ ನೀಡಿದ್ರಿಂದ ಮೃತಪಟ್ಟಿದ್ದಾನೆ ಅಂತಾ ಮೃತನ ಪತ್ನಿ ಆರೋಪಿಸುತ್ತಿದ್ದಾರೆ.

ಕಲಬುರಗಿ ಜಿಲ್ಲಾಸ್ಪತ್ರೆ ಅವ್ಯವಸ್ಥೆ ಆಗರವಾಗಿದೆ. ಬಹುತೇಕ ವೈದ್ಯರು ಸರಿಯಾಗಿ ಚಿಕಿತ್ಸೆ ನೀಡದೆ ಉದಾಸೀನತೆ ತೋರ್ತಾಯಿದ್ದಾರೆ. ಡ್ಯೂಟಿ ಡಾಕ್ಟರ್ ಬದ್ಲಾಗಿ ಸ್ಟೂಡೆಂಟ್ಸೇ ರೋಗಿಗಳಿಗೆ ಚಿಕಿತ್ಸೆ ನೀಡ್ತಿದ್ದಾರೆ. ಇದ್ರಿಂದಲೇ ಅನೇಕರು ಮೃತಟ್ಟಿದ್ದಾರೆ ಅನ್ನೋ ಆರೋಪಗಳು ಕೇಳಿಬರ್ತಿವೆ. ಈ ಬಗ್ಗೆ ಜಿಮ್ಸ್ ನಿರ್ದೇಶಕರು, ವೈದ್ಯರ ನಿರ್ಲಕ್ಷ್ಯದಿಂದ ವ್ಯಕ್ತಿ ಮೃತಪಟ್ಟಿದ್ರೆ, ಖಂಡಿತವಾಗಿ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Published On - 8:47 am, Thu, 21 November 19

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ