AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌಟುಂಬಿಕ ಕಲಹ ಹಿನ್ನೆಲೆ ಪತಿ ಮನೆಯಲ್ಲಿ ಪತ್ನಿಯ ಅನುಮಾನಾಸ್ಪದ ಸಾವು

ನವ್ಯಾ ಪತಿ ಚೇತನ್ ಕುಮಾರ್​ಗೆ ಮೃತಳ ಸಂಬಂಧಿಗಳು ಛೀಮಾರಿ ಹಾಕಿ ಥಳಿಸಿದ್ದಾರೆ. ಇನ್ನೂ ಮೃತಳ ತಂದೆ ತಾಯಿಯಿಂದ ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

ಕೌಟುಂಬಿಕ ಕಲಹ ಹಿನ್ನೆಲೆ ಪತಿ ಮನೆಯಲ್ಲಿ ಪತ್ನಿಯ ಅನುಮಾನಾಸ್ಪದ ಸಾವು
ಟೆಕ್ಕಿ ನವ್ಯಾ ಎಸ್.ಆರ್
TV9 Web
| Edited By: |

Updated on: Feb 24, 2022 | 10:39 PM

Share

ಚಿಕ್ಕಬಳ್ಳಾಪುರ: ಕುಟುಂಬ ಕಲಹ ಹಿನ್ನಲೆ ಮನೆಯಲ್ಲಿ ಟೆಕ್ಕಿ ಅನುಮಾನಸ್ಪದವಾಗಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ಪ್ರಶಾಂತ್ ನಗರದ ಗಂಡನ ಮನೆಯಲ್ಲಿ ನವ್ಯಾ ಎಸ್.ಆರ್ (23) ಮೃತಪಟ್ಟಿದ್ದಾಳೆ. ವರದಕ್ಷಣೆ ಕಿರುಕುಳ ನೀಡಿ ನೇಣು ಹಾಕಿರುವುದಾಗಿ ಆರೋಪಿಸಲಾಗಿದೆ. ಮಗಳ ಸಾವಿನ ಸುದ್ದಿಯನ್ನು ಕೇಳಿ ತಂದೆ ಎಂ.ರಾಮಚಂದ್ರಪ್ಪ ಅಸ್ವಸ್ಥರಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ನವ್ಯಾ ಪತಿ ಚೇತನ್ ಕುಮಾರ್​ಗೆ ಮೃತಳ ಸಂಬಂಧಿಗಳು ಛೀಮಾರಿ ಹಾಕಿ ಥಳಿಸಿದ್ದಾರೆ. ಮಹಿಳೆಯರ ಕೈಯಿಂದ ಚೇತನ್ ಕುಮಾರ್​ನನ್ನು ಬಿಡಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಇನ್ನೂ ಮೃತಳ ತಂದೆ ತಾಯಿಯಿಂದ ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅಕ್ರಮವಾಗಿ ದಾಸ್ತಾನಿಟ್ಟಿರುವ ಗೋವಾ ಮದ್ಯ ಜಪ್ತಿ

ಕಾರವಾರ: ಅಕ್ರಮವಾಗಿ ದಾಸ್ತಾನಿಟ್ಟಿರುವ ಗೋವಾ ಮದ್ಯ ಜಪ್ತಿ ಮಾಡಲಾಗಿದೆ. ಕಾರವಾರ ತಾಲೂಕಿನ ಐಸ್ ಫ್ಯಾಕ್ಟರಿ ಚೆಂಡಿಯಾ ಗ್ರಾಮದಲ್ಲಿ ಜಪ್ತಿ ಮಾಡಲಾಗಿದ್ದು, ಸುನಿಲ್ ಲಕ್ಷ್ಮಣ ಪಡ್ತಿ ಆಮದಳ್ಳಿ ಇವರ ಮನೆಯಲ್ಲಿ ಅಕ್ರಮವಾಗಿ ಗೋವಾ ಮದ್ಯೆ ದಾಸ್ತಾನು ಮಾಡಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಅಬಕಾರಿ ನಿರೀಕ್ಷಕರು ಸುವರ್ಣ ಬಿ ನಾಯ್ಕ್ ಅವರ ನೇತೃತ್ವದಲ್ಲಿ ದಾಳಿ ಮಾಡಿದ್ದಾರೆ. ಒಟ್ಟು 369,360 ಲೀಟರ್ ಮದ್ಯೆವನ್ನು ಅಬಕಾರಿ ಇಲಾಖೆ ವಶಕ್ಕೆ ಪಡೆದಿದ್ದಾರೆ. ಗೋವಾ ಪೆನ್ನಿ 81,000 ಲೀ, ಗೋವಾ ಬೀಯರ್ 72,000 ಲೀ, ಜಪ್ತಿ ಮಾಡಲಾಗಿದ್ದು, ಅಂದಾಜು 2,44,800 ರೂ ನಷ್ಟು ಮೌಲ್ಯದ ಮದ್ಯ ಜಪ್ತಿ ಮಾಡಲಾಗಿದೆ. ಸದ್ಯ ಪ್ರಕರಣದ ಪ್ರಥಮ ವರ್ತಮಾನ ವರದಿ ನ್ಯಾಯಾಲಕ್ಕೆ ಸಲ್ಲಿಕೆ ಮಾಡಲಾಗಿದೆ.

ದರೋಡೆಗೆ ಹೊಂಚು ಹಾಕಿದ್ದ ರೌಡಿಶೀಟರ್ ಮತ್ತು ಸಹಚರರ ಬಂಧನ

ಬೆಂಗಳೂರು: ದರೋಡೆಗೆ ಹೊಂಚು ಹಾಕಿದ್ದ ರೌಡಿಶೀಟರ್ ಮತ್ತು ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಯಲಹಂಕ ಠಾಣೆ ರೌಡಿಶೀಟರ್​ ವಸೀಮ್, ಸಹಚರರಾದ ನಾಜೀಂ ಪಾಷಾ, ಮೋಷಿನ್ ಖಾನ್ ಬಂಧಿಸಿ ಮಾರಕಾಸ್ತ್ರಗಳನ್ನ ಜಪ್ತಿ ಮಾಡಿದ್ದಾರೆ. ಡಿಜೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ದರೋಡೆಗೆ ಹೊಂಚು ಹಾಕ್ತಿದ್ದ ಆರೋಪಿಗಳನ್ನು ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಡಿ.ಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಮಿಳುನಾಡು ಮೂಲದ ದಂತ ಚೋರ ಗ್ಯಾಂಗ್ ಅರೆಸ್ಟ್

ಬೆಂಗಳೂರು: ತಮಿಳುನಾಡು ಮೂಲದ ದಂತಚೋರರ ಗ್ಯಾಂಗ್​ನ 8 ಆರೋಪಿಗಳನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಬೆಟ್ಟಮುಗಿಲಾಲಂ ಅರಣ್ಯ ಪ್ರದೇಶದಲ್ಲಿ 2 ಆನೆಯನ್ನು ಈ ಗ್ಯಾಂಗ್​ ಕೊಂದ್ದು ಹಾಕಿತ್ತು. 42 ಲಕ್ಷ ರೂಪಾಯಿಗೆ ಆನೆ ಸೊಂಡಿಲು, ದಂತ ಮಾರಾಟಕ್ಕೆ ಯತ್ನಿಸುತ್ತಿದ್ದ ಗ್ಯಾಂಗ್​​ನ್ನು​ ಸೆರೆ ಹಿಡಿಯಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಹೆಬ್ಬಗೋಡಿ ಪೊಲೀಸರು, ದಂತ ಚೋರ್ ಗ್ಯಾಂಗ್ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ದಂತಚೋರರಿಂದ ಆನೆ ದಂತ ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ಮಾಡಲಾಗುತ್ತಿದೆ.

ಇದನ್ನೂ ಓದಿ:

ಹರ್ಷ ಹುತಾತ್ಮನಾಗಿದ್ದಾನೆ, ಕೊಲೆ ಮಾಡಿದವರನ್ನು ಗುಂಡಿಟ್ಟು ಕೊಲ್ಲಬೇಕು ಎಂದರು ಬಿಜೆಪಿ ಶಾಸಕ ಹರತಾಳು ಹಾಲಪ್ಪ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ