AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಮಹಿಳೆಯಿಂದ ಕಿಡ್ನಿ ದಾನ ಪಡೆದು ಮೋಸ: ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ

ಪತಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಮಹಿಳೆಯಿಂದ ಕಿಡ್ನಿ ದಾನ ಪಡೆದು ಮೋಸ ಮಾಡಿದ್ದು, ಇದೀಗ ಮಹಿಳೆ ಪೊಲೀಸ್ ಮೆಟ್ಟಿಲೇರಿದ್ದಾಳೆ.

ಪತಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಮಹಿಳೆಯಿಂದ ಕಿಡ್ನಿ ದಾನ ಪಡೆದು ಮೋಸ: ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ
Crime
TV9 Web
| Edited By: |

Updated on:Dec 19, 2022 | 4:21 PM

Share

ಚಂಡೀಗಢ: ಕಿಡ್ನಿ ದಾನ (kidney donate) ಮಾಡಿದ್ರೆ ಗಂಡನಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಗೆ ಮೋಸ ಮಾಡಿರುವ ಘಟನೆ ನಡೆದಿದೆ. ಗಂಡನಿಗೆ ಸರ್ಕಾರಿ ಕೆಲಸ ಆಮಿಷವೊಡ್ಡಿ ನನ್ನಿಂದ ಕಿಡ್ನಿ ದಾನ ಮಾಡಿಸಿಕೊಂಡು ವಂಚಿಸಿದ್ದಾರೆ ಎಂದು ಹರಿಯಾಣದ ಬಲ್ಲಭಗಢ ಮೂಲದ ಮಹಿಳೆಯೊಬ್ಬಳು ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾಳೆ.

ಇದನ್ನೂ ಓದಿ: ಏಕಾಏಕಿ ಬೆತ್ತಲಾಗಿ ರೂಮಿನಿಂದ ಬಂದ ಮಹಿಳೆ: ಫೈವ್​ ಸ್ಟಾರ್​ ಹೋಟೆಲ್​ನಲ್ಲಿ​ ನಡೆದ ಹೈಡ್ರಾಮ​ ವಿಡಿಯೋ ವೈರಲ್

ಎರಡು ವರ್ಷಗಳ ಹಿಂದೆ ಕಿಡ್ನಿ ಕಸಿಗೆ ಸಂಬಂಧಿಸಿದ ಜಾಹಿರಾತನ್ನು ಮಹಿಳೆ ನೋಡಿದ್ದಳು. ಬಳಿಕ ಜಾಹಿರಾತಿನಲ್ಲಿ ಪ್ರಕಟವಾಗಿದ್ದ ಮೊಬೈಲ್​ ನಂಬರ್​ಗೆ ಕರೆ ಮಾಡಿ, ತಾನು ಕಿಡ್ನಿ ದಾನ ಮಾಡುವುದಾಗಿ ಹೇಳಿದ್ದಳು. ನಂತರ ಮನಸ್ಸು ಬದಲಿಸಿ ಕಿಡ್ನಿ ದಾನ ಮಾಡುವುದರಿಂದ ಹಿಂದೆ ಸರಿದಿದ್ದಳು. ಇದಾದ ಬಳಿಕ ಜಾಹಿರಾತು ನೀಡಿದವರು ಮಹಿಳೆಗೆ ಹಲವು ಬಾರಿ ಕರೆ ಮಾಡಿ ಕಿಡ್ನಿ ದಾನ ಮಾಡುವಂತೆ ಮನವೊಲಿಸಿದ್ದಾರೆ.

ಕಿಡ್ನಿ ದಾನ ಮಾಡಿದರೆ ಗಂಡನಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಆಫರ್ ನೀಡಿದ್ದಾರೆ. ಈ ಆಫರ್​ಗೆ ಮಹಿಳೆ ಒಪ್ಪಿಕೊಂಡು ತನ್ನ ಒಂದು ಕಿಡ್ನಿಯನ್ನು ದಾನ ಮಾಡಿದ್ದಾಳೆ. ಫರೀದಾಬಾದ್​ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಿಡ್ನಿ ಕಸಿ ಮಾಡಲಾಯ್ತು. ಇದಾದ ಬಳಿಕ ಸಾಕಷ್ಟು ತಿಂಗಳು ಕಳೆದರು ಗಂಡನಿಗೆ ಮಾತ್ರ ಸರ್ಕಾರಿ ಕೆಲಸ ಸಿಕ್ಕಿಲ್ಲ.

ಕರೆ ಮಾಡಿ ಕೇಳಿದ್ರೆ ಯಾವುದೇ ಸ್ಪಂದನೆ ನೀಡಿಲ್ಲ. ಇದರಿಂದ ಮಹಿಳೆ ಪೊಲೀಸರ ಮೊರೆ ಹೋಗಿದ್ದು, ಅವರ ವಿರುದ್ಧ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದು. ಈ ಪ್ರಕರಣದ ಹಿಂದೆ ಅಂಗಾಂಗ ಮಾಫಿಯಾ ಏನಾದರೂ ಇದೆಯಾ? ಎಂಬ ಆಯಮದಲ್ಲೂ ತನಿಖೆ ನಡೆಸುವುದಾಗಿ ತನಿಖಾಧಿಕಾರಿ ತಿಳಿಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 4:07 pm, Mon, 19 December 22

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್