AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಮಹಿಳೆಯಿಂದ ಕಿಡ್ನಿ ದಾನ ಪಡೆದು ಮೋಸ: ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ

ಪತಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಮಹಿಳೆಯಿಂದ ಕಿಡ್ನಿ ದಾನ ಪಡೆದು ಮೋಸ ಮಾಡಿದ್ದು, ಇದೀಗ ಮಹಿಳೆ ಪೊಲೀಸ್ ಮೆಟ್ಟಿಲೇರಿದ್ದಾಳೆ.

ಪತಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಮಹಿಳೆಯಿಂದ ಕಿಡ್ನಿ ದಾನ ಪಡೆದು ಮೋಸ: ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ
Crime
TV9 Web
| Edited By: |

Updated on:Dec 19, 2022 | 4:21 PM

Share

ಚಂಡೀಗಢ: ಕಿಡ್ನಿ ದಾನ (kidney donate) ಮಾಡಿದ್ರೆ ಗಂಡನಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಗೆ ಮೋಸ ಮಾಡಿರುವ ಘಟನೆ ನಡೆದಿದೆ. ಗಂಡನಿಗೆ ಸರ್ಕಾರಿ ಕೆಲಸ ಆಮಿಷವೊಡ್ಡಿ ನನ್ನಿಂದ ಕಿಡ್ನಿ ದಾನ ಮಾಡಿಸಿಕೊಂಡು ವಂಚಿಸಿದ್ದಾರೆ ಎಂದು ಹರಿಯಾಣದ ಬಲ್ಲಭಗಢ ಮೂಲದ ಮಹಿಳೆಯೊಬ್ಬಳು ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾಳೆ.

ಇದನ್ನೂ ಓದಿ: ಏಕಾಏಕಿ ಬೆತ್ತಲಾಗಿ ರೂಮಿನಿಂದ ಬಂದ ಮಹಿಳೆ: ಫೈವ್​ ಸ್ಟಾರ್​ ಹೋಟೆಲ್​ನಲ್ಲಿ​ ನಡೆದ ಹೈಡ್ರಾಮ​ ವಿಡಿಯೋ ವೈರಲ್

ಎರಡು ವರ್ಷಗಳ ಹಿಂದೆ ಕಿಡ್ನಿ ಕಸಿಗೆ ಸಂಬಂಧಿಸಿದ ಜಾಹಿರಾತನ್ನು ಮಹಿಳೆ ನೋಡಿದ್ದಳು. ಬಳಿಕ ಜಾಹಿರಾತಿನಲ್ಲಿ ಪ್ರಕಟವಾಗಿದ್ದ ಮೊಬೈಲ್​ ನಂಬರ್​ಗೆ ಕರೆ ಮಾಡಿ, ತಾನು ಕಿಡ್ನಿ ದಾನ ಮಾಡುವುದಾಗಿ ಹೇಳಿದ್ದಳು. ನಂತರ ಮನಸ್ಸು ಬದಲಿಸಿ ಕಿಡ್ನಿ ದಾನ ಮಾಡುವುದರಿಂದ ಹಿಂದೆ ಸರಿದಿದ್ದಳು. ಇದಾದ ಬಳಿಕ ಜಾಹಿರಾತು ನೀಡಿದವರು ಮಹಿಳೆಗೆ ಹಲವು ಬಾರಿ ಕರೆ ಮಾಡಿ ಕಿಡ್ನಿ ದಾನ ಮಾಡುವಂತೆ ಮನವೊಲಿಸಿದ್ದಾರೆ.

ಕಿಡ್ನಿ ದಾನ ಮಾಡಿದರೆ ಗಂಡನಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಆಫರ್ ನೀಡಿದ್ದಾರೆ. ಈ ಆಫರ್​ಗೆ ಮಹಿಳೆ ಒಪ್ಪಿಕೊಂಡು ತನ್ನ ಒಂದು ಕಿಡ್ನಿಯನ್ನು ದಾನ ಮಾಡಿದ್ದಾಳೆ. ಫರೀದಾಬಾದ್​ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಿಡ್ನಿ ಕಸಿ ಮಾಡಲಾಯ್ತು. ಇದಾದ ಬಳಿಕ ಸಾಕಷ್ಟು ತಿಂಗಳು ಕಳೆದರು ಗಂಡನಿಗೆ ಮಾತ್ರ ಸರ್ಕಾರಿ ಕೆಲಸ ಸಿಕ್ಕಿಲ್ಲ.

ಕರೆ ಮಾಡಿ ಕೇಳಿದ್ರೆ ಯಾವುದೇ ಸ್ಪಂದನೆ ನೀಡಿಲ್ಲ. ಇದರಿಂದ ಮಹಿಳೆ ಪೊಲೀಸರ ಮೊರೆ ಹೋಗಿದ್ದು, ಅವರ ವಿರುದ್ಧ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದು. ಈ ಪ್ರಕರಣದ ಹಿಂದೆ ಅಂಗಾಂಗ ಮಾಫಿಯಾ ಏನಾದರೂ ಇದೆಯಾ? ಎಂಬ ಆಯಮದಲ್ಲೂ ತನಿಖೆ ನಡೆಸುವುದಾಗಿ ತನಿಖಾಧಿಕಾರಿ ತಿಳಿಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 4:07 pm, Mon, 19 December 22

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ