AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಮಹಿಳೆಯಿಂದ ಕಿಡ್ನಿ ದಾನ ಪಡೆದು ಮೋಸ: ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ

ಪತಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಮಹಿಳೆಯಿಂದ ಕಿಡ್ನಿ ದಾನ ಪಡೆದು ಮೋಸ ಮಾಡಿದ್ದು, ಇದೀಗ ಮಹಿಳೆ ಪೊಲೀಸ್ ಮೆಟ್ಟಿಲೇರಿದ್ದಾಳೆ.

ಪತಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಮಹಿಳೆಯಿಂದ ಕಿಡ್ನಿ ದಾನ ಪಡೆದು ಮೋಸ: ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ
Crime
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Dec 19, 2022 | 4:21 PM

Share

ಚಂಡೀಗಢ: ಕಿಡ್ನಿ ದಾನ (kidney donate) ಮಾಡಿದ್ರೆ ಗಂಡನಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಗೆ ಮೋಸ ಮಾಡಿರುವ ಘಟನೆ ನಡೆದಿದೆ. ಗಂಡನಿಗೆ ಸರ್ಕಾರಿ ಕೆಲಸ ಆಮಿಷವೊಡ್ಡಿ ನನ್ನಿಂದ ಕಿಡ್ನಿ ದಾನ ಮಾಡಿಸಿಕೊಂಡು ವಂಚಿಸಿದ್ದಾರೆ ಎಂದು ಹರಿಯಾಣದ ಬಲ್ಲಭಗಢ ಮೂಲದ ಮಹಿಳೆಯೊಬ್ಬಳು ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾಳೆ.

ಇದನ್ನೂ ಓದಿ: ಏಕಾಏಕಿ ಬೆತ್ತಲಾಗಿ ರೂಮಿನಿಂದ ಬಂದ ಮಹಿಳೆ: ಫೈವ್​ ಸ್ಟಾರ್​ ಹೋಟೆಲ್​ನಲ್ಲಿ​ ನಡೆದ ಹೈಡ್ರಾಮ​ ವಿಡಿಯೋ ವೈರಲ್

ಎರಡು ವರ್ಷಗಳ ಹಿಂದೆ ಕಿಡ್ನಿ ಕಸಿಗೆ ಸಂಬಂಧಿಸಿದ ಜಾಹಿರಾತನ್ನು ಮಹಿಳೆ ನೋಡಿದ್ದಳು. ಬಳಿಕ ಜಾಹಿರಾತಿನಲ್ಲಿ ಪ್ರಕಟವಾಗಿದ್ದ ಮೊಬೈಲ್​ ನಂಬರ್​ಗೆ ಕರೆ ಮಾಡಿ, ತಾನು ಕಿಡ್ನಿ ದಾನ ಮಾಡುವುದಾಗಿ ಹೇಳಿದ್ದಳು. ನಂತರ ಮನಸ್ಸು ಬದಲಿಸಿ ಕಿಡ್ನಿ ದಾನ ಮಾಡುವುದರಿಂದ ಹಿಂದೆ ಸರಿದಿದ್ದಳು. ಇದಾದ ಬಳಿಕ ಜಾಹಿರಾತು ನೀಡಿದವರು ಮಹಿಳೆಗೆ ಹಲವು ಬಾರಿ ಕರೆ ಮಾಡಿ ಕಿಡ್ನಿ ದಾನ ಮಾಡುವಂತೆ ಮನವೊಲಿಸಿದ್ದಾರೆ.

ಕಿಡ್ನಿ ದಾನ ಮಾಡಿದರೆ ಗಂಡನಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಆಫರ್ ನೀಡಿದ್ದಾರೆ. ಈ ಆಫರ್​ಗೆ ಮಹಿಳೆ ಒಪ್ಪಿಕೊಂಡು ತನ್ನ ಒಂದು ಕಿಡ್ನಿಯನ್ನು ದಾನ ಮಾಡಿದ್ದಾಳೆ. ಫರೀದಾಬಾದ್​ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಿಡ್ನಿ ಕಸಿ ಮಾಡಲಾಯ್ತು. ಇದಾದ ಬಳಿಕ ಸಾಕಷ್ಟು ತಿಂಗಳು ಕಳೆದರು ಗಂಡನಿಗೆ ಮಾತ್ರ ಸರ್ಕಾರಿ ಕೆಲಸ ಸಿಕ್ಕಿಲ್ಲ.

ಕರೆ ಮಾಡಿ ಕೇಳಿದ್ರೆ ಯಾವುದೇ ಸ್ಪಂದನೆ ನೀಡಿಲ್ಲ. ಇದರಿಂದ ಮಹಿಳೆ ಪೊಲೀಸರ ಮೊರೆ ಹೋಗಿದ್ದು, ಅವರ ವಿರುದ್ಧ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದು. ಈ ಪ್ರಕರಣದ ಹಿಂದೆ ಅಂಗಾಂಗ ಮಾಫಿಯಾ ಏನಾದರೂ ಇದೆಯಾ? ಎಂಬ ಆಯಮದಲ್ಲೂ ತನಿಖೆ ನಡೆಸುವುದಾಗಿ ತನಿಖಾಧಿಕಾರಿ ತಿಳಿಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 4:07 pm, Mon, 19 December 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!