AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಮಹಿಳೆಯಿಂದ ಕಿಡ್ನಿ ದಾನ ಪಡೆದು ಮೋಸ: ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ

ಪತಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಮಹಿಳೆಯಿಂದ ಕಿಡ್ನಿ ದಾನ ಪಡೆದು ಮೋಸ ಮಾಡಿದ್ದು, ಇದೀಗ ಮಹಿಳೆ ಪೊಲೀಸ್ ಮೆಟ್ಟಿಲೇರಿದ್ದಾಳೆ.

ಪತಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಮಹಿಳೆಯಿಂದ ಕಿಡ್ನಿ ದಾನ ಪಡೆದು ಮೋಸ: ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ
Crime
TV9 Web
| Edited By: |

Updated on:Dec 19, 2022 | 4:21 PM

Share

ಚಂಡೀಗಢ: ಕಿಡ್ನಿ ದಾನ (kidney donate) ಮಾಡಿದ್ರೆ ಗಂಡನಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಗೆ ಮೋಸ ಮಾಡಿರುವ ಘಟನೆ ನಡೆದಿದೆ. ಗಂಡನಿಗೆ ಸರ್ಕಾರಿ ಕೆಲಸ ಆಮಿಷವೊಡ್ಡಿ ನನ್ನಿಂದ ಕಿಡ್ನಿ ದಾನ ಮಾಡಿಸಿಕೊಂಡು ವಂಚಿಸಿದ್ದಾರೆ ಎಂದು ಹರಿಯಾಣದ ಬಲ್ಲಭಗಢ ಮೂಲದ ಮಹಿಳೆಯೊಬ್ಬಳು ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾಳೆ.

ಇದನ್ನೂ ಓದಿ: ಏಕಾಏಕಿ ಬೆತ್ತಲಾಗಿ ರೂಮಿನಿಂದ ಬಂದ ಮಹಿಳೆ: ಫೈವ್​ ಸ್ಟಾರ್​ ಹೋಟೆಲ್​ನಲ್ಲಿ​ ನಡೆದ ಹೈಡ್ರಾಮ​ ವಿಡಿಯೋ ವೈರಲ್

ಎರಡು ವರ್ಷಗಳ ಹಿಂದೆ ಕಿಡ್ನಿ ಕಸಿಗೆ ಸಂಬಂಧಿಸಿದ ಜಾಹಿರಾತನ್ನು ಮಹಿಳೆ ನೋಡಿದ್ದಳು. ಬಳಿಕ ಜಾಹಿರಾತಿನಲ್ಲಿ ಪ್ರಕಟವಾಗಿದ್ದ ಮೊಬೈಲ್​ ನಂಬರ್​ಗೆ ಕರೆ ಮಾಡಿ, ತಾನು ಕಿಡ್ನಿ ದಾನ ಮಾಡುವುದಾಗಿ ಹೇಳಿದ್ದಳು. ನಂತರ ಮನಸ್ಸು ಬದಲಿಸಿ ಕಿಡ್ನಿ ದಾನ ಮಾಡುವುದರಿಂದ ಹಿಂದೆ ಸರಿದಿದ್ದಳು. ಇದಾದ ಬಳಿಕ ಜಾಹಿರಾತು ನೀಡಿದವರು ಮಹಿಳೆಗೆ ಹಲವು ಬಾರಿ ಕರೆ ಮಾಡಿ ಕಿಡ್ನಿ ದಾನ ಮಾಡುವಂತೆ ಮನವೊಲಿಸಿದ್ದಾರೆ.

ಕಿಡ್ನಿ ದಾನ ಮಾಡಿದರೆ ಗಂಡನಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಆಫರ್ ನೀಡಿದ್ದಾರೆ. ಈ ಆಫರ್​ಗೆ ಮಹಿಳೆ ಒಪ್ಪಿಕೊಂಡು ತನ್ನ ಒಂದು ಕಿಡ್ನಿಯನ್ನು ದಾನ ಮಾಡಿದ್ದಾಳೆ. ಫರೀದಾಬಾದ್​ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಿಡ್ನಿ ಕಸಿ ಮಾಡಲಾಯ್ತು. ಇದಾದ ಬಳಿಕ ಸಾಕಷ್ಟು ತಿಂಗಳು ಕಳೆದರು ಗಂಡನಿಗೆ ಮಾತ್ರ ಸರ್ಕಾರಿ ಕೆಲಸ ಸಿಕ್ಕಿಲ್ಲ.

ಕರೆ ಮಾಡಿ ಕೇಳಿದ್ರೆ ಯಾವುದೇ ಸ್ಪಂದನೆ ನೀಡಿಲ್ಲ. ಇದರಿಂದ ಮಹಿಳೆ ಪೊಲೀಸರ ಮೊರೆ ಹೋಗಿದ್ದು, ಅವರ ವಿರುದ್ಧ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದು. ಈ ಪ್ರಕರಣದ ಹಿಂದೆ ಅಂಗಾಂಗ ಮಾಫಿಯಾ ಏನಾದರೂ ಇದೆಯಾ? ಎಂಬ ಆಯಮದಲ್ಲೂ ತನಿಖೆ ನಡೆಸುವುದಾಗಿ ತನಿಖಾಧಿಕಾರಿ ತಿಳಿಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 4:07 pm, Mon, 19 December 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ