AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಾಸ್ಟ್‌ಟ್ಯಾಗ್ ರೀಚಾರ್ಜ್‌ ಹೆಸರಿನಲ್ಲಿ ವಂಚನೆ: ಬೆಂಗಳೂರಿನಲ್ಲಿ ಮೊದಲ ದೂರು ದಾಖಲು

ಬೆಂಗಳೂರು: ಫಾಸ್ಟ್‌ಟ್ಯಾಗ್ ರೀಚಾರ್ಜ್‌ಗೆ ಲಿಂಕ್ ನೀಡಿ ವಂಚನೆಗೊಳಗಾಗಿರುವ ಸಂಬಂಧ ಮೊದಲ ದೂರು ದಾಖಲಾಗಿದೆ. ಗ್ರಾಹಕ ಸೇವಾ ಕೇಂದ್ರದ ನೆಪದಲ್ಲಿ ವಂಚನೆ ಮಾಡಿರುವ ಬಗ್ಗೆ ರಾಹುಲ್ ಎಂಬುವರು ಹೆಣ್ಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರಾಹುಲ್ ಎಂಬುವರು ಫಾಸ್ಟ್‌ಟ್ಯಾಗ್ ರೀಚಾರ್ಜ್​ನಲ್ಲಿ ತಾಂತ್ರಿಕ ದೋಷ ಎದುರಿಸಿದ್ದರು. ಈ ಬಗ್ಗೆ ಬ್ಯಾಂಕ್​ನ ಅಧಿಕೃತ ಟ್ವಿಟರ್ ಖಾತೆಯಲ್ಲಿ‌ ಸಮಸ್ಯೆ ಕುರಿತು ದೂರು ನೀಡಿದ್ರು. ಟ್ವೀಟ್ ನೋಡಿ‌ ಕಸ್ಟಮರ್ ಕೇರ್ ಹೆಸರಿನಲ್ಲಿ ರಾಹುಲ್​ಗೆ ಕರೆ ಮಾಡಿದ್ದ ವಂಚಕರು, ತಾವು ಕಳುಹಿಸಿರುವ ರಿಚಾರ್ಜ್ ಲಿಂಕ್​ಗೆ ಭೇಟಿ […]

ಫಾಸ್ಟ್‌ಟ್ಯಾಗ್ ರೀಚಾರ್ಜ್‌ ಹೆಸರಿನಲ್ಲಿ ವಂಚನೆ: ಬೆಂಗಳೂರಿನಲ್ಲಿ ಮೊದಲ ದೂರು ದಾಖಲು
Follow us
ಸಾಧು ಶ್ರೀನಾಥ್​
|

Updated on:Jan 19, 2020 | 1:16 PM

ಬೆಂಗಳೂರು: ಫಾಸ್ಟ್‌ಟ್ಯಾಗ್ ರೀಚಾರ್ಜ್‌ಗೆ ಲಿಂಕ್ ನೀಡಿ ವಂಚನೆಗೊಳಗಾಗಿರುವ ಸಂಬಂಧ ಮೊದಲ ದೂರು ದಾಖಲಾಗಿದೆ. ಗ್ರಾಹಕ ಸೇವಾ ಕೇಂದ್ರದ ನೆಪದಲ್ಲಿ ವಂಚನೆ ಮಾಡಿರುವ ಬಗ್ಗೆ ರಾಹುಲ್ ಎಂಬುವರು ಹೆಣ್ಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ರಾಹುಲ್ ಎಂಬುವರು ಫಾಸ್ಟ್‌ಟ್ಯಾಗ್ ರೀಚಾರ್ಜ್​ನಲ್ಲಿ ತಾಂತ್ರಿಕ ದೋಷ ಎದುರಿಸಿದ್ದರು. ಈ ಬಗ್ಗೆ ಬ್ಯಾಂಕ್​ನ ಅಧಿಕೃತ ಟ್ವಿಟರ್ ಖಾತೆಯಲ್ಲಿ‌ ಸಮಸ್ಯೆ ಕುರಿತು ದೂರು ನೀಡಿದ್ರು. ಟ್ವೀಟ್ ನೋಡಿ‌ ಕಸ್ಟಮರ್ ಕೇರ್ ಹೆಸರಿನಲ್ಲಿ ರಾಹುಲ್​ಗೆ ಕರೆ ಮಾಡಿದ್ದ ವಂಚಕರು, ತಾವು ಕಳುಹಿಸಿರುವ ರಿಚಾರ್ಜ್ ಲಿಂಕ್​ಗೆ ಭೇಟಿ ನೀಡಿ ಯುಪಿಐ ಪಿನ್ ದಾಖಲಿಸಲು ಹೇಳಿದ್ದರು. ಯುಪಿಐ ಪಿನ್ ದಾಖಲಿಸುತ್ತಿದ್ದಂತೆ ಹಂತ ಹಂತವಾಗಿ 50 ಸಾವಿರ ರೂಪಾಯಿ ಅಪರಿಚಿತರ ಖಾತೆಗೆ ವರ್ಗಾವಣೆಯಾಗಿದೆ.

ಫಾಸ್ಟ್‌ಟ್ಯಾಗ್ ರೀಚಾರ್ಜ್ ವೇಳೆ 50 ಸಾವಿರ ರೂ. ಡೆಬಿಟ್ ಆಗಿದೆ ಎಂದು ಮೋಸ ಹೋದ ರಾಹುಲ್ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಹೆಣ್ಣೂರು ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Published On - 1:55 pm, Sat, 18 January 20

ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ