ಫಾಸ್ಟ್‌ಟ್ಯಾಗ್ ರೀಚಾರ್ಜ್‌ ಹೆಸರಿನಲ್ಲಿ ವಂಚನೆ: ಬೆಂಗಳೂರಿನಲ್ಲಿ ಮೊದಲ ದೂರು ದಾಖಲು

ಬೆಂಗಳೂರು: ಫಾಸ್ಟ್‌ಟ್ಯಾಗ್ ರೀಚಾರ್ಜ್‌ಗೆ ಲಿಂಕ್ ನೀಡಿ ವಂಚನೆಗೊಳಗಾಗಿರುವ ಸಂಬಂಧ ಮೊದಲ ದೂರು ದಾಖಲಾಗಿದೆ. ಗ್ರಾಹಕ ಸೇವಾ ಕೇಂದ್ರದ ನೆಪದಲ್ಲಿ ವಂಚನೆ ಮಾಡಿರುವ ಬಗ್ಗೆ ರಾಹುಲ್ ಎಂಬುವರು ಹೆಣ್ಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರಾಹುಲ್ ಎಂಬುವರು ಫಾಸ್ಟ್‌ಟ್ಯಾಗ್ ರೀಚಾರ್ಜ್​ನಲ್ಲಿ ತಾಂತ್ರಿಕ ದೋಷ ಎದುರಿಸಿದ್ದರು. ಈ ಬಗ್ಗೆ ಬ್ಯಾಂಕ್​ನ ಅಧಿಕೃತ ಟ್ವಿಟರ್ ಖಾತೆಯಲ್ಲಿ‌ ಸಮಸ್ಯೆ ಕುರಿತು ದೂರು ನೀಡಿದ್ರು. ಟ್ವೀಟ್ ನೋಡಿ‌ ಕಸ್ಟಮರ್ ಕೇರ್ ಹೆಸರಿನಲ್ಲಿ ರಾಹುಲ್​ಗೆ ಕರೆ ಮಾಡಿದ್ದ ವಂಚಕರು, ತಾವು ಕಳುಹಿಸಿರುವ ರಿಚಾರ್ಜ್ ಲಿಂಕ್​ಗೆ ಭೇಟಿ […]

ಫಾಸ್ಟ್‌ಟ್ಯಾಗ್ ರೀಚಾರ್ಜ್‌ ಹೆಸರಿನಲ್ಲಿ ವಂಚನೆ: ಬೆಂಗಳೂರಿನಲ್ಲಿ ಮೊದಲ ದೂರು ದಾಖಲು
ಸಾಧು ಶ್ರೀನಾಥ್​

Updated on: Jan 19, 2020 | 1:16 PM

ಬೆಂಗಳೂರು: ಫಾಸ್ಟ್‌ಟ್ಯಾಗ್ ರೀಚಾರ್ಜ್‌ಗೆ ಲಿಂಕ್ ನೀಡಿ ವಂಚನೆಗೊಳಗಾಗಿರುವ ಸಂಬಂಧ ಮೊದಲ ದೂರು ದಾಖಲಾಗಿದೆ. ಗ್ರಾಹಕ ಸೇವಾ ಕೇಂದ್ರದ ನೆಪದಲ್ಲಿ ವಂಚನೆ ಮಾಡಿರುವ ಬಗ್ಗೆ ರಾಹುಲ್ ಎಂಬುವರು ಹೆಣ್ಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ರಾಹುಲ್ ಎಂಬುವರು ಫಾಸ್ಟ್‌ಟ್ಯಾಗ್ ರೀಚಾರ್ಜ್​ನಲ್ಲಿ ತಾಂತ್ರಿಕ ದೋಷ ಎದುರಿಸಿದ್ದರು. ಈ ಬಗ್ಗೆ ಬ್ಯಾಂಕ್​ನ ಅಧಿಕೃತ ಟ್ವಿಟರ್ ಖಾತೆಯಲ್ಲಿ‌ ಸಮಸ್ಯೆ ಕುರಿತು ದೂರು ನೀಡಿದ್ರು. ಟ್ವೀಟ್ ನೋಡಿ‌ ಕಸ್ಟಮರ್ ಕೇರ್ ಹೆಸರಿನಲ್ಲಿ ರಾಹುಲ್​ಗೆ ಕರೆ ಮಾಡಿದ್ದ ವಂಚಕರು, ತಾವು ಕಳುಹಿಸಿರುವ ರಿಚಾರ್ಜ್ ಲಿಂಕ್​ಗೆ ಭೇಟಿ ನೀಡಿ ಯುಪಿಐ ಪಿನ್ ದಾಖಲಿಸಲು ಹೇಳಿದ್ದರು. ಯುಪಿಐ ಪಿನ್ ದಾಖಲಿಸುತ್ತಿದ್ದಂತೆ ಹಂತ ಹಂತವಾಗಿ 50 ಸಾವಿರ ರೂಪಾಯಿ ಅಪರಿಚಿತರ ಖಾತೆಗೆ ವರ್ಗಾವಣೆಯಾಗಿದೆ.

ಫಾಸ್ಟ್‌ಟ್ಯಾಗ್ ರೀಚಾರ್ಜ್ ವೇಳೆ 50 ಸಾವಿರ ರೂ. ಡೆಬಿಟ್ ಆಗಿದೆ ಎಂದು ಮೋಸ ಹೋದ ರಾಹುಲ್ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಹೆಣ್ಣೂರು ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Published On - 1:55 pm, Sat, 18 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us