ಹಳೇ ದ್ವೇಷ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ದಾವಣಗೆರೆ: ವಿನಾಯಕ ನಗರದಲ್ಲಿ ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಲ್ಲೆಗೊಳಗಾದ ಯುವಕ ಆಶೋಕ್​ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. 2018ರಲ್ಲಿ ಬಕ್ಲಾಸ್ ಗೇಮ್ ಆಡುವಾಗ ಮಾತಿಗೆ ಮಾತು ಬೆಳೆದು ಭರತ್ ಎಂಬುವನನ ಕೊಲೆಯಾಗಿತ್ತು. ಆಗ ಆಶೋಕ್ ಹಾಗೂ ಆತನ ಸ್ನೇಹಿತರು ಭರತ್​ನನ್ನು ಕೊಲೆ ಮಾಡಿದ್ದರು. ಕೆಲ ದಿನಗಳ ಹಿಂದಷ್ಟೇ ಆಶೋಕ್ ಜೈಲಿನಿಂದ ಬಂದಿದ್ದ. ಹೀಗಾಗಿ ಯುವಕರ ಗುಂಪೊಂದು ಅಶೋಕ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಯತ್ನ […]

ಹಳೇ ದ್ವೇಷ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ
ಸಾಧು ಶ್ರೀನಾಥ್​

Updated on: Dec 23, 2019 | 3:16 PM

ದಾವಣಗೆರೆ: ವಿನಾಯಕ ನಗರದಲ್ಲಿ ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಲ್ಲೆಗೊಳಗಾದ ಯುವಕ ಆಶೋಕ್​ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

2018ರಲ್ಲಿ ಬಕ್ಲಾಸ್ ಗೇಮ್ ಆಡುವಾಗ ಮಾತಿಗೆ ಮಾತು ಬೆಳೆದು ಭರತ್ ಎಂಬುವನನ ಕೊಲೆಯಾಗಿತ್ತು. ಆಗ ಆಶೋಕ್ ಹಾಗೂ ಆತನ ಸ್ನೇಹಿತರು ಭರತ್​ನನ್ನು ಕೊಲೆ ಮಾಡಿದ್ದರು. ಕೆಲ ದಿನಗಳ ಹಿಂದಷ್ಟೇ ಆಶೋಕ್ ಜೈಲಿನಿಂದ ಬಂದಿದ್ದ. ಹೀಗಾಗಿ ಯುವಕರ ಗುಂಪೊಂದು ಅಶೋಕ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿದ್ದಾರೆ. ಹಲ್ಲೆಗೊಳಗಾದ ಆಶೋಕ್ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us