AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ವಿಡಿಯೋ ನೋಡ್ತಿದ್ದ, ಹುಡುಗಿಯರನ್ನು ಚುಡಾಯಿಸುತ್ತಿದ್ದ ಎಂಬ ಕಾರಣಕ್ಕೆ ಮಗನನ್ನು ಕೊಂದ ತಂದೆ

ಮಗ ದಾರಿ ತಪ್ಪುತ್ತಿದ್ದಾನೆ, ಎಷ್ಟು ಹೇಳಿದರೂ ಕೇಳುವ ಸ್ಥಿತಿಯಲ್ಲಿಲ್ಲ, ನಿತ್ಯ ಅಶ್ಲೀಲ ವಿಡಿಯೋಗಳನ್ನು ನೋಡುತ್ತಿದ್ದ, ಹುಡುಗಿಯರನ್ನು ಚುಡಾಯಿಸುತ್ತಿದ್ದ ಎನ್ನುವ ಕಾರಣಕ್ಕೆ ಕೋಪಗೊಂಡ ತಂದೆ ಮಗನನ್ನು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಪಾನೀಯಕ್ಕೆ ವಿಷ ಹಾಕಿ ಮಗನನ್ನು ಹತ್ಯೆ ಮಾಡಿದ್ದಾರೆ, ಈ ಘಟನೆಗೆ ಸಂಬಂಧಿಸಿದಂತೆ ಜಯ್ ಬಟ್ಟು ಎಂಬಾತನನ್ನು ಬಂಧಿಸಲಾಗಿದೆ.

ಅಶ್ಲೀಲ ವಿಡಿಯೋ ನೋಡ್ತಿದ್ದ, ಹುಡುಗಿಯರನ್ನು ಚುಡಾಯಿಸುತ್ತಿದ್ದ ಎಂಬ ಕಾರಣಕ್ಕೆ ಮಗನನ್ನು ಕೊಂದ ತಂದೆ
ವಿಜಯ್​Image Credit source: NDTV
ನಯನಾ ರಾಜೀವ್
|

Updated on: Feb 02, 2024 | 8:59 AM

Share

ಮಗ ದಾರಿ ತಪ್ಪುತ್ತಿದ್ದಾನೆ, ಎಷ್ಟು ಹೇಳಿದರೂ ಕೇಳುವ ಸ್ಥಿತಿಯಲ್ಲಿಲ್ಲ, ನಿತ್ಯ ಅಶ್ಲೀಲ ವಿಡಿಯೋಗಳನ್ನು ನೋಡುತ್ತಿದ್ದ, ಹುಡುಗಿಯರನ್ನು ಚುಡಾಯಿಸುತ್ತಿದ್ದ ಎನ್ನುವ ಕಾರಣಕ್ಕೆ ಕೋಪಗೊಂಡ ತಂದೆ ಮಗನನ್ನು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಪಾನೀಯಕ್ಕೆ ವಿಷ ಹಾಕಿ ಮಗನನ್ನು ಹತ್ಯೆ ಮಾಡಿದ್ದಾರೆ, ಈ ಘಟನೆಗೆ ಸಂಬಂಧಿಸಿದಂತೆ ವಿಜಯ್ ಬಟ್ಟು ಎಂಬಾತನನ್ನು ಬಂಧಿಸಲಾಗಿದೆ.

ಜನವರಿ 13ರಂದು ಬಾಲಕನೊಬ್ಬ ಕಾಣೆಯಾಗಿದ್ದ ಎನ್ನುವ ದೂರನ್ನು ಪೊಲೀಸರು ಸ್ವೀಕರಿಸಿದ್ದರು. ಇದಾದ ಬಳಿಕ ಬಾಲಕನ ಶವವೂ ಪತ್ತೆಯಾಗಿತ್ತು. ಕುಟುಂಬದವರು ಶವವನ್ನು ತಮ್ಮ ಕಾಣೆಯಾದ ಮಗ ವಿಶಾಲ್ ಎಂದು ಗುರುತಿಸಿದ್ದಾರೆ ಮತ್ತು ನಂತರದ ಮರಣೋತ್ತರ ಪರೀಕ್ಷೆಯಲ್ಲಿ ಆತ ವಿಷ ಸೇವಿಸಿದ್ದಾನೆ ಎಂದು ತಿಳಿದುಬಂದಿದೆ.

ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ಕುಟುಂಬಸ್ಥರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ತಂದೆಯ ಹಾವ ಭಾವದಲ್ಲಿ ವ್ಯತ್ಯಾದವನ್ನು ಗುರುತಿಸಿದ ಪೊಲೀಸರು ಅವರನ್ನು ವಿಚಾರಿಸಿದ್ದಾರೆ. ಆಗ ತಾನೇ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ.

ಮತ್ತಷ್ಟು ಓದಿ: ಶಿವಮೊಗ್ಗದಿಂದ ರಾತ್ರಿ ವೇಳೆ ರೈಲಿನಲ್ಲಿ ಬರುತ್ತಿದ್ದ ಬೆಂಗಳೂರಿನ ಗೃಹಿಣಿ ಸಾವು, ಚಿನ್ನಾಭರಣಕ್ಕಾಗಿ ಕೊಲೆಯಾಗಿರುವ ಶಂಕೆ

ಮಗ ಓದುತ್ತಿರಲಿಲ್ಲ, ಶಾಲೆಯಲ್ಲಿ ಹೆಣ್ಣುಮಕ್ಕಳನ್ನು ಚುಡಾಯಿಸುತ್ತಿದ್ದ, ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋಗಳನ್ನು ನೋಡುತ್ತಿದ್ದ, ಹಲವು ಬಾರಿ ಮಗನಿಗೆ ಬುದ್ಧಿವಾದ ಹೇಳಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ ಹಾಗಾಗಿ ಈ ನಿರ್ಧಾರಕ್ಕೆ ಬಂದಿದ್ದಾಗಿ ತಂದೆ ಒಪ್ಪಿಕೊಂಡಿದ್ದಾರೆ.

ಶಾಲೆಗಳಿಂದಲೂ ನಿತ್ಯ ದೂರುಗಳು ಬರುತ್ತಿದ್ದವು,ಜನವರಿ 13 ರಂದು 14 ವರ್ಷದ ವಿಶಾಲ್‌ನನ್ನು ತನ್ನ ದ್ವಿಚಕ್ರ ವಾಹನದಲ್ಲಿ ತುಳಜಾಪುರ ರಸ್ತೆಗೆ ಕರೆದೊಯದಿದ್ದರು, ತಂಪಾದ ಪಾನೀಯ ಖರೀದಿಸಿ ಅದರಲ್ಲಿ ವಿಷ ಹಾಕಿ ಮಗನಿಗೆ ನೀಡಿದ್ದರು. ಶೀಘ್ರದಲ್ಲೇ ವಿಶಾಲ್ ಪ್ರಜ್ಞೆ ಕಳೆದುಕೊಂಡಿದ್ದ ಮತ್ತು ಬಟ್ಟು ಒಬ್ಬನೇ ಮನೆಗೆ ಮರಳಿದರು ಎಂದು ಪೊಲೀಸರು ತಿಳಿಸಿದ್ದಾರೆ.  ವಿಜಯ್ ಪತ್ನಿ ಜತೆಗೆ ಹೋಗಿ ಪೊಲೀಸರಿಗೆ ಮಗ ಕಾಣೆಯಾಗಿದ್ದಾನೆ ಎಂದು ದೂರು ನೀಡಲಾಗಿತ್ತು. ಬಳಿಕ ಸಿಕ್ಕಿಬಿದ್ದಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು