Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ರಾತ್ರಿ ಮಲಗಿದ್ದ ಮಗಳ ಮೇಲೆ ಮೃಗದಂತೆ ದಾಳಿ ಮಾಡಿದ ಅಪ್ಪ

ತನ್ನ ಅಪ್ರಾಪ್ತ ಮಗಳು ರಾತ್ರಿ ವೇಳೆ ಮಲಗಿದ್ದಾಗ ಆಕೆಯನ್ನು ಕಂಡು ಅಪ್ಪನ ಮನಸು ಚಂಚಲಗೊಂಡಿತು. ಆಕೆಯ ಮೇಲೆ ಮೃಗದಂತೆ ದಾಳಿ ನಡೆಸಿದ ಅಪ್ಪ ತನ್ನ ಮಗಳ ಮೇಲೇ ಅತ್ಯಾಚಾರ ನಡೆಸಲು ಯತ್ನಿಸಿದ್ದಾನೆ. ಕಣ್ಣು ಬಿಟ್ಟು ನೋಡಿದ ಮಗಳು ಹಾಸಿಗೆ ಮೇಲೆ ಅಪ್ಪನನ್ನು ನೋಡಿ ಆಘಾತಗೊಂಡಿದ್ದಾಳೆ.

Shocking News: ರಾತ್ರಿ ಮಲಗಿದ್ದ ಮಗಳ ಮೇಲೆ ಮೃಗದಂತೆ ದಾಳಿ ಮಾಡಿದ ಅಪ್ಪ
ಮಗಳ ಮೇಲೆ ಮೃಗದಂತೆ ದಾಳಿ ಮಾಡಿದ ಅಪ್ಪ
Follow us
ಸುಷ್ಮಾ ಚಕ್ರೆ
|

Updated on: Sep 03, 2024 | 7:51 PM

ರಾಯ್​ಬರೇಲಿ: ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ತನ್ನ ಸ್ವಂತ ಮಗಳು ರಾತ್ರಿ ನಿದ್ರೆ ಮಾಡುವುದನ್ನು ನೋಡಿದ ನಂತರ ತಂದೆ ಆಕೆಯ ಮೇಲೆ ಅತ್ಯಾಚಾರ ನಡೆಸಲು ಮುಂದಾಗಿದ್ದಾನೆ. ಅವನ ಅಪ್ರಾಪ್ತ ಮಗಳು ಮಲಗಿದ್ದಾಗ ಈ ಕೊಳಕು ಕೆಲಸ ಮಾಡಿದ್ದಾನೆ. ಆ ಬಾಲಕಿ ಎಚ್ಚರಗೊಂಡಾಗ ಹಾಸಿಗೆಯ ಮೇಲೆ ತನ್ನ ತಂದೆಯನ್ನು ನೋಡಿ ಗಾಬರಿಯಾಗಿದ್ದಾಳೆ.

ಬರೇಲಿಯ ಥಾನಾ ಕ್ಯಾಂಟ್ ಪ್ರದೇಶದಲ್ಲಿ 7ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತನ್ನ ತಂದೆಯ ವಿರುದ್ಧ ಅತ್ಯಾಚಾರ ಯತ್ನದ ಗಂಭೀರ ಆರೋಪ ಮಾಡಿದ್ದಾಳೆ. ವಿದ್ಯಾರ್ಥಿನಿಯ ದೂರಿನ ಪ್ರಕಾರ, ಆಕೆಯ ತಂದೆ ಆಗಾಗ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ. ಬುಧವಾರ ರಾತ್ರಿ ಕುಡಿದು ಮನೆಗೆ ಬಂದು ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ.

ಇದನ್ನೂ ಓದಿ: Shocking News: ಪತಿಯನ್ನು ಕೊಂದು ಬಾತ್ ರೂಂನಲ್ಲಿ ಶವ ಹೂತಿಟ್ಟ ಹೆಂಡತಿ; ಕೊಲೆಯ ರಹಸ್ಯ ಬಯಲಾಗಿದ್ದು ಹೇಗೆ?

ಆಕೆಯ ತಾಯಿ ತನ್ನ ತಂದೆಗೆ ವಿಚ್ಛೇದನ ನೀಡಿಲ್ಲ. ಆದರೆ ಅವಳು ಇನ್ನೊಬ್ಬ ವ್ಯಕ್ತಿಯೊಂದಿಗೆ ಲಿವ್-ಇನ್ ಸಂಬಂಧದಲ್ಲಿ ವಾಸಿಸುತ್ತಿದ್ದಾಳೆ ಎಂದು ವಿದ್ಯಾರ್ಥಿನಿ ಹೇಳಿದ್ದಾಳೆ. ತನ್ನ ತಾಯಿ ಇತರ ಜನರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾರೆ. ಬುಧವಾರ ರಾತ್ರಿ ಆಕೆಯ ತಂದೆ ಮದ್ಯದ ಅಮಲಿನಲ್ಲಿ ಮಗಳ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ್ದು, ಆಕೆ ವಿರೋಧಿಸಿದಾಗ ಆಕೆಗೆ ಥಳಿಸಿದ್ದಾರೆ.

ಈ ಘಟನೆ ಬಳಿಕ ಬಾಲಕಿ ತನ್ನ ಸೋದರ ಸಂಬಂಧಿಯನ್ನು ಕರೆದುಕೊಂಡು ಚಿಕ್ಕಮ್ಮನ ಮನೆಗೆ ಹೋಗಿದ್ದಳು. ಅಲ್ಲಿಂದ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾಳೆ. ವಿದ್ಯಾರ್ಥಿಯ ದೂರಿನ ಮೇರೆಗೆ ಆರೋಪಿಯ ವಿರುದ್ಧ ವರದಿ ಸಲ್ಲಿಸಲಾಗಿದ್ದು, ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ