AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಲ್ಲರ್​ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಟಿಪ್ಪರ್; ವಾಹನದಲ್ಲೇ ಚಾಲಕ ಸಜೀವ ದಹನ

ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪ್ಲೈ ಓವರ್ ಪಿಲ್ಲರ್​ಗೆ ಟಿಪ್ಪರ್ ಡಿಕ್ಕಿಯೊಡೆದಿದೆ. ಡಿಕ್ಕಿ ರಭಸಕ್ಕೆ ಟಿಪ್ಪರ್ ನಜ್ಜುಗುಜ್ಜಾದ ಹಿನ್ನಲೆ ವಾಹನದೊಳಗೆ ಚಾಲಕ ಸಿಲುಕಿಕೊಂಡಿದ್ದಾನೆ. ವಾಹನದಿಂದ ಹೊರಬರಲಾಗದೇ ಚಾಲಕ ಸಜೀವ ದಹನವಾಗಿದ್ದಾನೆ.

ಪಿಲ್ಲರ್​ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಟಿಪ್ಪರ್; ವಾಹನದಲ್ಲೇ ಚಾಲಕ ಸಜೀವ ದಹನ
ಬೆಂಕಿಗಾಹುತಿಯಾದ ಟಿಪ್ಪರ್.
TV9 Web
| Edited By: |

Updated on: Mar 17, 2022 | 9:44 AM

Share

ಮಂಡ್ಯ: ಪಿಲ್ಲರ್​ಗೆ ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ (tipper) ಹೊತ್ತಿ ಉರಿದಿದ್ದು, ಚಾಲಕ ಸಜೀವ ದಹನವಾದಂತಹ ಘಟನೆ ನಡೆದಿದೆ. ಮದ್ದೂರಿನ ಬೆಂ-ಮೈ ಹೆದ್ದಾರಿಯ ಎಲ್.ಐ.ಸಿ ಕಛೇರಿ ಮುಂಭಾಗ ಘಟನೆ ಸಂಭವವಿಸಿದೆ. ಬಿಡದಿಯಿಂದ ಮೈಸೂರಿಗೆ ಜೆಲ್ಲಿ ತುಂಬಿಕೊಂಡು ಟಿಪ್ಪರ್​ ತೆರಳುತ್ತಿದ್ದು, ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪ್ಲೈ ಓವರ್ ಪಿಲ್ಲರ್​ಗೆ ಟಿಪ್ಪರ್ ಡಿಕ್ಕಿಯೊಡೆದಿದೆ. ಡಿಕ್ಕಿ ರಭಸಕ್ಕೆ ಟಿಪ್ಪರ್ ನಜ್ಜುಗುಜ್ಜಾದ ಹಿನ್ನಲೆ ವಾಹನದೊಳಗೆ ಚಾಲಕ ಸಿಲುಕಿಕೊಂಡಿದ್ದಾನೆ. ವಾಹನದಿಂದ ಹೊರಬರಲಾಗದೇ ಚಾಲಕ ಸಜೀವ ದಹನವಾಗಿದ್ದಾನೆ. ಚಾಲಕನನ್ನು ಹಾಸನ ಮೂಲದ ದಿನೇಶ್ ಎಂದು ಗುರುತಿಸಲಾಗಿದೆ. ಅಗ್ನಿಶಾಮಕ ಮತ್ತು ಪೋಲೀಸ್ ಸಿಬ್ಬಂದಿಗಳು ಬೆಂಕಿ ನಂದಿಸಿ ಚಾಲಕನ ಶವ ಹೊರ ತೆಗೆದಿದ್ದಾರೆ. ಘಟನೆ ಹಿನ್ನೆಲೆ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು, ಟಿಪ್ಪರ್ ಪಕ್ಕಕ್ಕೆ ಸರಿಸಿ ಸಂಚಾರಕ್ಕೆ ಪೊಲೀಸರು ಅನುವು ಮಾಡಿಕೊಟ್ಟಿದ್ದಾರೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಒಂಟಿ ಮಹಿಳೆಯ ಬರ್ಬರ ಹತ್ಯೆ:

ಹಾಸನ: ಒಂಟಿ ಮಹಿಳೆಯ ಬರ್ಬರ ಹತ್ಯೆಯಾಗಿರುವಂತಹ ಘಟನೆ ನಡೆದಿದೆ. ಹಾಸನ ತಾಲ್ಲೂಕಿನ ದೊಡ್ಡಪುರ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು, ಮನೆಯ ಬಳಿಯೇ ಕೊಚ್ಚಿ ಕೊಂದು ಹಂತಕರು ಎಸ್ಕೇಪ್ ಆಗಿದ್ದಾರೆ. ಗ್ರಾಮದ ಗುರುಪ್ರಸಾದ್ ಪತ್ನಿ ರೇವತಿ(35) ಕೊಲೆಯಾದ ಮಹಿಳೆ. ಮನೆಯಲ್ಲಿ ಪತಿ ಹಾಗು ಮಕ್ಕಳು ಇಲ್ಲದ ವೇಳೆ ದಾಳಿ ಮಾಡಿ ಹತ್ಯೆ ಮಾಡಿದ್ದಾರೆ. ಅತ್ಯಾಚಾರಕ್ಕೆ ಯತ್ನಿಸಿದ್ದು, ಮಹಿಳೆ ಪ್ರತಿರೋಧ ತೋರಿದಾಗ ಕೊಚ್ಚಿ ಕೊಂದಿರೊ ಶಂಕೆ ವ್ಯಕ್ಯವಾಗಿದೆ. ನೆನ್ನೆ ಸಂಜೆ ಮನೆ ಹೊರಗೆ ಬಟ್ಟೆ ತೊಳೆಯುತ್ತಾ ಕುಳಿತಿದ್ದ ಮಹಿಳೆ ಮೇಲೆ ಅಟ್ಯಾಕ್ ಮಾಡಿ ಹತ್ಯೆ  ಮಾಡಲಾಗಿದೆ. ಸ್ಥಳಕ್ಕೆ ಶ್ವಾನದಳ, ಹೆಚ್ಚುಎಸ್ಪಿ ಡಾ.ನಂದಿನಿ ಸೇರಿ ಪೊಲೀಸ್ ಅಧಿಕಾರಿಗಳು ಬೇಟಿ ಮಾಡಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತಲಾ 5 ಲಕ್ಷ ರೂ. ಪರಿಹಾರ:

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟದಿಂದ ಹದಿನೈದು ಜನ ಸಾವು ಹಿನ್ನೆಲೆ, ಹದಿನೈದು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗಿದೆ. ಪರಿಹಾರ ನೀಡುವ ಬಗ್ಗೆ ವಿಧಾನಸಭೆಯಲ್ಲಿ ಒತ್ತಾಯ ವ್ಯಕ್ತವಾಗಿದೆ. ಸಿಎಂ ಪರಿಹಾರ ನಿಧಿಯಿಂದ ನೀಡಲು ಸಿಎಂ ಅನುಮೋದನೆ ಮಾಡಿದ್ದು, ಒಟ್ಟು 75 ಲಕ್ಷ ರೂ. ಸಿಎಂ ಪರಿಹಾರ ನಿಧಿ ಖಾತೆಯಿಂದ ಯಾದಗಿರಿ ಡಿಸಿ ಖಾತೆಗೆ ಬಿಡುಗಡೆಯಾಗಲಿದೆ. ಶನಿವಾರ ದೋರನಹಳ್ಳಿಗೆ ಸಿಎಂ ತೆರಳಿ ಪರಿಹಾರ ವಿತರಿಸಲಿದ್ದಾರೆ.

ಇದನ್ನೂ ಓದಿ:

Puneeth Rajkumar: ರಾಜರತ್ನ ಪುನೀತ್; ಅಪ್ಪು ನೆನಪಿನ ಅಪರೂಪದ ಫೋಟೋ ಆಲ್ಬಂ ಇಲ್ಲಿದೆ

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!