ತಾಯಿ ಸಾಕೋ ವಿಚಾರಕ್ಕೆ ಕುಟುಂಬಸ್ಥರ ನಡುವೆ ಮಚ್ಚು, ದೊಣ್ಣೆಗಳಿಂದ ಹೊಡೆದಾಟ

ಬೆಂಗಳೂರು ಗ್ರಾಮಾಂತರ: ತಾಯಿಯನ್ನು ಸಾಕುವ ವಿಚಾರಕ್ಕೆ ಕುಟುಂಬಸ್ಥರ ಮಧ್ಯೆ ಜಗಳ ನಡೆದು ಐವರ ಮೇಲೆ ಮಚ್ಚು, ದೊಣ್ಣೆಗಳಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ದೊಡ್ಡಸಾಗರಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ದೊಡ್ಡಸಾಗರಹಳ್ಳಿಯಲ್ಲಿ ನಿನ್ನೆ ರಾತ್ರಿ ಜಾಂಗುಮಾ, ರೇಷ್ಮಾ, ಮೌಲಾ ಸೇರಿ ಐವರ ಮೇಲೆ ಹಲ್ಲೆ ನಡೆದಿದೆ. ಜಾಂಗುಮಾ ಹಾಗೂ ಸಹೋದರ ಇಮಾಮ್ ಸಾಬ್ ನಡುವೆ ತಾಯಿ ಬಿಜುಮಾ ಸಾಕುವ ವಿಚಾರದಲ್ಲಿ ಗಲಾಟೆ ನಡೆದಿದೆ. ಈ ವೇಳೆ ಜಾಂಗುಮಾ ಸಹೋದರ ಇಮಾಮ್‌ ಕಡೆಯವರಿಂದ ಹಲ್ಲೆ […]

ತಾಯಿ ಸಾಕೋ ವಿಚಾರಕ್ಕೆ ಕುಟುಂಬಸ್ಥರ ನಡುವೆ ಮಚ್ಚು, ದೊಣ್ಣೆಗಳಿಂದ ಹೊಡೆದಾಟ

Updated on: Feb 03, 2020 | 4:43 PM

ಬೆಂಗಳೂರು ಗ್ರಾಮಾಂತರ: ತಾಯಿಯನ್ನು ಸಾಕುವ ವಿಚಾರಕ್ಕೆ ಕುಟುಂಬಸ್ಥರ ಮಧ್ಯೆ ಜಗಳ ನಡೆದು ಐವರ ಮೇಲೆ ಮಚ್ಚು, ದೊಣ್ಣೆಗಳಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ದೊಡ್ಡಸಾಗರಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ದೊಡ್ಡಸಾಗರಹಳ್ಳಿಯಲ್ಲಿ ನಿನ್ನೆ ರಾತ್ರಿ ಜಾಂಗುಮಾ, ರೇಷ್ಮಾ, ಮೌಲಾ ಸೇರಿ ಐವರ ಮೇಲೆ ಹಲ್ಲೆ ನಡೆದಿದೆ.

ಜಾಂಗುಮಾ ಹಾಗೂ ಸಹೋದರ ಇಮಾಮ್ ಸಾಬ್ ನಡುವೆ ತಾಯಿ ಬಿಜುಮಾ ಸಾಕುವ ವಿಚಾರದಲ್ಲಿ ಗಲಾಟೆ ನಡೆದಿದೆ. ಈ ವೇಳೆ ಜಾಂಗುಮಾ ಸಹೋದರ ಇಮಾಮ್‌ ಕಡೆಯವರಿಂದ ಹಲ್ಲೆ ಮಾಡಿಸಿದ್ದಾರೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದಕ್ಕೆ ಹೇಳೋದು ಒಂದು ತಾಯಿ ಹತ್ತಾರು ಮಕ್ಕಳನ್ನ ಸಾಕ್ತಾಳೆ ಆದ್ರೆ ಆ ಹತ್ತಾರು ಮಕ್ಕಳು ಒಬ್ಬ ತಾಯಿಯನ್ನ ಸಾಕಲು ಹಿಂಜರಿತಾರೆ ಅಂತ.

Published On - 9:52 am, Mon, 3 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us