AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಲ್ಮಿ ಶೈಲಿಯಲ್ಲಿ ಮಂಡ್ಯದಲ್ಲಿ ದರೋಡೆ; ಅಡ್ಡಗಟ್ಟಿ 20 ಲಕ್ಷ ನಗದು, ಕಾರಿನ ಜೊತೆ ಎಸ್ಕೇಪ್

ಮಂಡ್ಯದ ಹೊಸಬೂದನೂರು ಬಳಿ ಬರುತ್ತಿದ್ದಂತೆ 6 ಮಂದಿ ದುಷ್ಕರ್ಮಿಗಳು ಕಾರನ್ನ ಅಡ್ಡಗಟ್ಟಿದ್ದಾರೆ. ಸುತ್ತಿಗೆ ಹಾಗೂ ರಾಡ್ನಿಂದ ದರೋಡೆಕೋರರು ಹಲ್ಲೆ ನಡೆಸಿದ್ದಾರೆ. ಹಲ್ಲೆಯ ಬಳಿಕ ಸ್ವಿಫ್ಟ್ ಕಾರಿನ ಸಮೇತ ಎಸ್ಕೇಪ್ ಆಗಿದ್ದಾರೆ.

ಫಿಲ್ಮಿ ಶೈಲಿಯಲ್ಲಿ ಮಂಡ್ಯದಲ್ಲಿ ದರೋಡೆ; ಅಡ್ಡಗಟ್ಟಿ 20 ಲಕ್ಷ ನಗದು, ಕಾರಿನ ಜೊತೆ ಎಸ್ಕೇಪ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:May 14, 2022 | 10:57 AM

Share

ಮಂಡ್ಯ: ಹೊಸಬೂದನೂರು ಬಳಿ ಕಾರನ್ನ (Car) ಅಡ್ಡಗಟ್ಟಿ ದುಷ್ಕರ್ಮಿಗಳು ದರೋಡೆ (Robbery) ಮಾಡಿದ್ದಾರೆ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ 20 ಲಕ್ಷ ನಗದು ಹಾಗೂ ಕಾರಿನ ಜೊತೆ ಎಸ್ಕೇಪ್ ಆಗಿದ್ದಾರೆ. ಹ್ಯೂಂಡಾಯ್ ಕ್ರೇಟಾ ಕಾರಿನಲ್ಲಿ ಬಂದು ಅಡ್ಡಗಟ್ಟಿ ಈ ಕೃತ್ಯ ಎಸಗಿದ್ದಾರೆ. ಬೆಂಗಳೂರಿನಿಂದ ನಿಲೇಶ್ ಹಾಗೂ ಅವರ ಸ್ನೇಹಿತ ರುಷಿಕೇಶ್ 20 ಲಕ್ಷ ಹಣದ ಜೊತೆ ಕೇರಳಕ್ಕೆ ತೆರಳುತ್ತಿದ್ದರು. ಬೆಂಗಳೂರಿನ ರಾಜಾ ಮಾರ್ಕೆಟ್​ನ ತಿರುಮಲ ಜ್ಯುವೆಲರಿ ಶಾಪ್​ನಲ್ಲಿ ಬಂಗಾರವನ್ನ ಮಾರಾಟ ಮಾಡಿ 20 ಲಕ್ಷ ನಗದು ಜೊತೆ ತೆರಳುವ ಮಾರ್ಗ ಮಧ್ಯೆ ಈ ಕೃತ್ಯ ನಡೆದಿದೆ.

ಮಂಡ್ಯದ ಹೊಸಬೂದನೂರು ಬಳಿ ಬರುತ್ತಿದ್ದಂತೆ 6 ಮಂದಿ ದುಷ್ಕರ್ಮಿಗಳು ಕಾರನ್ನ ಅಡ್ಡಗಟ್ಟಿದ್ದಾರೆ. ಸುತ್ತಿಗೆ ಹಾಗೂ ರಾಡ್ನಿಂದ ದರೋಡೆಕೋರರು ಹಲ್ಲೆ ನಡೆಸಿದ್ದಾರೆ. ಹಲ್ಲೆಯ ಬಳಿಕ ಸ್ವಿಫ್ಟ್ ಕಾರಿನ ಸಮೇತ ಎಸ್ಕೇಪ್ ಆಗಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ದರೋಡೆಕೋರರ ಬಂಧನಕ್ಕಾಗಿ 6 ವಿಶೇಷ ತಂಡಗಳನ್ನ ರಚನೆ ಮಾಡಲಾಗಿದೆ.

ರಾಯಚೂರು ಗ್ರಾಮೀಣ ಭಾಗದಲ್ಲಿ ಹೆಚ್ಚಾದ ಸರಣಿ ಬೈಕ್ ಕಳ್ಳತನ: ರಾಯಚೂರು: ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಸರಣಿ ಬೈಕ್ ಕಳ್ಳತನ ಹೆಚ್ಚಾಗಿದೆ. ಎರಡು ಬೈಕ್ ಕಳ್ಳರ ಒಂದೇ ವಾರದಲ್ಲಿ ಅರೆಸ್ಟ್ ಆಗಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಒಟ್ಟು 10 ಲಕ್ಷ ಮೌಲ್ಯದ 22 ಬೈಕ್​ಗಳನ್ನ ಜಪ್ತಿ ಮಾಡಿದ್ದಾರೆ. ಶಂಕರ್, ಗಣೇಶ್, ಪೀರಸಾಬ್ ಹಾಗೂ ಅಭಿಷೇಕ್ ಸೇರಿ ಒಟ್ಟು ಐವರು ಅರೆಸ್ಟ್ ಆಗಿದ್ದಾರೆ. ಆರೋಪಿ ಪೀರ್ ಸಾಬ್ ಅಣ್ಣ ಅಮೀನುದ್ದಿನ್ ಸಾಬ್ ಎಸ್ಕೇಪ್ ಆಗಿದ್ದಾನೆ. ಆರೋಪಿಗಳು ಬಸ್ ನಿಲ್ದಾಣ, ಮಾರ್ಕೆಟ್​ಗಳಲ್ಲಿ ನಿಲ್ಲಿಸಿರುವ ಬೈಕ್​ಗಳನ್ನ ಟಾರ್ಗೆಟ್ ಮಾಡಿ ಕದಿಯುತ್ತಿದ್ದರು. ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ
Image
PSI Recruitment Scam: ರಸ್ತೆಯಲ್ಲೇ ಡೀಲ್, ರಸ್ತೆಯಲ್ಲೇ ಅಕ್ರಮದ ಪ್ಲ್ಯಾನ್: ವಿಚಾರಣೆ ವೇಳೆ ಡೀಲ್ ರಹಸ್ಯ ಬಿಚ್ಚಿಟ್ಟ ಆರೊಪಿಗಳು
Image
ಎಷ್ಟೇ ಸಿನಿಮಾ ಸೋತ್ರೂ ಪೂಜಾ ಹೆಗ್ಡೆಗೆ ಸಿಕ್ತಿದೆ ಹೊಸ ಆಫರ್ಸ್​; ಈಗ ವಿಜಯ್​ ಜತೆ ‘ಜನ ಗಣ ಮನ’
Image
ಮುಂದಿನ ಚುನಾವಣೆಯಲ್ಲಿ ಹೆಚ್​ಡಿ ಕುಮಾರಸ್ವಾಮಿಗೆ ಮತ ನೀಡಿ ಎಂದು ಮದುವೆ ಮನೆಯಲ್ಲಿ ಮನವಿ ಮಾಡಿದ ನವ ದಂಪತಿ; ವೈರಲ್ ಆದ ವಿಡಿಯೋ ಇದೆ
Image
ತುಮಕೂರಿನಲ್ಲಿ ವಿದ್ಯುತ್ ಹರಿದು ಬಿದ್ದು ಎರಡು ಹಸುಗಳು ಸಾವು; ಕೂದಲೆಳೆ ಅಂತರದಲ್ಲಿ ರೈತ ಪಾರು

ಇಬ್ಬರು ಡ್ರಗ್ ಪೆಡ್ಲರ್​ಗಳ ಬಂಧನ: ಬೆಂಗಳೂರು: ನಗರದಲ್ಲಿ ಪೊಲೀಸರು ಇಬ್ಬರು ಡ್ರಗ್ ಪೆಡ್ಲರ್​ಗಳನ್ನ ಬಂಧಸಿದ್ದಾರೆ. ಆರೋಪಿಗಳು ದೊಡ್ಡಬ್ಯಾಲಕೆರೆ ಗ್ರಾಮದ ಕಸಿಪು ಬಾರ್ ಆ್ಯಂಡ್ ರೆಸ್ಟೋರೆಂಟ್​ನಲ್ಲಿ ಸೆರೆಯಾಗಿದ್ದಾರೆ. ಡ್ರಗ್ ಪೆಡ್ಲರ್ ಅಖಿಬ್ ಪಾಷಾ(26), ಪ್ರದೀಪ್(34) ಬಂಧಿತ ಆರೋಪಿಗಳು. ಆರೋಪಿಗಳಿಂದ ಪೊಲೀಸರು 15 ಲಕ್ಷ ಮೌಲ್ಯದ 160 ಗ್ರಾಂ ಎಂಡಿಎಂಎ ಮಾತ್ರೆ, 3 ಮೊಬೈಲ್, ಎಲೆಕ್ಟ್ರಾನಿಕ್ ತೂಕದ ಯಂತ್ರ ಜಪ್ತಿ ಮಾಡಿದ್ದಾರೆ.

ಆರೋಪಿಗಳು ಡ್ರಗ್​ನ ನೈಜಿರಿಯಾ ಪ್ರಜೆ ಚಿಕೆ ಅಥೋನಿ ಸಾಮ್ಯುವಲ್​ನಿಂದ ಖರೀದಿಸಿ, ವಿದ್ಯಾರ್ಥಿಗಳು, ಹೊರ ರಾಜ್ಯದವರಿಗೆ ಮಾರಾಟ ಮಾಡುತ್ತಿದ್ದರು. ಅಧಿಕ ಹಣ ಸಂಪಾದನೆಗೆ ಡ್ರಗ್ಸ್​ ಮಾರಾಟಕ್ಕಿಳಿದಿದ್ದರು. ಆರೋಪಿ ಚಿಕೆ ಅಥೋನಿ ಸಾಮ್ಯುವಲ್ ಮಿಬಾತನಿಗಾಗಿ ಹುಡುಕಾಟ ನಡೆಯುತ್ತಿದೆ.

ಇದನ್ನೂ ಓದಿ

ಮುಂದಿನ ಚುನಾವಣೆಯಲ್ಲಿ ಹೆಚ್​ಡಿ ಕುಮಾರಸ್ವಾಮಿಗೆ ಮತ ನೀಡಿ ಎಂದು ಮದುವೆ ಮನೆಯಲ್ಲಿ ಮನವಿ ಮಾಡಿದ ನವ ದಂಪತಿ; ವೈರಲ್ ಆದ ವಿಡಿಯೋ ಇದೆ

ಎಷ್ಟೇ ಸಿನಿಮಾ ಸೋತ್ರೂ ಪೂಜಾ ಹೆಗ್ಡೆಗೆ ಸಿಕ್ತಿದೆ ಹೊಸ ಆಫರ್ಸ್​; ಈಗ ವಿಜಯ್​ ಜತೆ ‘ಜನ ಗಣ ಮನ’

Published On - 9:28 am, Sat, 14 May 22

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ