ಹಣಕ್ಕಾಗಿ ಫೈನಾನ್ಶಿಯರ್​ನನ್ನ ಕಿಡ್ನ್ಯಾಪ್ ಮಾಡಿದ ಕಿರಾತಕರು! ಮುಂದೇನಾಯ್ತು?

ಆನೇಕಲ್: ಹಣದ ಆಸೆಗಾಗಿ ಫೈನಾನ್ಶಿಯರ್​ನನ್ನು ಕಿಡ್ನ್ಯಾಪ್ ಮಾಡಿರುವ ಘಟನೆ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಬಳಿಯ ಸಿ.ಕೆ.ಪಾಳ್ಯದಲ್ಲಿ ನಡೆದಿದೆ. ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ರವಿ‌ ಎಂಬಾತನನ್ನು ನಾಲ್ವರು ಕಿರಾತಕರು ಅಪಹರಿಸಿದ್ದಾರೆ. ಮಚ್ಚು ಲಾಂಗುಗಳನ್ನು ಇಟ್ಟುಕೊಂಡಿದ್ದ ಖದೀಮರು, ಫೈನಾನ್ಶಿಯರ್ ರವಿಯನ್ನು ಕಾರಿನಲ್ಲಿ ಎಳೆದುಕೊಂಡು ಹೋಗಿದ್ದಾರೆ. ರವಿ ಬಳಿಯಿದ್ದ 6,500 ರೂಪಾಯಿಯನ್ನು ಕಸಿದುಕೊಂಡು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ನಂತರ ಕನಕಪುರ ರಸ್ತೆ ಬಳಿ ಬಿಟ್ಟು ಖದೀಮರು ಪರಾರಿಯಾಗಿದ್ದಾರೆ. ಫೈನಾನ್ಶಿಯರ್ ರವಿಯನ್ನು ಕಿಡ್ನ್ಯಾಪ್ ಮಾಡಿರುವ ಘಟನೆ ಮೊಬೈಲ್ ವಿಡಿಯೋದಲ್ಲಿ ಸೆರೆಯಾಗಿದೆ. […]

ಹಣಕ್ಕಾಗಿ ಫೈನಾನ್ಶಿಯರ್​ನನ್ನ ಕಿಡ್ನ್ಯಾಪ್ ಮಾಡಿದ ಕಿರಾತಕರು! ಮುಂದೇನಾಯ್ತು?
ಸಾಧು ಶ್ರೀನಾಥ್​

Updated on: May 10, 2020 | 5:14 PM

ಆನೇಕಲ್: ಹಣದ ಆಸೆಗಾಗಿ ಫೈನಾನ್ಶಿಯರ್​ನನ್ನು ಕಿಡ್ನ್ಯಾಪ್ ಮಾಡಿರುವ ಘಟನೆ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಬಳಿಯ ಸಿ.ಕೆ.ಪಾಳ್ಯದಲ್ಲಿ ನಡೆದಿದೆ. ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ರವಿ‌ ಎಂಬಾತನನ್ನು ನಾಲ್ವರು ಕಿರಾತಕರು ಅಪಹರಿಸಿದ್ದಾರೆ.

ಮಚ್ಚು ಲಾಂಗುಗಳನ್ನು ಇಟ್ಟುಕೊಂಡಿದ್ದ ಖದೀಮರು, ಫೈನಾನ್ಶಿಯರ್ ರವಿಯನ್ನು ಕಾರಿನಲ್ಲಿ ಎಳೆದುಕೊಂಡು ಹೋಗಿದ್ದಾರೆ. ರವಿ ಬಳಿಯಿದ್ದ 6,500 ರೂಪಾಯಿಯನ್ನು ಕಸಿದುಕೊಂಡು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ನಂತರ ಕನಕಪುರ ರಸ್ತೆ ಬಳಿ ಬಿಟ್ಟು ಖದೀಮರು ಪರಾರಿಯಾಗಿದ್ದಾರೆ.

ಫೈನಾನ್ಶಿಯರ್ ರವಿಯನ್ನು ಕಿಡ್ನ್ಯಾಪ್ ಮಾಡಿರುವ ಘಟನೆ ಮೊಬೈಲ್ ವಿಡಿಯೋದಲ್ಲಿ ಸೆರೆಯಾಗಿದೆ. ಅಪಹರಣವಾದ ಬಗ್ಗೆ ಬನ್ನೇರುಘಟ್ಟ ಪೊಲೀಸರಿಗೆ ರವಿ ಮಾಹಿತಿ ನೀಡಿದ್ದಾನೆ. ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us