ವಾಹನ ನಿಲ್ಲಿಸಿದ್ದಕ್ಕೆ ಪೊಲೀಸರ ಮೇಲೆ ಹಲ್ಲೆ ಮಾಡಿದ ಕುಡುಕ ಚಾಲಕ

ರಾಮನಗರ: ಮಧ್ಯಪಾನ ಸೇವಿಸಿ ವಾಹನ ಚಲಾಯಿಸುತ್ತಿದ್ದ ಚಾಲಕನನ್ನು ಪೊಲೀಸರು ಅಡ್ಡಗಟ್ಟಿ ನಿಲ್ಲಿಸಿದ್ದಕ್ಕೆ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ಘಟನೆ ರಾಮನಗರದಲ್ಲಿ ನಡೆದಿದೆ. ಚನ್ನಪಟ್ಟಣ ತಾಲೂಕು ಮಾಕಳಿ ಮೂಲದ ಟಾಟಾ ಏಸ್ ಚಾಲಕನಾಗಿದ್ದ ಗಿರೀಶ್ ಬಿಡದಿಯಿಂದಲೂ ಗಾಡಿಯಲ್ಲೇ‌ ಕುಡಿದುಕೊಂಡು ಅಡ್ಡಾದಿಡ್ಡಿ ವಾಹನ ಚಲಾಯಿಸಿಕೊಂಡು ಬಂದಿದ್ದ. ಪ್ರಶ್ನೆ ಮಾಡಿದ ಇತರೆ ವಾಹನಗಳ ಚಾಲಕರಿಗೂ ಈತ ಅವಾಜ್ ಹಾಕಿದ್ದ. ಕೂಡಲೇ ಸಾರ್ವಜನಿಕರು ಪೊಲೀಸ್ ಠಾಣೆಗೆ‌ ಮಾಹಿತಿ ನೀಡಿದ್ದರು. ಈ ಹಿನ್ನಲೆ ನಿನ್ನೆ ತಡರಾತ್ರಿ ಮಧ್ಯಪಾನ ಸೇವಿಸಿ ವಾಹನ ಚಲಾಯಿಸುತ್ತಿದ್ದ ಗಿರೀಶ್​ನನ್ನು ರಾಮನಗರ […]

ವಾಹನ ನಿಲ್ಲಿಸಿದ್ದಕ್ಕೆ ಪೊಲೀಸರ ಮೇಲೆ ಹಲ್ಲೆ ಮಾಡಿದ ಕುಡುಕ ಚಾಲಕ
ಸಾಧು ಶ್ರೀನಾಥ್​

Updated on: Dec 06, 2019 | 1:28 PM

ರಾಮನಗರ: ಮಧ್ಯಪಾನ ಸೇವಿಸಿ ವಾಹನ ಚಲಾಯಿಸುತ್ತಿದ್ದ ಚಾಲಕನನ್ನು ಪೊಲೀಸರು ಅಡ್ಡಗಟ್ಟಿ ನಿಲ್ಲಿಸಿದ್ದಕ್ಕೆ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ಘಟನೆ ರಾಮನಗರದಲ್ಲಿ ನಡೆದಿದೆ. ಚನ್ನಪಟ್ಟಣ ತಾಲೂಕು ಮಾಕಳಿ ಮೂಲದ ಟಾಟಾ ಏಸ್ ಚಾಲಕನಾಗಿದ್ದ ಗಿರೀಶ್ ಬಿಡದಿಯಿಂದಲೂ ಗಾಡಿಯಲ್ಲೇ‌ ಕುಡಿದುಕೊಂಡು ಅಡ್ಡಾದಿಡ್ಡಿ ವಾಹನ ಚಲಾಯಿಸಿಕೊಂಡು ಬಂದಿದ್ದ.

ಪ್ರಶ್ನೆ ಮಾಡಿದ ಇತರೆ ವಾಹನಗಳ ಚಾಲಕರಿಗೂ ಈತ ಅವಾಜ್ ಹಾಕಿದ್ದ. ಕೂಡಲೇ ಸಾರ್ವಜನಿಕರು ಪೊಲೀಸ್ ಠಾಣೆಗೆ‌ ಮಾಹಿತಿ ನೀಡಿದ್ದರು. ಈ ಹಿನ್ನಲೆ ನಿನ್ನೆ ತಡರಾತ್ರಿ ಮಧ್ಯಪಾನ ಸೇವಿಸಿ ವಾಹನ ಚಲಾಯಿಸುತ್ತಿದ್ದ ಗಿರೀಶ್​ನನ್ನು ರಾಮನಗರ ಎಸ್ಪಿ ಕಚೇರಿ ಮುಂಭಾಗ ಟ್ರಾಫಿಕ್ ಪೊಲೀಸ್ ಹಾಗೂ ರಾಮನಗರ ಟೌನ್ ಪೊಲೀಸರು ವಾಹನ ಅಡ್ಡಗಟ್ಟಿ ನಿಲ್ಲಿಸಿದ್ದರು.

ಕುಡಿದ ಮತ್ತಿನಲ್ಲಿದ ಗಿರೀಶ್ ಟ್ರಾಫಿಕ್ ಪೊಲೀಸ್ ಶಂಕರ್ ಪಾಟೀಲ್ ಹಾಗೂ ಟೌನ್ ಪೊಲೀಸ್ ಶಿವರಾಜ್ ಮೇಲೆ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಟ್ರಾಫಿಕ್ ಠಾಣೆಯಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾನೆ. ಕುಡಿದು ವಾಹನ ಚಾಲಾಯಿಸುತ್ತಿದ್ದಕ್ಕೆ ಹಾಗೂ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪದಡಿ ಚಾಲಕ ಗಿರೀಶ್ ವಿರುದ್ಧ ರಾಮನಗರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Published On - 1:25 pm, Fri, 6 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us