AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಉಲ್ಲಂಘಿಸಿ ಕಾರು ಅಪಘಾತ: KAS ಅಧಿಕಾರಿ ವಿರುದ್ಧ FIR

ಬೆಂಗಳೂರು: ಸಂಡೇ ಲಾಕ್​ಡೌನ್​ ಉಲ್ಲಂಘಿಸಿದ್ದ KAS ಅಧಿಕಾರಿ ವಿರುದ್ಧ FIR ದಾಖಲಿಸಲಾಗಿದೆ. ಟಿವಿ 9 ವರದಿ ಬಳಿಕ ಅಲರ್ಟ್ ಆದ ಕೆ.ಆರ್. ಪುರಂ ಸಂಚಾರಿ ಪೊಲೀಸರು KAS ಅಧಿಕಾರಿ ಡಾ.ಕೆ.ಎನ್.ಅನುರಾಧಾ ವಿರುದ್ಧ FIR ದಾಖಲಿಸಿಕೊಂಡಿದ್ದಾರೆ. ಡಾ.ಕೆ.ಎನ್.ಅನುರಾಧಾ KIADB ಯಲ್ಲಿ ADC ಅಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜುಲೈ 26 ರ ಭಾನುವಾರ ಸಂಡೇ ಲಾಕ್​ಡೌನ್​ ವೇಳೆ ತಮ್ಮ ಖಾಸಗಿ ಕಾರಿನಲ್ಲಿ ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿ ಅಪಘಾತಕ್ಕೆ ಈಡಾಗಿದ್ದರು. ಇದನ್ನೂ ಓದಿ: ಕಾರು ಅಪಘಾತದಲ್ಲಿ KAS ಅಧಿಕಾರಿ ಪ್ರಾಣಾಪಾಯದಿಂದ […]

ಲಾಕ್​ಡೌನ್​ ಉಲ್ಲಂಘಿಸಿ ಕಾರು ಅಪಘಾತ: KAS ಅಧಿಕಾರಿ ವಿರುದ್ಧ FIR
KUSHAL V
| Edited By: |

Updated on:Jul 28, 2020 | 12:59 PM

Share

ಬೆಂಗಳೂರು: ಸಂಡೇ ಲಾಕ್​ಡೌನ್​ ಉಲ್ಲಂಘಿಸಿದ್ದ KAS ಅಧಿಕಾರಿ ವಿರುದ್ಧ FIR ದಾಖಲಿಸಲಾಗಿದೆ. ಟಿವಿ 9 ವರದಿ ಬಳಿಕ ಅಲರ್ಟ್ ಆದ ಕೆ.ಆರ್. ಪುರಂ ಸಂಚಾರಿ ಪೊಲೀಸರು KAS ಅಧಿಕಾರಿ ಡಾ.ಕೆ.ಎನ್.ಅನುರಾಧಾ ವಿರುದ್ಧ FIR ದಾಖಲಿಸಿಕೊಂಡಿದ್ದಾರೆ.

ಡಾ.ಕೆ.ಎನ್.ಅನುರಾಧಾ KIADB ಯಲ್ಲಿ ADC ಅಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜುಲೈ 26 ರ ಭಾನುವಾರ ಸಂಡೇ ಲಾಕ್​ಡೌನ್​ ವೇಳೆ ತಮ್ಮ ಖಾಸಗಿ ಕಾರಿನಲ್ಲಿ ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿ ಅಪಘಾತಕ್ಕೆ ಈಡಾಗಿದ್ದರು. ಇದನ್ನೂ ಓದಿ: ಕಾರು ಅಪಘಾತದಲ್ಲಿ KAS ಅಧಿಕಾರಿ ಪ್ರಾಣಾಪಾಯದಿಂದ ಪಾರು, ಎಲ್ಲಿ?

ಹೀಗಾಗಿ, ಕಾರನ್ನು ವಶಕ್ಕೆ ಪಡೆದು ಐಪಿಸಿ ಸೆಕ್ಷನ್ 279, 337 ಅಡಿ FIR ದಾಖಲಿಸಿರುವ ಕೆ.ಆರ್. ಪುರಂ ಸಂಚಾರಿ ಪೊಲೀಸರು ರಾಮಮೂರ್ತಿನಗರ ಠಾಣೆಗೆ ವರದಿ ನೀಡಿದ್ದಾರೆ. ಲಾಕ್​ಡೌನ್ ನಿಯಮಾವಳಿ ಉಲ್ಲಂಘನೆ ಹಿನ್ನೆಲೆಯಲ್ಲಿ NDMA ಕಾಯ್ದೆ ಅಡಿ ಮತ್ತೊಂದು ಕೇಸ್ ದಾಖಲಿಸುವಂತೆ ವರದಿ ನೀಡಿದ್ದಾರೆ. ಇದೀಗ, ನ್ಯಾಯಾಲಯದ ಅನುಮತಿ ಬಳಿಕ ಡಾ. ಅನುರಾಧ ವಿರುದ್ಧ ಕೇಸ್ ದಾಖಲಿಸಲು ರಾಮಮೂರ್ತಿನಗರ ಠಾಣೆ ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.

Published On - 12:18 pm, Tue, 28 July 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ