AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ದವೇ ದಾಖಲಾಯ್ತು FIR

ಈ ಹಿಂದೆ ಇದ್ದ ಪೊಲೀಸ್​ ಠಾಣೆಯಲ್ಲೇ ಇದೀಗ ಇನ್ಸ್​ಪೆಕ್ಟರ್​ ಓರ್ವರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಠಾಣೆಯ ಮಾಜಿ ಇನ್ಸ್​​ಪೆಕ್ಟರ್​ ವಿರುದ್ಧ ಹಾಲಿ ಇನ್ಸ್​ಪೆಕ್ಟರ್​ ಎಫ್​ಐಆರ್ ದಾಖಲಿಸಿದ್ದಾರೆ. ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಷ್ಟಕ್ಕೂ ಆ ಇನ್ಸ್​ಪೆಕ್ಟರ್ ಮಾಡಿದ್ದೇನು ಎನ್ನುವುದನ್ನು ನೋಡಿ.

ಬೆಂಗಳೂರಿನಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ದವೇ ದಾಖಲಾಯ್ತು FIR
ಇನ್ಸ್​ಪೆಕ್ಟರ್ ಹಿತೇಂದ್ರ
TV9 Web
| Edited By: |

Updated on: Oct 01, 2024 | 4:37 PM

Share

ಬೆಂಗಳೂರು, ಅಕ್ಡೋಬರ್ 01): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಓರ್ವ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧವೇ ಎಫ್‌ಐಆರ್ ದಾಖಲಾಗಿರುವ ಘಟನೆ ನಡೆದಿದೆ. ಇನ್ಸ್ ಪೆಕ್ಟರ್ ಹಿತೇಂದ್ರ ಎಂ.ಎಸ್ ವಿರುದ್ಧ ಬೆಂಗಳೂರಿನ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಹಿಂದೆ ಜೆ.ಪಿ.ನಗರ ಠಾಣೆಯಲ್ಲಿಯೇ ಇನ್ಸ್ ಪೆಕ್ಟರ್ ಆಗಿದ್ದ ಹಿತೇಂದ್ರ, ಕೆಲ ಪ್ರಕರಣಗಲಲ್ಲಿ ವಶಪಡಿಸಿಕೊಂಡಿದ್ದ ಮಾಲನ್ನು ವಾಪಾಸ್ ನೀಡದೇ ದುರುಪಯೋಗಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಸದ್ಯ ಜೆಪಿ ನಗರ ಪೊಲೀಸ್ ಠಾಣೆಯ ಮಾಜಿ ಇನ್ಸ್ಪೆಕ್ಟರ್ ವಿರುದ್ದ ಹಾಲಿ ಇನ್ಸ್ಪೆಕ್ಟರ್ ರಾಧಾಕೃಷ್ಣ ಎಫ್​ಐಆರ್ ದಾಖಲಿಸಿದ್ದಾರೆ.

ಈ ಹಿಂದೆ ಜೆ.ಪಿ.ನಗರ ಠಾಣೆಯಲ್ಲಿಯೇ ಇನ್ಸ್ ಪೆಕ್ಟರ್ ಆಗಿದ್ದ ಹಿತೇಂದ್ರ, ಕೆಲ ಪ್ರಕರಣಗಲಲ್ಲಿ ವಶಪಡಿಸಿಕೊಂಡಿದ್ದ ಮಾಲನ್ನು ವಾಪಾಸ್ ನೀಡಿರಲಿಲ್ಲ. ಅಲ್ಲದೇ ಹಿಂದಿನ ಇನ್ಸ್ ಪೆಕ್ಟರ್ ಹಸ್ತಾಂತರಿಸಿದ್ದ ಮಾಲು ಸಹ ಠಾಣೆಗೆ ಹಾಜರುಪಡಿಸಿರಲಿಲ್ಲ. ವಶಪಡೆದ ಮಾಲನ್ನು ಹಿಂತಿರುಗಿಸುವ ಬಗ್ಗೆ ಹಲವಾರು ಬಾರಿ ಹೇಳಲಾಗಿತ್ತು. ಅಲ್ಲದೇ ಈ ಬಗ್ಗೆ ದಕ್ಷಿಣ ವಿಭಾಗದ ಡಿಸಿಪಿ ಜ್ಞಾಪನಾ ಪತ್ರ ನೀಡಿದರೂ ಉತ್ತರಿಸಿರಲಿಲ್ಲ. ಹೀಗಾಗಿ ಪ್ರಕರಣಗಳ ಮಾಲನ್ನ ಹಿಂತಿರುಗಿಸದೆ ದುರುಪಯೋಗಿಸಿಕೊಂಡಿರೋದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಸ್ವಾಮೀಜಿಗೆ ಕೋಟಿ ರೂ. ವಂಚನೆ ಕೇಸ್: ಆರೋಪಿ ಜೆಡಿಎಸ್​ ಮುಖಂಡನ ಕ್ರೈಂ ಡೈರಿ ಬಿಚ್ಚಿಟ್ಟ ಐಜಿಪಿ

ಹಾಲಿ ಇನ್ಸ್ಪೆಕ್ಟರ್ ರಾಧಾಕೃಷ್ಣ ಅವರು ಅದೇ ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಮಾಜಿ ಇನ್ಸ್​ಪೆಕ್ಟರ್ ಹಿತೇಂದ್ರ ವಿರುದ್ಧ ಎಫ್​ಐಆರ್ ದಾಖಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಯೋಗಿ, ದಿಗಂತ್, ಸತೀಶ್: ವೇದಿಕೆ ಮೇಲೆ ಮೂವರು ಗೆಳೆಯರ ಮಾತುಗಳು
ಯೋಗಿ, ದಿಗಂತ್, ಸತೀಶ್: ವೇದಿಕೆ ಮೇಲೆ ಮೂವರು ಗೆಳೆಯರ ಮಾತುಗಳು
ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್ 2026': ಮೋದಿ ಭಾಷಣ ಕನ್ನಡದಲ್ಲಿ ಕೇಳಿ
ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್ 2026': ಮೋದಿ ಭಾಷಣ ಕನ್ನಡದಲ್ಲಿ ಕೇಳಿ