AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ದವೇ ದಾಖಲಾಯ್ತು FIR

ಈ ಹಿಂದೆ ಇದ್ದ ಪೊಲೀಸ್​ ಠಾಣೆಯಲ್ಲೇ ಇದೀಗ ಇನ್ಸ್​ಪೆಕ್ಟರ್​ ಓರ್ವರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಠಾಣೆಯ ಮಾಜಿ ಇನ್ಸ್​​ಪೆಕ್ಟರ್​ ವಿರುದ್ಧ ಹಾಲಿ ಇನ್ಸ್​ಪೆಕ್ಟರ್​ ಎಫ್​ಐಆರ್ ದಾಖಲಿಸಿದ್ದಾರೆ. ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಷ್ಟಕ್ಕೂ ಆ ಇನ್ಸ್​ಪೆಕ್ಟರ್ ಮಾಡಿದ್ದೇನು ಎನ್ನುವುದನ್ನು ನೋಡಿ.

ಬೆಂಗಳೂರಿನಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ದವೇ ದಾಖಲಾಯ್ತು FIR
ಇನ್ಸ್​ಪೆಕ್ಟರ್ ಹಿತೇಂದ್ರ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Oct 01, 2024 | 4:37 PM

Share

ಬೆಂಗಳೂರು, ಅಕ್ಡೋಬರ್ 01): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಓರ್ವ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧವೇ ಎಫ್‌ಐಆರ್ ದಾಖಲಾಗಿರುವ ಘಟನೆ ನಡೆದಿದೆ. ಇನ್ಸ್ ಪೆಕ್ಟರ್ ಹಿತೇಂದ್ರ ಎಂ.ಎಸ್ ವಿರುದ್ಧ ಬೆಂಗಳೂರಿನ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಹಿಂದೆ ಜೆ.ಪಿ.ನಗರ ಠಾಣೆಯಲ್ಲಿಯೇ ಇನ್ಸ್ ಪೆಕ್ಟರ್ ಆಗಿದ್ದ ಹಿತೇಂದ್ರ, ಕೆಲ ಪ್ರಕರಣಗಲಲ್ಲಿ ವಶಪಡಿಸಿಕೊಂಡಿದ್ದ ಮಾಲನ್ನು ವಾಪಾಸ್ ನೀಡದೇ ದುರುಪಯೋಗಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಸದ್ಯ ಜೆಪಿ ನಗರ ಪೊಲೀಸ್ ಠಾಣೆಯ ಮಾಜಿ ಇನ್ಸ್ಪೆಕ್ಟರ್ ವಿರುದ್ದ ಹಾಲಿ ಇನ್ಸ್ಪೆಕ್ಟರ್ ರಾಧಾಕೃಷ್ಣ ಎಫ್​ಐಆರ್ ದಾಖಲಿಸಿದ್ದಾರೆ.

ಈ ಹಿಂದೆ ಜೆ.ಪಿ.ನಗರ ಠಾಣೆಯಲ್ಲಿಯೇ ಇನ್ಸ್ ಪೆಕ್ಟರ್ ಆಗಿದ್ದ ಹಿತೇಂದ್ರ, ಕೆಲ ಪ್ರಕರಣಗಲಲ್ಲಿ ವಶಪಡಿಸಿಕೊಂಡಿದ್ದ ಮಾಲನ್ನು ವಾಪಾಸ್ ನೀಡಿರಲಿಲ್ಲ. ಅಲ್ಲದೇ ಹಿಂದಿನ ಇನ್ಸ್ ಪೆಕ್ಟರ್ ಹಸ್ತಾಂತರಿಸಿದ್ದ ಮಾಲು ಸಹ ಠಾಣೆಗೆ ಹಾಜರುಪಡಿಸಿರಲಿಲ್ಲ. ವಶಪಡೆದ ಮಾಲನ್ನು ಹಿಂತಿರುಗಿಸುವ ಬಗ್ಗೆ ಹಲವಾರು ಬಾರಿ ಹೇಳಲಾಗಿತ್ತು. ಅಲ್ಲದೇ ಈ ಬಗ್ಗೆ ದಕ್ಷಿಣ ವಿಭಾಗದ ಡಿಸಿಪಿ ಜ್ಞಾಪನಾ ಪತ್ರ ನೀಡಿದರೂ ಉತ್ತರಿಸಿರಲಿಲ್ಲ. ಹೀಗಾಗಿ ಪ್ರಕರಣಗಳ ಮಾಲನ್ನ ಹಿಂತಿರುಗಿಸದೆ ದುರುಪಯೋಗಿಸಿಕೊಂಡಿರೋದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಸ್ವಾಮೀಜಿಗೆ ಕೋಟಿ ರೂ. ವಂಚನೆ ಕೇಸ್: ಆರೋಪಿ ಜೆಡಿಎಸ್​ ಮುಖಂಡನ ಕ್ರೈಂ ಡೈರಿ ಬಿಚ್ಚಿಟ್ಟ ಐಜಿಪಿ

ಹಾಲಿ ಇನ್ಸ್ಪೆಕ್ಟರ್ ರಾಧಾಕೃಷ್ಣ ಅವರು ಅದೇ ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಮಾಜಿ ಇನ್ಸ್​ಪೆಕ್ಟರ್ ಹಿತೇಂದ್ರ ವಿರುದ್ಧ ಎಫ್​ಐಆರ್ ದಾಖಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ