AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fire Acccident: ಜಮ್ಮುವಿನ ಗುಡಿಸಲುಗಳಲ್ಲಿ ಬೆಂಕಿ ಅವಘಡ; ಮೂವರು ಸಜೀವ ದಹನ, 14 ಜನರಿಗೆ ಗಾಯ

ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದರಿಂದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 14 ಮಂದಿ ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Fire Acccident: ಜಮ್ಮುವಿನ ಗುಡಿಸಲುಗಳಲ್ಲಿ ಬೆಂಕಿ ಅವಘಡ; ಮೂವರು ಸಜೀವ ದಹನ, 14 ಜನರಿಗೆ ಗಾಯ
ಜಮ್ಮುವಿನಲ್ಲಿ ಬೆಂಕಿ ಅವಘಡ
TV9 Web
| Edited By: |

Updated on:Mar 14, 2022 | 8:23 PM

Share

ಶ್ರೀನಗರ: ಜಮ್ಮುವಿನ (Jammu) ರೆಸಿಡೆನ್ಸಿ ರಸ್ತೆ ಬಳಿಯ ಗುಡಿಸಲುಗಳಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಇದರ ಪರಿಣಾಮವಾಗಿ ಮೂವರು ಸಜೀವ ದಹನವಾಗಿದ್ದಾರೆ. ಈ ಬೆಂಕಿ ದುರಂತದಲ್ಲಿ (Fire Accident) 14ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ಇಂದು ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡು ಮೂವರು ಸಜೀವ ದಹನವಾಗಿದ್ದಾರೆ. ಒಂದೇ ಸಲಕ್ಕೆ ಬೆಂಕಿಯ ಜ್ವಾಲೆಗಳು ಹೊರಹೊಮ್ಮಲು ಪ್ರಾರಂಭಿಸಿದ್ದರಿಂದ ತಕ್ಷಣ ಪ್ರದೇಶಕ್ಕೆ ಧಾವಿಸಿದ ಸ್ಥಳೀಯರು ಗಾಯಗೊಂಡಿದ್ದ ಹಲವರನ್ನು ರಕ್ಷಿಸಿದ್ದಾರೆ.

ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದರಿಂದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 14 ಮಂದಿ ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೇಲ್ನೋಟಕ್ಕೆ ಗ್ಯಾಸ್ ಸಿಲಿಂಡರ್ ಸ್ಫೋಟ ಆಗಿದ್ದರಿಂದ ಗುಡಿಸಲುಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಆದರೆ ನಿಖರವಾದ ಕಾರಣ ತಿಳಿಯಲು ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಗುಡಿಸಲುಗಳಲ್ಲಿ ಬೆಂಕಿ ಹೊತ್ತಿಕೊಂಡ ನಂತರ ಅಕ್ಕಪಕ್ಕದಲ್ಲಿದ್ದ ಗುಜರಿ ಅಂಗಡಿ ಸೇರಿದಂತೆ ಇನ್ನಿತರ ಮನೆಗಳಲ್ಲಿದ್ದ ಗ್ಯಾಸ್ ಸಿಲಿಂಡರ್​ಗಳು ಕೂಡ ಸ್ಫೋಟವಾಗಿವೆ. ಇದರಿಂದಾಗಿ ಮೂವರು ಸಾವನ್ನಪ್ಪಿದ್ದಾರೆ. ವಿದ್ಯುತ್ ವೈರಿಂಗ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಕೂಡ ಅಧಿಕಾರಿಗಳು ಶಂಕಿಸಿದ್ದಾರೆ. ಆದರೆ, ಬೆಂಕಿ ದುರಂತಕ್ಕೆ ಸಿಲಿಂಡರ್ ಸ್ಫೋಟ ಕಾರಣವಾ ಅಥವಾ ಶಾರ್ಟ್​ ಸರ್ಕ್ಯೂಟ್​ನಿಂದ ದುರಂತ ಸಂಭವಿಸಿದೆಯಾ ಎಂಬುದು ಇನ್ನೂ ಖಚಿತವಾಗಿಲ್ಲ.

ಬೆಂಕಿ ಹೊತ್ತಿಕೊಂಡಿದ್ದರಿಂದ ಗಾಯಗೊಂಡ 14 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಮತ್ತು ಸ್ಥಳೀಯರ ನೆರವಿನೊಂದಿಗೆ ಎಲ್ಲರನ್ನು ಸ್ಥಳದಿಂದ ಸ್ಥಳಾಂತರಿಸಲಾಗಿದೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಹಿತಿ ಲಭಿಸಿದ ತಕ್ಷಣ ಅಧಿಕಾರಿಗಳು ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.

ಇದನ್ನೂ ಓದಿ: ಬೆಂಕಿಯಿಂದ ಪಾರಾಗಲು ಮೂರು ವರ್ಷದ ಮಗುವನ್ನು ಕಟ್ಟಡದಿಂದ ಕೆಳಗೆ ಎಸೆದ ತಂದೆ; ಕ್ಯಾಮೆರಾದಲ್ಲಿ ಭಯಾನಕ ದೃಶ್ಯ ಸೆರೆ

ಮೈಸೂರು: ಮನೆಯಲ್ಲಿ ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವದಹನ! ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ

Published On - 8:23 pm, Mon, 14 March 22

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!