AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್​ನಲ್ಲಿ ಬೆಂಕಿ ಅವಘಡ; ಸುಟ್ಟು ಕರಕಲಾದ ಬ್ಯಾಂಕ್ ದಾಖಲೆಗಳು

ಕಂಪ್ಲಿಯ ರಾಮಸಾಗರ ಗ್ರಾಮದ ವಿಠಲಾಪುರ ಕೆರೆ ಬಳಿಯ ಗುಡ್ಡದಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳ ಬಂಧನ ಮಾಡಲಾಗಿದೆ.

ಯಾದಗಿರಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್​ನಲ್ಲಿ ಬೆಂಕಿ ಅವಘಡ; ಸುಟ್ಟು ಕರಕಲಾದ ಬ್ಯಾಂಕ್ ದಾಖಲೆಗಳು
ಕರ್ನಾಟಕ ಗ್ರಾಮೀಣ ಬ್ಯಾಂಕ್​ನಲ್ಲಿ ಬೆಂಕಿ ಅವಘಡ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Apr 06, 2022 | 11:06 PM

Share

ಯಾದಗಿರಿ: ಕರ್ನಾಟಕ ಗ್ರಾಮೀಣ ಬ್ಯಾಂಕ್​ನಲ್ಲಿ ಬೆಂಕಿ (Fire)  ಅವಘಡ ಸಂಭವಿಸಿದೆ. ಜಿಲ್ಲೆಯ ಗುರುಮಠಕಲ್‌ ಪಟ್ಟಣದಲ್ಲಿರುವ ನಡೆದಿದೆ. ಅಗ್ನಿ ಅವಘಡದಿಂದ ಬ್ಯಾಂಕ್ ಹೊತ್ತಿ ಉರಿದಿದೆ. ಕಟ್ಟಡದ ಮೊದಲ ಮಹಡಿಯಲ್ಲಿರುವ ಬ್ಯಾಂಕ್, ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹತ್ತಿಕೊಂಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಅಗ್ನಿ ಅವಘಡದಿಂದ ಬ್ಯಾಂಕ್​ನಲ್ಲಿದ್ದ ದಾಖಲೆಗಳು ಹಾಗೂ ವಸ್ತುಗಳು ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗುರುಮಠಕಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕ್ರಿಕೆಟ್ ಬೆಟ್ಟಿಂಗ್, ಜೂಜಾಟ ಆಡುತ್ತಿದ್ದ 4 ಜನರ ಬಂಧನ:

ಬಳ್ಳಾರಿ: ನಗರದ ಕೌಲ್ ಬಜಾರ್‌ ಪೊಲೀಸರ ಕಾರ್ಯಾಚರಣೆಯಿಂದ ಕ್ರಿಕೆಟ್ ಬೆಟ್ಟಿಂಗ್, ಜೂಜಾಟ ಆಡುತ್ತಿದ್ದ 4 ಜನರ ಬಂಧನ ಮಾಡಲಾಗಿದೆ. ಬಂಧಿತರಿಂದ 1,01,070 ನಗದು ಹಾಗೂ 4 ಮೊಬೈಲ್ ಹಣ ವಶಕ್ಕೆ ಪಡೆಯಲಾಗಿದೆ. ಕೋಟೆ ಪ್ರದೇಶದಲ್ಲಿ ಕ್ರಿಕೇಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ವೇಳೆ ದಾಳಿ ಮಾಡಲಾಗಿದೆ. ಕ್ರಿಕೆಟ್ ಬೆಟ್ಟಿಂಗ್​ಗೆ ಬಳಸುತ್ತಿದ್ದ ICICI ಬ್ಯಾಂಕ್​ ಖಾತೆ ಸೀಜ್ ಮಾಡಲಾಗಿದ್ದು, ಬ್ಯಾಂಕ ಖಾತೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಬಳಸಿದ 13 ಲಕ್ಷ ರೂಪಾಯಿ ಜಮೆ ಮಾಡಲಾಗಿದೆ. ಮಹ್ಮದ್ ಜುಬೇರ್. ಪ್ರಕಾಶ, ಕೃಷ್ಣಮೂರ್ತಿ, ವಿಜಯಕುಮಾರ್, ರವಿಕಿರಣ್ ಕ್ರಿಕೆಟ್ ಬೆಟ್ಟಿಂಗ್​ನಲ್ಲಿ ತೊಡಗಿದ್ದರು. ನಾಲ್ವರ ಬಂಧನ ಮಾಡಲಾಗಿದ್ದು ಓರ್ವ ಪರಾರಿಯಾಗಿದ್ದಾನೆ. ಬಳ್ಳಾರಿಯ ಕೌಲ ಬಜಾರ್ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಿಠಲಾಪುರ ಕೆರೆ ಬಳಿಯ ಗುಡ್ಡದಲ್ಲಿ ನಡೆದಿದ್ದ ಕೊಲೆ ಪ್ರಕರಣ; ಮತ್ತಿಬ್ಬರ ಆರೋಪಿಗಳ ಬಂಧನ:

ಬಳ್ಳಾರಿ: ಕಂಪ್ಲಿಯ ರಾಮಸಾಗರ ಗ್ರಾಮದ ವಿಠಲಾಪುರ ಕೆರೆ ಬಳಿಯ ಗುಡ್ಡದಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳ ಬಂಧನ ಮಾಡಲಾಗಿದೆ. ಮಾರ್ಚ್ ೧೯ ರಂದು ಗಂಗಾವತಿಯ ಪ್ಲಾಂಟ್​ನಲ್ಲಿ ಹಮಾಲಿಯಾಗಿದ್ದ ಅಮರೇಶ ಕೊಲೆ ಮಾಡಲಾಗಿತ್ತು. ಕೊಲೆ‌ ಮಾಡಿ ಗುಡ್ಡದಲ್ಲಿ ಶವ ಬಿಸಾಕಿದ ೧೦ ದಿನಗಳ‌ ನಂತರ ತಲೆಬುರುಡೆ, ಮೂಳೆಗಳು ಪತ್ತೆಯಾಗಿದ್ದವು. ಶರ್ಟ್ ಕಾರ್ಲರ್ ಗುರುತಿನ ಮೇಲೆ ಕೊಲೆ ಆರೋಪಿಗಳನ್ನ ಪೊಲೀಸರು ಪತ್ತೆ ಮಾಡಿದ್ದಾರೆ. ಇಂದು ಮತ್ತಿಬ್ಬರು ಆರೋಪಿಗಳ ಬಂಧನ ಮಾಡಲಾಗಿದ್ದು, ಶಹಾಪುರ ತಾಲೂಕಿನ ದೊಡ್ಡಸಾಗರ ಗ್ರಾಮದ ಮಲ್ಮಲ್ಲಿಕಾರ್ಜುನ ಮತ್ತು ಅಫಜಲಪುರ ತಾಲ್ಲೂಕಿನ ಔರಾದ್ ಗ್ರಾಮದ ಸಂಗಮನಾಥ ಬಂಧಿತರು. ಈ ಮೊದಲು ಕಿರಣಕುಮಾರ್ ಹಾಗೂ ರೇವಣ್ಣಸಿದ್ದಯ್ಯರನ್ನ ಪೊಲೀಸರು ಬಂಧಿಸಿದ್ದರು. ಕಿರಣಕುಮಾರ್ ಸಹೋದರಿಯನ್ನ ಚುಡಾಯಿಸಿ ಅಮರೇಶ್ ಕೊಲೆಯಾಗಿದ್ದ. ಕಂಪ್ಲಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:

Indian Railway Recruitment 2022: ರೈಲ್ವೆ ಇಲಾಖೆಯ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

Covid XE Variant: ಭಾರತದಲ್ಲಿ ಕೊವಿಡ್ ರೂಪಾಂತರಿ XE ಮೊದಲ ಪ್ರಕರಣ ಮುಂಬೈನಲ್ಲಿ ಪತ್ತೆ ಎಂದ ಬಿಎಂಸಿ; ಇದಕ್ಕೆ ಪುರಾವೆಗಳಿಲ್ಲ ಎಂದ ಕೇಂದ್ರ ಸರ್ಕಾರ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?