AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರ್ಟ್ ಸರ್ಕ್ಯೂಟ್​ನಿಂದ 9 ಗುಡಿಸಲು ಬೆಂಕಿಗಾಹುತಿ ಪ್ರಕರಣ: ಮೂವರ ವಿರುದ್ಧ FIR ದಾಖಲು

ಶಾರ್ಟ್ ಸರ್ಕ್ಯೂಟ್​ನಿಂದ 9 ಗುಡಿಸಲು ಬೆಂಕಿಗಾಹುತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಟ್ಟಮರಡಿ ಜೆಸ್ಕಾಂನ ಜೆಸ್ಕಾಂನ ಓರ್ವ ಜೆಇ, ಇಬ್ಬರು ಲೈನ್​ಮ್ಯಾನ್ ವಿರುದ್ಧ ಗಬ್ಬೂರು ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ.

ಶಾರ್ಟ್ ಸರ್ಕ್ಯೂಟ್​ನಿಂದ 9 ಗುಡಿಸಲು ಬೆಂಕಿಗಾಹುತಿ ಪ್ರಕರಣ: ಮೂವರ ವಿರುದ್ಧ FIR ದಾಖಲು
ಪ್ರಾತಿನಿಧಿಕ ಚಿತ್ರ Image Credit source: thestatesman.com
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Feb 27, 2023 | 8:58 PM

ರಾಯಚೂರು: ಶಾರ್ಟ್ ಸರ್ಕ್ಯೂಟ್​ನಿಂದ 9 ಗುಡಿಸಲು ಬೆಂಕಿಗಾಹುತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಟ್ಟಮರಡಿ ಜೆಸ್ಕಾಂನ ಜೆಸ್ಕಾಂನ ಓರ್ವ ಜೆಇ, ಇಬ್ಬರು ಲೈನ್​ಮ್ಯಾನ್ ವಿರುದ್ಧ ಗಬ್ಬೂರು ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ. ಜಿಲ್ಲೆಯ ದೇವದುರ್ಗ ತಾಲೂಕಿನ ಜಾಗಟಕಲ್ ಗ್ರಾಮದಲ್ಲಿ ಫೆಬ್ರವರಿ 25ರಂದು 9 ಗುಡಿಸಲು, ಹತ್ತಿ ರಾಶಿಗೆ ಬೆಂಕಿ ತಗುಲಿದ್ದು, ಇದೇ ವೇಳೆ ಗುಡಿಸಲಿನಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡು ದುರಂತ ಸಂಭವಿಸಿತ್ತು. ಘಟನೆಯಲ್ಲಿ ಸುಮಾರು 500 ಕ್ವಿಂಟಾಲ್ ಹತ್ತಿ, 9 ಗುಡಿಸಲು, 2 ಬೈಕ್​ಗಳು, ದವಸ ಧಾನ್ಯ, ಬಟ್ಟೆ, ಕ್ರಿಮಿನಾಶಕ ಸೇರಿದಂತೆ ಇತರೆ ವಸ್ತುಗಳು ನಾಶವಾಗಿದ್ದವು. 77.49 ಲಕ್ಷ ಮೌಲ್ಯದ ಆಸ್ತಿ ಹಾನಿ ಆಗಿದೆ ಎಂದು ತಾಲೂಕು ಆಡಳಿತ ಅಂದಾಜಿಸಿದೆ. ಸದ್ಯ ದೇವದುರ್ಗ ತಾಲೂಕು ಆಡಳಿತದಿಂದ ಸಂತ್ರಸ್ತರಿಗೆ ಫುಡ್​ ಕಿಟ್ ಸೇರಿದಂತೆ ಉಪ ಜೀವನಕ್ಕೆ ಬೇಕಾದ ವಸ್ತುಗಳ ವಿತರಣೆ ಮಾಡಲಾಗಿದೆ.

ಮುಳ್ಳಂದಿ ಹಿಡಿಯಲು ಹೋಗಿ ಗುಹೆಯಲ್ಲಿ ಸಿಲುಕಿ ಇಬ್ಬರ ದುರ್ಮರಣ

ಚಿಕ್ಕಮಗಳೂರು: ಮುಳ್ಳಂದಿ ಹಿಡಿಯಲು ಹೋಗಿ ಗುಹೆಯಲ್ಲಿ ಸಿಲುಕಿದ್ದ ನಾಲ್ವರ ಪೈಕಿ ಇಬ್ಬರು ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಆನೆಗುಂದಿ ಬಳಿ ನಡೆದಿದೆ. ತಮಿಳುನಾಡು ಮೂಲದ ಗೋವಿಂದರಾಜು, ವಿಜಯಕುಮಾರ್ ಮೃತರು. ತಮಿಳುನಾಡಿನಿಂದ ಕಾಫಿ ತೋಟದ ಕೆಲಸಕ್ಕೆ ಕಾರ್ಮಿಕರು ಬಂದಿದ್ದರು. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ವಿಜಯಪುರ: ಗುಡಿಸಲಿಗೆ ಆಕಸ್ಮಿಕ ಬೆಂಕಿ, ಮಲಗಿದ್ದಲ್ಲೇ ಸುಟ್ಟು ಕರಕಲಾದ ವೃದ್ಧ ದಂಪತಿ

ಶಿವರಾಮ್ ಹೆಬ್ಬಾರ ಪುತ್ರನ ಒಡೆತನದ ಸಕ್ಕರೆ ಕಾರ್ಖಾನೆಯಲ್ಲಿ ದುರಂತ 

ಹಾವೇರಿ: ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ ಪುತ್ರ ವಿವೇಕ ಹೆಬ್ಬಾರ್​ ಒಡೆತನದ ಸಕ್ಕರೆ ಕಾರ್ಖಾನೆಯಲ್ಲಿ ಬೆಲ್ಟ್​ಗೆ ಸಿಲುಕಿ 19 ವರ್ಷದ ಯುವ ಕಾರ್ಮಿಕ ದಾರುಣ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕೋಣನಕೇರಿಯಲ್ಲಿರುವ ವಿಐಪಿಎನ್ ಡಿಸ್ಟಲರಿಸ್ ಕಾರ್ಖಾನೆಯಲ್ಲಿ ನಡೆದಿದೆ. ನವೀನ ಬಸಪ್ಪ ಚಲವಾದಿ(19) ಮೃತ ಕಾರ್ಮಿಕ. ಕೆಲಸ ಮಾಡುತ್ತಿದ್ದ ವೇಳೆ ನಿನ್ನೆ ಶನಿವಾರ ಸಂಜೆ ಕಬ್ಬಿನ ಪುಡಿ ತುಂಬುತ್ತಿದ್ದಾಗ ದುರ್ಘಟನೆ ನಡೆದಿದೆ. ಯಾವುದೇ ಸುರಕ್ಷಾ ಕ್ರಮ ಅಳವಡಿಸದ ಹಿನ್ನೆಲೆ ಘಟನೆ ಸಂಭವಿಸಿದೆ. ಕಾರ್ಖಾನೆ ಮಾಲೀಕ ಸೇರಿ ಆರು ಜನರ ವಿರುದ್ಧ ಬಂಕಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯಪುರ: ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿ ವೃದ್ಧ ದಂಪತಿ ಸಜೀವ ದಹನವಾಗಿರುವ ಘಟನೆ ವಿಜಯಪುರ ಜಿಲ್ಲೆ ಚಡಚಣ ಹೊರವಲಯದ ಜಮೀನಿನಲ್ಲಿ ನಡೆದಿದೆ. ಕರೀಂಸಾಬ್ ಟಪಾಲ್(82), ಸಾಜನಬೀ ಟಪಾಲ್(72) ಮೃತ ವೃದ್ಧರು. ಮತ್ತೊಂದೆಡೆ ಯಾದಗಿರಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಗುಡಿಸಲು ಸುಟ್ಟು ಕರಕಲಾಗಿದೆ. ಜಮೀನಿನಲ್ಲಿದ್ದ ಗುಡಿಸಲಿನಲ್ಲಿ ಕರೀಂಸಾಬ್ ಟಪಾಲ್ ಮತ್ತು ಸಾಜನಬೀ ಟಪಾಲ್ ಎಂಬ ವೃದ್ಧ ದಂಪತಿ ವಾಸವಾಗಿದ್ದರು.

ಇದನ್ನೂ ಓದಿ: Karwar: ಪತ್ನಿಯನ್ನ ಕೊಂದು ಬ್ಯಾರೆಲ್​​ನಲ್ಲಿ ಬಚ್ಚಿಟ್ಟ ಪತಿರಾಯ, ಮನೆ ಖಾಲಿ ಮಾಡುವಾಗ ಭಯಾನಕ ಘಟನೆ ಬಯಲಿಗೆ

ತಡರಾತ್ರಿ ಆಕಸ್ಮಿಕವಾಗಿ ಗುಡಿಸಲಿಗೆ ಬೆಂಕಿ ತಗುಲಿದ್ದು ಮಲಗಿದ್ದಲ್ಲೇ ಪತಿ-ಪತ್ನಿ ಸುಟ್ಟು ಕರಕಲಾಗಿದ್ದಾರೆ. ಇಂದು ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಚಡಚಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:58 pm, Mon, 27 February 23

ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ಮಿನಿಸ್ಟರ್ ಪಿಎ ಸರ್ಫ್ರಾಜ್​ರನ್ನು ರೂಪೇಶ್ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪ
ಮಿನಿಸ್ಟರ್ ಪಿಎ ಸರ್ಫ್ರಾಜ್​ರನ್ನು ರೂಪೇಶ್ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪ
ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ
ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ
ಬಾಯಿಗೆ ಹುಲ್ಲು ತುರುಕಿ ಪ್ರಾಣಿಯಂತೆ ನಡೆಸಿ ವಿಕೃತಿ ತೋರಿದ ಜನ
ಬಾಯಿಗೆ ಹುಲ್ಲು ತುರುಕಿ ಪ್ರಾಣಿಯಂತೆ ನಡೆಸಿ ವಿಕೃತಿ ತೋರಿದ ಜನ