AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎ.ಎಸ್.ಐ ಮನೆಗೆ ನುಗ್ಗಿ ಪುತ್ರನ ಮೇಲೆ ಫೈರಿಂಗ್; ಮನೆಯಲ್ಲಿದ್ದ ಚಿನ್ನ, ಹಣ ದರೋಡೆ

ಎಎಸ್​ಐ ಮನೆಗೆ ನುಗ್ಗಿ ದುಷ್ಕರ್ಮಿಗಳು ಪುತ್ರನ ಮೇಲೆ ಗುಂಡು ಹಾರಿಸಿ ದರೋಡೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿ ನಡೆದಿದೆ.

ಎ.ಎಸ್.ಐ ಮನೆಗೆ ನುಗ್ಗಿ ಪುತ್ರನ ಮೇಲೆ ಫೈರಿಂಗ್; ಮನೆಯಲ್ಲಿದ್ದ ಚಿನ್ನ, ಹಣ ದರೋಡೆ
ಎಎಸ್ಐ​​ ಮನೆಗೆ ನುಗ್ಗಿ ಪುತ್ರನ ಮೇಲೆ ಫೈರಿಂಗ್​
TV9 Web
| Updated By: ವಿವೇಕ ಬಿರಾದಾರ|

Updated on:Nov 09, 2022 | 10:43 PM

Share

ಚಿಕ್ಕಬಳ್ಳಾಫುರ: ಎಎಸ್​ಐ (ASI) ಮನೆಗೆ ನುಗ್ಗಿ ದುಷ್ಕರ್ಮಿಗಳು ಎಎಸ್​ಐ ಪುತ್ರನ ಮೇಲೆ ಗುಂಡು ಹಾರಿಸಿ ದರೋಡೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿ ನಡೆದಿದೆ. ನಾಲ್ವರು ಆರೋಪಿಗಳಿಂದ ಕೃತ್ಯ ಎಸಗಲಾಗಿದೆ. ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ ನಾರಾಯಣಸ್ವಾಮಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪೆರೇಸಂದ್ರ ಗ್ರಾಮದ ಮಂಜುನಾಥ ಕಲ್ಯಾಣ ಮಂಟಪದ ಬಳಿ  ಎ.ಎಸ್.ಐ ಮನೆ ಇದ್ದು, ಇಂದು (ನ.9) ಅವರ ಮನೆಗೆ ಬ್ರೀಜಾ ಕಾರಿನಲ್ಲಿ ಬಂದಿದ್ದ ನಾಲ್ವರು ನುಗ್ಗಿದ್ದಾರೆ. ಮನೆಗೆ ನುಗ್ಗಿ ಎಎಸ್​ಐ ಪುತ್ರ ಶರತ್​ಗೆ ಗುಂಡು 3 ಗುಂಡು ಹಾರಿಸಿದ್ದಾರೆ. ನಂತರ ಎಎಸ್​ಐ ಪತ್ನಿ, ಸೊಸೆ ಮೈಮೇಲಿದ್ದ ಚಿನ್ನಾಭರಣ, ನಗದು ದರೋಡೆ ಮಾಡಿದ್ದಾರೆ. ಆರೋಪಿಗಳು ದರೋಡೆ ಮಾಡುತ್ತಿರುವ ವೇಳೆ ಎಎಸ್​ಐ ನಾರಾಯಣಸ್ವಾಮಿ ಮನೆಗೆ ಬಂದಿದ್ದಾರೆ.

ಈ ವೇಳೆ ದರೋಡೆಕೋರರು ನಾರಾಯಾಣಸ್ವಾಮಿ ಅವರಿಗೆ ಬೆದರಿಸಿ ಮನೆಯಿಂದ ಓಡಿಸಿದ್ದಾರೆ. ನಂತರ  ದರೋಡೆಕೋರರು ಕೂಡ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ನಂತರ ಗಾಯಾಳು ಶರತ್​ನನ್ನು ಚಿಕ್ಕಬಳ್ಳಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೆರೇಸಂದ್ರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:39 pm, Wed, 9 November 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!