AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎ.ಎಸ್.ಐ ಮನೆಗೆ ನುಗ್ಗಿ ಪುತ್ರನ ಮೇಲೆ ಫೈರಿಂಗ್; ಮನೆಯಲ್ಲಿದ್ದ ಚಿನ್ನ, ಹಣ ದರೋಡೆ

ಎಎಸ್​ಐ ಮನೆಗೆ ನುಗ್ಗಿ ದುಷ್ಕರ್ಮಿಗಳು ಪುತ್ರನ ಮೇಲೆ ಗುಂಡು ಹಾರಿಸಿ ದರೋಡೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿ ನಡೆದಿದೆ.

ಎ.ಎಸ್.ಐ ಮನೆಗೆ ನುಗ್ಗಿ ಪುತ್ರನ ಮೇಲೆ ಫೈರಿಂಗ್; ಮನೆಯಲ್ಲಿದ್ದ ಚಿನ್ನ, ಹಣ ದರೋಡೆ
ಎಎಸ್ಐ​​ ಮನೆಗೆ ನುಗ್ಗಿ ಪುತ್ರನ ಮೇಲೆ ಫೈರಿಂಗ್​
TV9 Web
| Edited By: |

Updated on:Nov 09, 2022 | 10:43 PM

Share

ಚಿಕ್ಕಬಳ್ಳಾಫುರ: ಎಎಸ್​ಐ (ASI) ಮನೆಗೆ ನುಗ್ಗಿ ದುಷ್ಕರ್ಮಿಗಳು ಎಎಸ್​ಐ ಪುತ್ರನ ಮೇಲೆ ಗುಂಡು ಹಾರಿಸಿ ದರೋಡೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿ ನಡೆದಿದೆ. ನಾಲ್ವರು ಆರೋಪಿಗಳಿಂದ ಕೃತ್ಯ ಎಸಗಲಾಗಿದೆ. ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ ನಾರಾಯಣಸ್ವಾಮಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪೆರೇಸಂದ್ರ ಗ್ರಾಮದ ಮಂಜುನಾಥ ಕಲ್ಯಾಣ ಮಂಟಪದ ಬಳಿ  ಎ.ಎಸ್.ಐ ಮನೆ ಇದ್ದು, ಇಂದು (ನ.9) ಅವರ ಮನೆಗೆ ಬ್ರೀಜಾ ಕಾರಿನಲ್ಲಿ ಬಂದಿದ್ದ ನಾಲ್ವರು ನುಗ್ಗಿದ್ದಾರೆ. ಮನೆಗೆ ನುಗ್ಗಿ ಎಎಸ್​ಐ ಪುತ್ರ ಶರತ್​ಗೆ ಗುಂಡು 3 ಗುಂಡು ಹಾರಿಸಿದ್ದಾರೆ. ನಂತರ ಎಎಸ್​ಐ ಪತ್ನಿ, ಸೊಸೆ ಮೈಮೇಲಿದ್ದ ಚಿನ್ನಾಭರಣ, ನಗದು ದರೋಡೆ ಮಾಡಿದ್ದಾರೆ. ಆರೋಪಿಗಳು ದರೋಡೆ ಮಾಡುತ್ತಿರುವ ವೇಳೆ ಎಎಸ್​ಐ ನಾರಾಯಣಸ್ವಾಮಿ ಮನೆಗೆ ಬಂದಿದ್ದಾರೆ.

ಈ ವೇಳೆ ದರೋಡೆಕೋರರು ನಾರಾಯಾಣಸ್ವಾಮಿ ಅವರಿಗೆ ಬೆದರಿಸಿ ಮನೆಯಿಂದ ಓಡಿಸಿದ್ದಾರೆ. ನಂತರ  ದರೋಡೆಕೋರರು ಕೂಡ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ನಂತರ ಗಾಯಾಳು ಶರತ್​ನನ್ನು ಚಿಕ್ಕಬಳ್ಳಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೆರೇಸಂದ್ರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:39 pm, Wed, 9 November 22

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು