AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ನಜಾಫ್‌ಗಢದಲ್ಲಿ ಸಲೂನ್‌ನಲ್ಲಿ ಗುಂಡಿನ ದಾಳಿ; ಇಬ್ಬರು ಯುವಕರು ಸಾವು

ದೆಹಲಿಯ ನಜಾಫ್​​ಗಢದಲ್ಲಿರುವ ಸಲೂನ್ ಒಂದರಲ್ಲಿ ಗುಂಡಿನ ದಾಳಿ ನಡೆದಿದೆ. ಸಲೂನ್ ಒಳಗೆ ಗುಂಡುಹಾರಿಸಿ ಆರೋಪಿಗಳು ಹೊರಬರುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕಾಗಮಿಸಿದಾಗ ಸೋನು ಮತ್ತು ಆಶಿಶ್ ಎಂಬ ಇಬ್ಬರು ಯುವಕರಿಗೆ ಗುಂಡು ತಗುಲಿದ್ದು, ಆಸ್ಪತ್ರೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ. ಪೊಲೀಸರು ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ

ದೆಹಲಿಯ ನಜಾಫ್‌ಗಢದಲ್ಲಿ ಸಲೂನ್‌ನಲ್ಲಿ ಗುಂಡಿನ ದಾಳಿ; ಇಬ್ಬರು ಯುವಕರು ಸಾವು
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on:Feb 09, 2024 | 8:12 PM

Share

ದೆಹಲಿ ಫೆಬ್ರುವರಿ 08: ದೆಹಲಿಯ(Delhi) ನಜಾಫ್‌ಗಢದಲ್ಲಿ (najafgarh) ಸಲೂನ್‌ನಲ್ಲಿ ಶುಕ್ರವಾರ ನಡೆದ ಗುಂಡಿನ ದಾಳಿಯಲ್ಲಿ(Firing) ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ. ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸ್ ತಂಡ ಗುಂಡು ತಗುಲಿ ಗಾಯಗೊಂಡಿದ್ದ ಇಬ್ಬರು ಯುವಕರನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಘಟನೆಯ ಸಿಸಿಟಿವಿ ದೃಶ್ಯಾವಳಿ ಕೂಡ ಹೊರಬಿದ್ದಿದೆ. ಇದರಲ್ಲಿ ಆರೋಪಿ ಯುವಕನ ಮೇಲೆ ಗುಂಡು ಹಾರಿಸುತ್ತಿರುವುದು ಕಂಡು ಬಂದಿದೆ.

ಪೊಲೀಸರ ಪ್ರಕಾರ, ನಜಾಫ್‌ಗಢ್ ಪೊಲೀಸ್ ಠಾಣೆಯಲ್ಲಿ ಪಿಸಿಆರ್ ಕರೆ ಬಂದಿದ್ದು, ಪಿಲ್ಲರ್ ನಂಬರ್ 80 ರ ಇಂದ್ರ ಪಾರ್ಕ್‌ನಲ್ಲಿರುವ ಸಲೂನ್‌ನಲ್ಲಿ ಹುಡುಗನಿಗೆ ಗುಂಡು ಹಾರಿಸಲಾಗಿದೆ ಎಂದು ಕರೆ ಮಾಡಿದವರು ತಿಳಿಸಿದ್ದಾರೆ. ಇದಲ್ಲದೇ ಗುಂಡು ತಗುಲಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೋಹನ್ ಗಾರ್ಡನ್ ಪೊಲೀಸ್ ಠಾಣೆಗೆ ಮಾಹಿತಿ ಲಭಿಸಿದೆ.

ಖಚಿತ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕಾಗಮಿಸಿದಾಗ ಸೋನು ಮತ್ತು ಆಶಿಶ್ ಎಂಬ ಇಬ್ಬರು ಯುವಕರಿಗೆ ಗುಂಡು ತಗುಲಿದ್ದು, ಆಸ್ಪತ್ರೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ. ಪೊಲೀಸರು ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಲು ಎಫ್‌ಎಸ್‌ಎಲ್ ತಂಡಗಳನ್ನು ನಿಯೋಜಿಸಲಾಗಿದೆ.

ಜೈತ್‌ಪುರದಲ್ಲಿ ಮಹಿಳೆಯನ್ನು ಗುಂಡಿಕ್ಕಿ ಹತ್ಯೆ

ಇದಕ್ಕೂ ಮುನ್ನ ಅಕ್ಟೋಬರ್ 24 ರಂದು ದೆಹಲಿಯ ಜೈತ್‌ಪುರ ಪ್ರದೇಶದಲ್ಲಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು 24 ವರ್ಷದ ಮಹಿಳೆಯನ್ನು ಆಕೆಯ ಮನೆಯಲ್ಲೇ ಗುಂಡಿಕ್ಕಿ ಕೊಂದ ಘಟನೆ ನಡೆದಿತ್ತು. ಇಬ್ಬರು ಮುಸುಕುಧಾರಿಗಳು ಮಹಿಳೆಯ ಮನೆಗೆ ನುಗ್ಗಿ ಆಕೆಯನ್ನು ಕೊಂದಿದ್ದಾರೆ ಎನ್ನಲಾಗಿದೆ. ಮಹಿಳೆಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದರು.

ಇದನ್ನೂ ಓದಿ: ದೆಹಲಿ: ಗೋಕುಲಪುರಿ ಮೆಟ್ರೋ ನಿಲ್ದಾಣದ ಒಂದು ಭಾಗ ಕುಸಿತ, 4 ಮಂದಿಗೆ ಗಂಭೀರ ಗಾಯ

ಗೋವಿಂದಪುರಿ ಹುಕ್ಕಾ ಬಾರ್‌ನಲ್ಲಿ ಅಪ್ರಾಪ್ತ ಬಾಲಕನನ್ನು ಗುಂಡಿಕ್ಕಿ ಹತ್ಯೆ

ಮೇ 9, 2023 ರಂದು ನಡೆದ ಮತ್ತೊಂದು ಘಟನೆಯಲ್ಲಿ, ದೆಹಲಿಯ ಗೋವಿಂದಪುರಿ ಪ್ರದೇಶದ ಹುಕ್ಕಾ ಬಾರ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಅಪ್ರಾಪ್ತ ಬಾಲಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇದೇ ಘಟನೆಯಲ್ಲಿ ಇನ್ನೊಬ್ಬ ವ್ಯಕ್ತಿಗೆ ಗಾಯಗಳಾಗಿವೆ. ಘಟನೆ ನಡೆದಾಗ ಏಳರಿಂದ ಎಂಟು ಹುಡುಗರು ಕೊಲೆಯಾದ ಸ್ಥಳದಲ್ಲಿ ಹಾಜರಿದ್ದರು ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಆದರೆ, ಕೊಲೆಗೆ ನಿಖರ ಕಾರಣ ಪತ್ತೆಯಾಗಿಲ್ಲ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:09 pm, Fri, 9 February 24

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ