ಪ್ರವಾಸಿ ವೀಸಾ ಕಾಯ್ದೆ ಉಲ್ಲಂಘನೆ, ಐವರು ವಿದೇಶಿ ತಬ್ಲಿಘಿಗಳಿಗೆ ಶಿಕ್ಷೆ

ಬೆಂಗಳೂರು: ಪ್ರವಾಸಿ ವೀಸಾ ಕಾಯ್ದೆ ಉಲ್ಲಂಘನೆ ಪ್ರಕರಣದಲ್ಲಿ ತಪ್ಪೊಪ್ಪಿಕೊಂಡ ಐವರು ವಿದೇಶಿ ತಬ್ಲಿಘಿಗಳಿಗೆ ಕೋರ್ಟ್​ ಶಿಕ್ಷೆ ವಿಧಿಸಿದೆ. 27 ದಿನ ಜೈಲು ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿ ಬೆಂಗಳೂರಿನ ACMM ಕೋರ್ಟ್ ಆದೇಶಿಸಿದೆ. ಇಂಗ್ಲೆಂಡ್, ಫ್ರಾನ್ಸ್, ಕೀನ್ಯಾದ ತಲಾ ಒಬ್ಬರು ಹಾಗೂ ಕಜಕಿಸ್ತಾನದ ಇಬ್ಬರು ವಿದೇಶದಿಂದ ದೆಹಲಿಯ ಮೂಲಕ ಬೆಂಗಳೂರಿಗೆ ಬಂದಿದ್ದರು. ಅಲ್ಲದೆ ಜಮಾತ್ ಧರ್ಮ ಪ್ರಚಾರದಲ್ಲಿ ಇವರು ಪಾಲ್ಗೊಂಡಿದ್ದರು. ಈ ಸಂಬಂಧ ಕುಮಾರಸ್ವಾಮಿ ಲೇಔಟ್ ಪೊಲೀಸರು ಕೇಸ್ ದಾಖಲಿಸಿದ್ದರು. ವಿದೇಶಿ ತಬ್ಲೀಗಿಗಳು […]

ಪ್ರವಾಸಿ ವೀಸಾ ಕಾಯ್ದೆ ಉಲ್ಲಂಘನೆ, ಐವರು ವಿದೇಶಿ ತಬ್ಲಿಘಿಗಳಿಗೆ ಶಿಕ್ಷೆ
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​ Edited By:

Updated on: Jun 25, 2020 | 2:23 PM

ಬೆಂಗಳೂರು: ಪ್ರವಾಸಿ ವೀಸಾ ಕಾಯ್ದೆ ಉಲ್ಲಂಘನೆ ಪ್ರಕರಣದಲ್ಲಿ ತಪ್ಪೊಪ್ಪಿಕೊಂಡ ಐವರು ವಿದೇಶಿ ತಬ್ಲಿಘಿಗಳಿಗೆ ಕೋರ್ಟ್​ ಶಿಕ್ಷೆ ವಿಧಿಸಿದೆ. 27 ದಿನ ಜೈಲು ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿ ಬೆಂಗಳೂರಿನ ACMM ಕೋರ್ಟ್ ಆದೇಶಿಸಿದೆ.

ಇಂಗ್ಲೆಂಡ್, ಫ್ರಾನ್ಸ್, ಕೀನ್ಯಾದ ತಲಾ ಒಬ್ಬರು ಹಾಗೂ ಕಜಕಿಸ್ತಾನದ ಇಬ್ಬರು ವಿದೇಶದಿಂದ ದೆಹಲಿಯ ಮೂಲಕ ಬೆಂಗಳೂರಿಗೆ ಬಂದಿದ್ದರು. ಅಲ್ಲದೆ ಜಮಾತ್ ಧರ್ಮ ಪ್ರಚಾರದಲ್ಲಿ ಇವರು ಪಾಲ್ಗೊಂಡಿದ್ದರು. ಈ ಸಂಬಂಧ ಕುಮಾರಸ್ವಾಮಿ ಲೇಔಟ್ ಪೊಲೀಸರು ಕೇಸ್ ದಾಖಲಿಸಿದ್ದರು. ವಿದೇಶಿ ತಬ್ಲೀಗಿಗಳು 27 ದಿನ ನ್ಯಾಯಾಂಗ ಬಂಧನದಲ್ಲಿದ್ದರು.

Published On - 2:20 pm, Thu, 25 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us