Bengaluru News: ಅಪಾಯಕಾರಿ ಚಾಲನೆ ಹಾಗೂ ವ್ಹೀಲಿಂಗ್​ನಲ್ಲಿ ತೊಡಗಿದ್ದ ಐವರ ಸೆರೆ

ಬೆಂಗಳೂರು ಪಶ್ಚಿಮ ವಿಭಾಗದ ಸಂಚಾರಿ ಪೊಲೀಸರು ಐದು ಮಂದಿಯನ್ನು ಸೆರೆ ಹಿಡಿದಿದ್ದಾರೆ. ಕೆಂಗೇರಿ, ಬ್ಯಾಟರಾಯನಪುರ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಕೆಂಗೇರಿ 4, ಬ್ಯಾಟರಾಯನಪುರ ಠಾಣೆಯಲ್ಲಿ 1 ಕೇಸ್ ದಾಖಲು ಮಾಡಲಾಗಿದೆ.

Bengaluru News: ಅಪಾಯಕಾರಿ ಚಾಲನೆ ಹಾಗೂ ವ್ಹೀಲಿಂಗ್​ನಲ್ಲಿ ತೊಡಗಿದ್ದ ಐವರ ಸೆರೆ
ಸಾಂದರ್ಭಿಕ ಚಿತ್ರ
Follow us
| Updated By: ganapathi bhat

Updated on:Jul 25, 2021 | 8:58 PM

ಬೆಂಗಳೂರು: ಅಪಾಯಕಾರಿ ಚಾಲನೆ ಹಾಗೂ ವ್ಹೀಲಿಂಗ್​ನಲ್ಲಿ ತೊಡಗಿದ್ದ ಐವರನ್ನು ಬಂಧಿಸಲಾಗಿದೆ. ಬೆಂಗಳೂರು ಪಶ್ಚಿಮ ವಿಭಾಗದ ಸಂಚಾರಿ ಪೊಲೀಸರು ಐದು ಮಂದಿಯನ್ನು ಸೆರೆ ಹಿಡಿದಿದ್ದಾರೆ. ಕೆಂಗೇರಿ, ಬ್ಯಾಟರಾಯನಪುರ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಕೆಂಗೇರಿ 4, ಬ್ಯಾಟರಾಯನಪುರ ಠಾಣೆಯಲ್ಲಿ 1 ಕೇಸ್ ದಾಖಲು ಮಾಡಲಾಗಿದೆ.

ಯುವಜನರು ದ್ವಿಚಕ್ರ ವಾಹನಗಳನ್ನು ಹಿಡಿದು ಅಪಾಯಕಾರಿ ರೀತಿಯಲ್ಲಿ ವಾಹನ ಚಲಾಯಿಸುವುದು, ವ್ಹೀಲಿಂಗ್ ನಡೆಸುವುದು ಕೆಲವೆಡೆ ಕಂಡುಬಂದಿತ್ತು. ವಾರಾಂತ್ಯಗಳಲ್ಲಿ, ಫ್ಲೈ ಓವರ್ ರಸ್ತೆ ಮೇಲೆ, ಅಷ್ಟೇ ಅಲ್ಲದೆ ಸಹಜ ಟ್ರಾಫಿಕ್ ಇರುವ ಸಂದರ್ಭದಲ್ಲಿ ನಗರದ ರಸ್ತೆಗಳಲ್ಲೂ ಹೀಗೆ ಕೆಲ ಯುವಕರು ಬೇಜಾವಾಬ್ದಾರಿಯುತ ನಡವಳಿಕೆ ತೋರುತ್ತಿದ್ದರು. ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ನಗರ ಪೊಲೀಸರು ಮುಂದಾಗಿದ್ದಾರೆ. ಇದೀಗ ಐದು ಮಂದಿಯನ್ನು ಸೆರೆ ಹಿಡಿಯಲಾಗಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಹಳಿ ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ ದಂಪತಿ ದುರ್ಮರಣ ಹಳಿ ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ ದಂಪತಿ ದುರ್ಮರಣವನ್ನಪ್ಪಿದ ಘಟನೆ ನಗರದ ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಭದ್ರಪ್ಪ ಲೇಔಟ್​ನಲ್ಲಿ ಈ ಅಪಘಾತ ಸಂಭವಿಸಿದೆ. ಬಿಡದಿ ಮೂಲದ 40 ವರ್ಷ ವಯಸ್ಸಿನ ಹರೀಶ್ ಹಾಗೂ 30 ವರ್ಷದ ಮಂಗಳಾ ಮೃತರು. ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.

ದಂಪತಿ ತಳ್ಳುವಗಾಡಿಯಲ್ಲಿ ಫ್ಯಾನ್ಸಿ ವಸ್ತುಗಳ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮೃತ ಹರೀಶ್ ಅಂಗವಿಕಲರಾಗಿದ್ದಾರೆ. ರೈಲ್ವೇ ಹಳಿ ದಾಟುವಾಗ ಈ ದುರ್ಘಟನೆ ಸಂಭವಿಸಿದೆ. ರೈಲು ಬರುವುದು ಗಮನಿಸದೆ ಟ್ರಾಕ್ ದಾಟಿರುವುದರಿಂದ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಎರಡು ಮೃತದೇಹಗಳನ್ನು ಬೋರಿಂಗ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ: ಹಳಿ ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ ದಂಪತಿ ದುರ್ಮರಣ; ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್

Landslide in Himachal Pradesh ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ, ಮುರಿದು ಬಿತ್ತು ಸೇತುವೆ: 9 ಪ್ರವಾಸಿಗರು ಸಾವು

(Five persons Arrested for Wheeling Dangerous Driving in Bangalore)

Published On - 8:38 pm, Sun, 25 July 21

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ